AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಮುಸಿಯಾ ಉಪಟಳ; ವಾನರನನ್ನು ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ

ಮುಸಿಯಾದಿಂದ ಉಂಟಾದ ಸಮಸ್ಯೆ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಯಿತು. ಇಲಾಖೆಯ ಐವರು ಅಧಿಕಾರಿಗಳ ತಂಡ, ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮುಸಿಯಾ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆಯಲ್ಲಿ ಮುಸಿಯಾ ಉಪಟಳ; ವಾನರನನ್ನು ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ
ಮುಸಿಯಾ ಸೆರೆ ಹಿಡಿದ ದೃಶ್ಯ
preethi shettigar
|

Updated on: May 04, 2021 | 10:57 AM

Share

ದಾವಣಗೆರೆ: ಕಳೆದ ಒಂದು ತಿಂಗಳಿಂದ ಜಿಲ್ಲೆಯಲ್ಲಿ ಮುಸಿಯಾವೊಂದರ ಕಾಟ ಹೆಚ್ಚಾಗಿತ್ತು. ಇದರ ಉಪಟಳಕ್ಕೆ ಇದುವರೆಗೆ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಮನೆಯಿಂದ ಹೊರ ಬಂದವರ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸುತಿತ್ತು. ಕೆಲವರು ಇದರಿಂದ ತಪ್ಪಿಸಿಕೊಂಡು ಹೋಗಲು ಹರಸಾಹಸಪಟ್ಟ ಸಾಕಷ್ಟು ನಿದರ್ಶನಗಳು ಇವೆ. ಸದ್ಯ ಹೊನ್ನಾಳಿ ಜನರ ನಿದ್ದೆ ಕೆಡಿಸಿದ್ದ ಮುಸಿಯಾವನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಗ್ರಾಮದಲ್ಲಿ ಮುಸಿಯಾ ಉಪಟಳಕ್ಕೆ ಹೆದರಿದ ಜನ ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸುತ್ತಿರಲಿಲ್ಲ. ಅಲ್ಲದೇ ಹುಚ್ಚಾಟ ನಡೆಸುತ್ತಿದ್ದ ಮುಸಿಯಾವನ್ನು ಹಿಡಿಯುವಂತೆ ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿದ್ದರು. ಆದರೆ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚಾಗುತ್ತಿತ್ತು.

ಮುಸಿಯಾದಿಂದ ಉಂಟಾದ ಸಮಸ್ಯೆ ಬಗ್ಗೆ ನಂತರ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಯಿತು. ಇಲಾಖೆಯ ಐವರು ಅಧಿಕಾರಿಗಳ ತಂಡ, ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮುಸಿಯಾ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ಈ ಕಾರ್ಯಾಚರಣೆ ಅಷ್ಟು ಸುಲಭವಾಗಿರಲಿಲ್ಲ ಎನ್ನುವುದು ಮಾತ್ರ ನಿಜ. ಅರಣ್ಯ ಇಲಾಖೆಯ ಸಿಬ್ಬಂದಿ ಜೀವಸಹಿತವಾಗಿ ಈ ಮುಸಿಯಾವನ್ನು ಹಿಡಿಯಲು ಬೋನು ಸಮೇತ ಬಂದಿದ್ದರು. ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಮರಗಳಲ್ಲಿ ನೆಗೆಯುತ್ತಿದ್ದ ಮುಸಿಯಾ ಅರಣ್ಯ ಇಲಾಖೆಯ ಅಧಿಕಾರಿಗಳು ಬೆವರು ಸುರಿಸುವಂತೆ ಮಾಡಿತು. ಕೊನೆಗೆ ಅರವಳಿಕೆ ತಜ್ಞರು ಮದ್ದನ್ನು ಮುಸಿಯಾಕ್ಕೆ ಚುಚ್ಚಿದ್ದು, ಅದರ ಪ್ರಜ್ಞೆ ತಪ್ಪಿಸಿ ಮುಸಿಯಾವನ್ನು ಹಿಡಿಯಲಾಯಿತು. ಬಳಿಕ ಮುಸಿಯಾವನ್ನು ಶಿವಮೊಗ್ಗದ ಲಯನ್ ಸಫಾರಿಗೆ ಕಳುಹಿಸಿಕೊಡಲಾಯಿತು.

ಕಳೆದ ಐದು ತಿಂಗಳ ಹಿಂದೆಯೂ ಹೊನ್ನಾಳಿ ಪಟ್ಟಣದಲ್ಲಿ ಇದೇ ರೀತಿಯ ಕೋತಿ ಕಾಟಕೊಡುತಿತ್ತು. ಪುರಸಭೆ ಅಧಿಕಾರಿಗಳು, ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯರ ಮೇಲೂ ದಾಳಿ ಮಾಡಿದ್ದ ಕೋತಿ 40 ಜನರಿಗೆ ಕಚ್ಚಿ ಗಾಯಗೊಳಿಸಿತ್ತು. ಆ ಕೋತಿಯನ್ನು ಸಹ ಇದೇ ತಜ್ಞರ ತಂಡ ಹಿಡಿದಿತ್ತು.

ಇದನ್ನೂ ಓದಿ:

ಚಿಕ್ಕಬಳ್ಳಾಪುರದ ವಿದುರಾಶ್ವತ್ಥದಲ್ಲಿ ಕೋತಿಗಳ ಉಪಟಳ: ಓಡಿಸುವುದಕ್ಕೆ ಮಾರುವೇಷ ಧರಿಸಿದ ಅರಣ್ಯ ಸಿಬ್ಬಂದಿ

Viral Video: ಕೋತಿ ತರಕಾರಿ ಕತ್ತರಿಸುವ ಚೆಂದ..; ಮಹಿಳೆಗೆ ಸಹಾಯ ಮಾಡುವ ಮಂಗಕ್ಕೆ ಮನಸೋತ ನೆಟ್ಟಿಗರು !

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?