Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಗಿರಿ ಲಾಕಪ್​ ಡೆತ್: ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ಸಿಐಡಿ ಹೆಗಲಿಗೆ

ದಾವಣಗೆರೆಯ ಚನ್ನಗಿರಿ ಪಟ್ಟಣದಲ್ಲಿ ಲಾಕಪ್​ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದರ ಬೆನ್ನಲ್ಲೇ ಇಡಿ ಪ್ರಕರಣವನ್ನು ಸಿಐಡಿ ಹೆಗಲಿಗೆ ವಹಿಸಲಾಗಿದೆ. ಶೀಘ್ರವೇ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ‌ಪ್ರಶಾಂತ್‌ ಹೇಳಿದ್ದಾರೆ. ಸದ್ಯ 25 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದೇವೆ ಎಂದರು.

ಚನ್ನಗಿರಿ ಲಾಕಪ್​ ಡೆತ್: ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ಸಿಐಡಿ ಹೆಗಲಿಗೆ
ಚನ್ನಗಿರಿ ಲಾಕಪ್​ ಡೆತ್, ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ಸಿಐಡಿ ಹೆಗಲಿಗೆ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:May 26, 2024 | 3:57 PM

ದಾವಣಗೆರೆ, ಮೇ 26: ಚನ್ನಗಿರಿ (channagiri) ಠಾಣೆಯಲ್ಲಿ ಲಾಕಪ್​ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣವನ್ನು ಇದೀಗ ಸಿಐಡಿ ಹಗಲಿಗೆ ವಹಿಸಲಾಗಿದೆ. ಶೀಘ್ರವೇ ಸಿಐಡಿ (CID) ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ‌ಪ್ರಶಾಂತ್​ ಮಾತನಾಡಿದ್ದು, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ. ಇಷ್ಟರಲ್ಲಿಯೇ ಸಿಐಡಿ ಅಧಿಕಾರಿಗಳು ಪ್ರಕರಣವನ್ನ ತಮ್ಮ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ 25 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದೇವೆ. ಬಂಧಿತರು ಚನ್ನಗಿರಿ, ಹೊನ್ನೆಬಾಗಿ, ನಲ್ಲೂರು ಗ್ರಾಮಗಳ ನಿವಾಸಿಗಳು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 353, 307ರಡಿ ಕೇಸ್ ದಾಖಲಾಗಿದೆ. ನಿಯಮದಂತೆ ಜಡ್ಜ್‌ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. 3 ದಿನದಲ್ಲಿ ಪೋಸ್ಟ್‌ ಮಾರ್ಟಂ ವರದಿ ಬರಲಿದ್ದು ಸತ್ಯಾಂಶ ತಿಳಿಯುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚನ್ನಗಿರಿ ಪೊಲೀಸ್​ ಠಾಣೆ ಮೇಲೆ ದಾಳಿ: ಶಾಂತಿ ಕಾಪಾಡುವಂತೆ DYSP ಕೈಮುಗಿದರೂ ಕೇಳದ ಕಿಡಿಗೇಡಿಗಳು, ಅಸಹಾಯಕರಾದ ಪೊಲೀಸರು

ಪ್ರಕರಣದ ಬಗ್ಗೆ ಮಾಹಿತಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಡಿವೈಎಸ್​ಪಿ ಪ್ರಶಾಂತ ಮುನ್ನೊಳ್ಳಿ ಮಾಹಿತಿ ಪಡೆದುಕೊಂಡಿದ್ದಾರೆ. ಕಲ್ಲು ತೂರಾಟ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದು, ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ​

ಚನ್ನಗಿರಿ ಠಾಣೆಯಲ್ಲಿ 6 ಪ್ರಕರಣ ದಾಖಲು

ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸ್ ನವರಿಗೆ ಗಾಯಪಡಿಸಿ ಹಾಗೂ ಸರ್ಕಾರಿ ಸ್ವತ್ತುಗಳನ್ನು ದ್ವಂಸಗೊಳಿಸಿ ಕೃತ್ಯಕ್ಕೆ ಸಂಬಂಧಪಟ್ಟಂತೆ ಚನ್ನಗಿರಿ ಠಾಣೆಯಲ್ಲಿ 6 ಪ್ರಕರಣಗಳು ದಾಖಲಾಗಿವೆ. ಘಟನೆ ಹಿನ್ನೆಲೆ ಸಂಪೂರ್ಣ ನಿಗಾವಹಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಐದು ತಂಡಗಳನ್ನು ರಚನೆ ಮಾಡಿದ್ದ ಪೊಲೀಸ್​​ ಸಿಸಿ ಸಿಸಿ ಕ್ಯಾಮರಾ, ಮೊಬೈಲ್ ಚಿತ್ರೀಕರಣದ ವಿಡಿಯೋ, ಸಾರ್ವಜನಿಕರು ಚಿತ್ರಿಕರಿಸಿದ ವಿಡಿಯೋಗಳನ್ನು ಪರಿಶೀಲಿಸುವ ಮೂಲಕ ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದರು. ಆ ಮೂಲಕ 40 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಪತ್ತೆ ಮಾಡಿದ್ದರು.

ಮಟ್ಕಾ ಆಡಿಸ್ತಿದ್ದ ಆರೋಪದಲ್ಲಿ ಚನ್ನಗಿರಿ ಪೊಲೀಸರು ಆದಿಲ್ ಎಂಬಾತನನ್ನ ವಶಕ್ಕೆ ಪಡೆದಿದ್ದರು. ಕುಸಿದು ಬಿದ್ದಿದ್ದ ಆದಿಲ್​ನನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಷ್ಟರಲ್ಲೇ ಆದಿಲ್ ಮೃತಪಟ್ಟಿದ್ದ. ಉದ್ವಿಗ್ನಗೊಂಡ ಮೃತನ ಸಂಬಂಧಿಕರು ಮತ್ತು ನೂರಾರು ಜನ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಇದನ್ನೂ ಓದಿ: ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಲಾಕಪ್ ಡೆತ್​​​​ ಕೇಸ್​ಗೆ ಟ್ವಿಸ್ಟ್: ಉಲ್ಟಾ ಹೊಡೆದ ಆದಿಲ್​ ತಂದೆ

ಇದಕ್ಕೂ ಮೊದಲು ಡಿವೈಎಸ್​ಪಿ ಪ್ರಶಾಂತ್ ಕೈಮುಗಿದು ಮನವಿ ಮಾಡಿಕೊಂಡಿದ್ದರು. ಪೋಸ್ಟ್ ಮಾರ್ಟಂ ರಿಪೋರ್ಟ್ ಬರೋವರೆಗೆ ಕಾಯಿರಿ ಅಂದಿದ್ದರು. ಆದರೆ ಉದ್ರಿಕ್ತರ ಕೋಪದ ಮುಂದೆ ಪೊಲೀಸರು ಅಸಹಾಯಕರಾಗುವಂತಾಯ್ತು.

ಇದು ನಿಮ್ಮದೇ ಆಸ್ತಿ ಅಂತಾ ಡಿವೈಎಸ್​ಪಿ ಪ್ರಶಾಂತ್ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದ್ದರು. ಆದ್ರೆ ಉದ್ರಿಕ್ತರು ಪೊಲೀಸ್ ಅಧಿಕಾರಿಯ ಮನವಿಗೆ ಕ್ಯಾರೆ ಅನ್ನಲಿಲ್ಲ. ಇದೀಗ ಕೈಮಗಿದು ಬೇಡಿಕೊಂಡಿದ್ದ ಡಿವೈಎಸ್​ಪಿ ಪ್ರಶಾಂತ್ ಅಮಾನತಾಗಿದ್ದಾರೆ. ಮೂವರು ಪೊಲೀಸ್ ಸಿಬ್ಬಂದಿ ಕೂಡ ಸಸ್ಪೆಂಡ್ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:22 pm, Sun, 26 May 24

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ