AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ‌: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ‌ ಪಾದ್ರಿ ಬಂಧನ

ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಜಯನಗರದ ಚರ್ಚ್‌ನ ಪಾದ್ರಿ ರಾಜಶೇಖರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪಾದ್ರಿ ರಾಜಶೇಖರ್​ನನ್ನು ಖಚಿತ ಮಾಹಿತಿ, ಮೊಬೈಲ್‌ ಲೊಕೇಷನ್ ಆಧರಿಸಿ ಹೈದರಾಬಾದ್‌ನಲ್ಲಿ ಕೆಟಿಜೆ ನಗರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ದಾವಣಗೆರೆ‌: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ‌ ಪಾದ್ರಿ ಬಂಧನ
ಚರ್ಚ್‌ ಪಾದ್ರಿ ರಾಜಶೇಖರ್
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Apr 04, 2024 | 9:08 PM

Share

ದಾವಣಗೆರೆ, ಏಪ್ರಿಲ್​ 04: ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಜಯನಗರದ ಚರ್ಚ್‌ನ ಪಾದ್ರಿ (priest) ರಾಜಶೇಖರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪಾದ್ರಿ ರಾಜಶೇಖರ್​ನನ್ನು ಖಚಿತ ಮಾಹಿತಿ, ಮೊಬೈಲ್‌ ಲೊಕೇಷನ್ ಆಧರಿಸಿ ಹೈದರಾಬಾದ್‌ನಲ್ಲಿ ಕೆಟಿಜೆ ನಗರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಚರ್ಚ್‌ಗೆ ಬರುತ್ತಿದ್ದ ಮಹಿಳೆಯೊಬ್ಬರು ಪಾದ್ರಿ ವಿರುದ್ಧ ದೂರು ನೀಡಿದ ಹಿನ್ನೆಲೆ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನದ ಭೀತಿಯಿಂದ ಪಾದ್ರಿ ರಾಜಶೇಖರ್ ತಲೆಮರೆಸಿಕೊಂಡಿದ್ದ.

ಈ ಹಿಂದೆ ಪುತ್ರಿಯೇ ಪಾದ್ರಿ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಅನ್ಯ ಸ್ತ್ರೀಯರ ಜೊತೆ ಅಸಭ್ಯವಾಗಿ ‌ವರ್ತಿಸುತ್ತಾರೆಂದು ಆರೋಪಿಸಿದ್ದರು. ಜಯನಗರ ಚರ್ಚ್​ನ 58 ವಯಸ್ಸಿನ ಪಾದ್ರಿ ಪಿ ರಾಜಶೇಖರ್ ಮಗಳ ಆರೋಪಕ್ಕೆ ತಂದೆ ಗುರಿಯಾಗಿದ್ದ. ಇದಷ್ಟೆ ಅಲ್ಲಾ ಚರ್ಚ್​​ಗೆ ಬರುವ ಆರೇಳು ಜನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಸಹ ಮಾಡಿದ್ದಾರೆ ಎಂದು ಮಗಳ ಆರೋಪಿಸಿದ್ದರು.

ಇದನ್ನೂ ಓದಿ: ನನ್ನ ತಂದೆ ಚರ್ಚ್​ಗೆ ಬರುವ ಆರೇಳು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಗಿದ್ದಾರೆ; ಸ್ವಂತ ಮಗಳಿಂದಲೇ ಪಾದ್ರಿ ವಿರುದ್ಧ ಗಂಭೀರ ಆರೋಪ

ನನ್ನ ತಂದೆ ಈಗ ನನಗಿಂತ ಚಿಕ್ಕ ವಯಸ್ಸಿನ ಯುವತಿಯನ್ನು ಮದುವೆ ಯಾಗಲು ಮುಂದಾಗುತ್ತಿದ್ದಾರೆ. ನನಗೆ 33 ವರ್ಷ, ಮದುವೆಯಾಗುವ ಹುಡುಗಿಗೆ 30 ವರ್ಷ, ಹಾಗಾಗಿ ನನ್ನ ವಿರೋಧವಿದೆ. ಪಾದ್ರಿ ಹಲವಾರು ವರ್ಷಗಳಿಂದ ಈ ಕೃತ್ಯ ಮಾಡಿಕೊಂಡು ಬಂದಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಪಾಸ್ಟರ್ ಆಸೋಷಿಯೇಷನ್​​ನಿಂದ ರಾಜಶೇಖರ್ ನಡೆಗೆ ಖಂಡನೆ ವ್ಯಕ್ತವಾಗಿತ್ತು.

ಕ್ರಿಶ್ಚಿಯನ್ ಪೋರಂ ಪಾರ್ ಹ್ಯೂಮನ್ ರೈಟ್ಸ್ಟ್ ಮತ್ತು ದಾವಣಗೆರೆ ಜಿಲ್ಲಾ ಕ್ರಿಶ್ಚಿಯನ್ ವೆಲಪೆರ್ ಆಸೋಷಿಯೇಶನ್​ನಿಂದಲು ಖಂಡನೆ ವ್ಯಕ್ತವಾಗಿತ್ತು. 6 ಜನ ಮಹಿಳೆಯರಿಗೆ ಹೀಗೆ ಮಾಡಿದ್ದಾರೆಂದು ಸ್ವತಃ ಅವರ ಮಗಳಿಂದಲೇ ಗಂಭೀರ ಆರೋಪ ಮಾಡಲಾಗಿದೆ. ಪಾದ್ರಿ ರಾಜಶೇಖರ್ ವರ್ತನೆ ಬಗ್ಗೆ ಅವರ ಮಗಳ ಬಳಿ ಸಂಕಟ ತೋಡಿಕೊಂಡಿದ್ದ ಮಹಿಳೆಯರು. ಓರ್ವ ಶಿಕ್ಷಕಿಗೂ ಅನ್ಯಾಯ ಮಾಡಿದ್ದಾರೆ. ಅವರ ಬಾಳಲ್ಲೂ ಆಟ ಆಡಿದ್ದಾರೆ. ಆ ಶಿಕ್ಷಕಿಯ ಸರ್ವಿಸ್ ರಿಜಿಸ್ಟರ್​ನಲ್ಲಿ ನಾಮೀನಿ ಆಗಿ ರಾಜಶೇಖರ್ ಹೆಸರು ಇರುವ ದಾಖಲೆ ಬಿಡುಗಡೆ ಎಂಬುದು ಮಗಳ ಆರೋಪವಾಗಿತ್ತು.

ಇದನ್ನೂ ಓದಿ: ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ರಸ್ತೆ ಅಪಘಾತದಲ್ಲಿ ನಾಲ್ವರ ಸಾವು

ಪಾದ್ರಿ ರಾಜಶೇಖರ್ ವಿರುದ್ದ ದೂರು ಕೊಡುವುದಕ್ಕೆ ದಾವಣಗೆರೆ ಕ್ರಿಶ್ಚಿಯನ್ ಸಂಘಟನೆಗಳು ಮುಂದಾಗಿವೆ. ದಲಿತ ಮಹಿಳೆಯನ್ನು ಆಮೀಷ ಒಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿಕೊಂಡು ಮದುವೆಯಾಗುತ್ತಿದ್ದಾನೆ ಎಂದು ಬಂಜಾರ ಸಮಾಜ ಕೂಡ ಆರೋಪ ಮಾಡಿತ್ತು. ಚರ್ಚ್​​ನ ಮುಖ್ಯಸ್ಥ ರಾಗಿದ್ದುಕೊಂಡು ಇಂತಹ ವರ್ತನೆಗಳನ್ನು ಕ್ರಿಶ್ಚಿಯನ್ ಸಮಾಜ ಸಹಿಸುವುದಿಲ್ಲ. ಮಹಿಳೆ ಜೀವನದ ಜೊತೆ ಆಟವಾಡುವ ರಾಜಶೇಖರ್ ಮೇಲೆ ಕ್ರಮಕ್ಕೆ ಒತ್ತಾಯಿಸಿ ಕ್ರಿಶ್ಚಿಯನ್ ಸಂಘಟನೆಗಳು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದವು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:06 pm, Thu, 4 April 24

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು