AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಹರ ಪಂಚಮಸಾಲಿ ಮಠದ ಟ್ರಸ್ಟ್​​ನಿಂದ 10 ಕೋಟಿ ರೂ. ಅವ್ಯವಹಾರ ಆರೋಪ: ಡಿಸಿಗೆ ದೂರು

ಹರಿಹರ ಪಂಚಮಸಾಲಿ ಮಠದ ಟ್ರಸ್ಟ್ ಸರ್ಕಾರಿ ಅನುದಾನದಲ್ಲಿ 10 ಕೋಟಿ ರೂಪಾಯಿ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿ 'ಮಠದ ಲೆಕ್ಕಕೊಡಿ ಚಳುವಳಿ ಸಮಿತಿ' ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ. ಕಟ್ಟಡ ಕಾಮಗಾರಿ ಮತ್ತು ಸ್ಥಳ ಪರಿಶೀಲನೆ ಮಾಡದೆ ಮಠದ ಕೆಲವು ಟ್ರಸ್ಟಿಗಳೊಂದಿಗೆ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಕಾಮಗಾರಿ ಪೂರ್ಣಗೊಳ್ಳದಿದ್ದರೂ ಕೇವಲ 44 ದಿನಗಳಲ್ಲಿ ಹಣ ಬಿಡುಗಡೆ ಮಾಡಿ ಸರ್ಕಾರದ ದುಡ್ಡನ್ನು ದುರುಪಯೋಗ ಮಾಡಿದ್ದಾರೆ ಎಂದು ಸಮಿತಿ ದೂರಿದೆ.

ಹರಿಹರ ಪಂಚಮಸಾಲಿ ಮಠದ ಟ್ರಸ್ಟ್​​ನಿಂದ 10 ಕೋಟಿ ರೂ. ಅವ್ಯವಹಾರ ಆರೋಪ: ಡಿಸಿಗೆ ದೂರು
ಹರಿಹರ ಮಠದ ಟ್ರಸ್ಟ್​ ವಿರುದ್ಧ ಸ್ಫೋಟಕ ಆರೋಪImage Credit source: Tv9 Kannada
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Sep 17, 2026 | 3:15 PM

Share

ದಾವಣಗೆರೆ, ಸೆಪ್ಟೆಂಬರ್​​ 17: ಹರಿಹರ ಪಂಚಮಸಾಲಿ ಮಠದ ಟ್ರಸ್ಟ್​​ನಿಂದ 10 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಮಠದ ಲೆಕ್ಕಕೊಡಿ ಚಳುವಳಿ ಸಮಿತಿ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ತನಿಖೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಮಠಕ್ಕೆ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ‌ ಇಲಾಖೆಯಿಂದ ಹತ್ತು ಕೋಟಿ, ಪಂಚಾಯತ ರಾಜ್ ಇಲಾಖೆಯಿಂದ 3 ಕೋಟಿ ಸೇರಿದಂತೆ ವಿವಿಧ ಇಲಾಖೆಗಳಿಂದ ಒಟ್ಟು 16 ಕೋಟಿ ರೂಪಾಯಿ ಹಣ ಬಂದಿದೆ. ಆದರೆ ಆ ಪೈಕಿ ಆರು ಕೋಟಿ ರೂಪಾಯಿ ಕಾಮಗಾರಿ ಆಗಿದ್ದು, ಉಳಿದ 10 ಕೋಟಿ ಹಣದಲ್ಲಿ ಏನೂ ಮಾಡಿಲ್ಲ ಎಂದು ಸಮಿತಿ ದೂರಿದೆ.

‘ಕೆಲ ಟ್ರಸ್ಟಿಗಳಿಂದ ಅನುದಾನ ದುರ್ಬಳಕೆ’

ಕಾಮಗಾರಿ ಆಧಾರದ ಮೇಲೆ ಹಣ ಬಿಡುಗಡೆ ಮಾಡಬೇಕು. ಆದರೆ ಇಲ್ಲಿ ಮಾತ್ರ ಕಟ್ಟಡವೇ ಇಲ್ಲದಿದ್ದರೂ ಹಣ ಬಿಡುಗಡೆಯಾಗಿದೆ. ಕೇವಲ 44 ದಿನಗಳಲ್ಲಿ ಹತ್ತುಕೋಟಿ ಹಣ ನೀಡಲಾಗಿದೆ. ಸರ್ಕಾರಕ್ಕೆ ತಪ್ಪು ಮಾಹಿತಿ‌ ನೀಡಿ ಅನುದಾನ ಬಳಕೆ ಪ್ರಮಾಣ ಪತ್ರ ನೀಡಲಾಗಿದ್ದು, ಸರ್ಕಾರವು ಮಠಕ್ಕೆ ನೀಡಿದ್ದ ಅನುದಾನವನ್ನು ಕೆಲವು ಟ್ರಸ್ಟಿಗಳು ತಮ್ಮ ಸ್ವಂತಕ್ಕೆ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ದುರ್ಬಳಕೆಯಾದ ಅನುದಾನವನ್ನು ಅದನ್ನು ದುರ್ಬಳಕೆ ಮಾಡಿಕೊಂಡವರಿಂದಲೇ ವಸೂಲಿ ಮಾಡಬೇಕು ಎಂದು ಲೆಕ್ಕಕೊಡಿ ಚಳುವಳಿ ಸಮಿತಿ ಆಗ್ರಹಿಸಿದೆ.

ಇದನ್ನೂ ಓದಿ: ದಾವಣಗೆರೆಯ ತುಲಾಭವನಕ್ಕೆ ಮಾರುಹೋದ ಆಕ್ಸ್‌ಫರ್ಡ್ ವಿವಿ! ತೂಕ-ಅಳತೆ ಸಾಧನಗಳ ಕುರಿತು ಉಪನ್ಯಾಸಕ್ಕೆ ಬಸವರಾಜ್ ಯಳಮಲ್ಲಿಗೆ ಆಹ್ವಾನ

ಅಧಿಕಾರಿಗಳೂ ಶಾಮೀಲು ಆರೋಪ

ಸರ್ಕಾರವು ಅನುದಾನ ಬಿಡುಗಡೆಗೆ ವಿಧಿಸಿದ ಷರತ್ತು ಮತ್ತು ನಿಬಂಧನೆಗಳನ್ನು ಅಂದಿನ ಡಿಸಿ, ಹಿಂದುಳಿದವರ ಕಲ್ಯಾಣ ಇಲಾಖೆ ಅಧಿಕಾರಿಗಳು ಗಾಳಿಗೆ ತೂರಿದ್ದಾರೆ. ಕಟ್ಟಡ ಕಾಮಗಾರಿ ಮತ್ತು ಸ್ಥಳ ಪರಿಶೀಲನೆ ಮಾಡದೆ ಮಠದ ಕೆಲವು ಟ್ರಸ್ಟಿಗಳೊಂದಿಗೆ ಶಾಮೀಲಾಗಿ, ಕಾಮಗಾರಿ ಪೂರ್ಣಗೊಳ್ಳದಿದ್ದರೂ ಕೇವಲ 44 ದಿನಗಳಲ್ಲಿ ಹಣ ಬಿಡುಗಡೆ ಮಾಡಿ ಸರ್ಕಾರದ ದುಡ್ಡನ್ನು ದುರುಪಯೋಗ ಮಾಡಿದ್ದಾರೆ ಎಂದು ಲೆಕ್ಕಕೊಡಿ ಚಳುವಳಿ ಸಮಿತಿ ಆರೋಪಿಸಿದೆ. ಮನವಿಯ ಜೊತೆಗೆ ಕೆಲ ದಾಖಲೆಗಳ ಪ್ರತಿಯನ್ನು ಸಹ ಸಮಿತಿ ಸಲ್ಲಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ