AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತೇಕ ಘಟನೆ: ವಿದ್ಯುತ್ ಪ್ರವಹಿಸಿ ಒಟ್ಟು 32 ಕುರಿಗಳು ಬಲಿ

ದಾವಣಗೆರೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಪಟ್ಟಣದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ಹರಿದು ಬಿದ್ದು 17 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ಪ್ರತೇಕ ಘಟನೆ: ವಿದ್ಯುತ್ ಪ್ರವಹಿಸಿ ಒಟ್ಟು 32 ಕುರಿಗಳು ಬಲಿ
ವಿದ್ಯುತ್ ತಂತಿ ಹರಿದು ಬಿದ್ದು ಕುರಿಗಳು ಸಾವು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 18, 2023 | 9:45 AM

Share

ದಾವಣಗೆರೆ: ಜಿಲ್ಲೆಯ ಕೂಡ್ಲಿಗಿ(Kudligi) ತಾಲೂಕಿನ ಕಾನಾಹೊಸಳ್ಳಿ ಪಟ್ಟಣದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ಹರಿದು ಬಿದ್ದು 17 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಹನುಮಜ್ಜರ ಪರಸಪ್ಪ ಎನ್ನುವವರಿಗೆ ಸೇರಿದ 13 ಕುರಿ, 2 ಟಗರು, 2 ಮೇಕೆಗಳು ಇದಾಗಿದೆ. ಇನ್ನು ಕುರಿಗಳು ಮೇಯಲು ಹೋದಾಗ ತುಂಡಾಗಿ ಬಿದ್ದು 11 ಕೆವಿ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ನಡೆದಿದೆ. ಪಕ್ಕದಲ್ಲೇ ಇದ್ದ ಪರಸಪ್ಪ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು, ಪಶು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುರಿ ಸಾಕಾಣಿಕೆಯಿಂದಲೇ ಕುರಿಗಾಹಿ ಪರಸಪ್ಪ ಅವರ ಜೀವನ ನಡೆಯುತ್ತಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಇನ್ನು ಈ ಘಟನೆ ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯುತ್ ಪ್ರವಹಿಸಿ 19 ಕುರಿಗಳ ಸಾವು

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಶ್ರೀರಂಗಾಪುರ ಗ್ರಾಮದಲ್ಲಿ ರೈತ ಮಂಜುನಾಥ್ ಎಂಬುವರಿಗೆ ಸೇರಿದ 19 ಕುರಿಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಯ ಪರಿಣಾಮ ಕುರಿ ಶೆಡ್ಡ ಪಕ್ಕದಲ್ಲಿ ಇದ್ದ ಕಂಬದಿಂದ ವಿದ್ಯುತ್ ಪ್ರವಹಿಸಿ ಈ ಘಟನೆ ನಡೆದಿದ್ದು, ಕುರಿಗಳ ಸಾವಿನಿಂದ ರೈತ ಕಂಗಾಲಾಗಿದ್ದಾನೆ. ಈ  ಘಟನೆ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಸ್ಕಾಂ‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೀದಿಗೆ ಬಂದ ಬದುಕು; ಜೀವನಕ್ಕೆ ಆದಾರವಾಗಿದ್ದ ಅಂಗಡಿ ಸುಟ್ಟು ಕರಕಲು

ಬೆಂಗಳೂರು ಗ್ರಾಮಾಂತರ: ಬೆಸ್ಕಾಂ‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವನಕ್ಕೆ ಆದಾರವಾಗಿದ್ದ ಅಂಗಡಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಹೊಸಕೋಟೆ ನಗರದ ವಿವಿ ಬಡಾವಣೆಯ ಗಂಗಮ್ಮ ಗುಡಿ ಬಳಿ ನಡೆದಿದೆ. ಕಳೆದ ಹಲವು ದಿನಗಳಿಂದ ವಿದ್ಯುತ್ ಟ್ರಾನ್ಸಪಾರ್ಮರ್ ಅಂಗಡಿ ಮುಂದೆ ವಾಲಿತ್ತು. ಇದನ್ನು ಬದಲಾವಣೆ ಮಾಡುವಂತೆ ಅಂಗಡಿ ಮಾಲೀಕರು ಸಾಕಷ್ಟು ಭಾರಿ ದೂರು ನೀಡಿದ್ದರು. ಆದ್ರೆ, ಎಷ್ಟೇ ದೂರು ನೀಡಿದ್ರು, ಅಧಿಕಾರಿಗಳು ಮಾತ್ರ ಟ್ರಾನ್ಸಫಾರ್ಮರ್ ಬದಲಾಯಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಇದರ ಪರಿಣಾಮ ಇಂದು(ಜು.18)ಮುಂಜಾನೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ:Mysore: ಜಮೀನಿಗೆ ಅಳವಡಿಸಿದ್ದ ಸೋಲಾರ್ ವಿದ್ಯುತ್ ತಂತಿಗೆ ಆನೆ ಬಲಿ: ಪ್ರಕರಣ ದಾಖಲು

ಬೆಸ್ಕಾಂ‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೀದಿಗೆ ಬಂದ ಬದುಕು

ಇನ್ನು ಟ್ರಾನ್ಸ್ ಫಾರ್ಮರ್​ನಿಂದ ಅಂಗಡಿಗೆ ಬೆಂಕಿ ಹೊತ್ತುಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ ಹಾಗೂ ವಸ್ತುಗಳು ಬೆಂಕಿಗಾಹುತಿಯಾಗಿದೆ. ಜಕ್ಕಣಚಾರಿ ಎಂಬುವವರಿಗೆ ಸೇರಿದ ಬಟ್ಟೆ ಅಂಗಡಿ ಇದಾಗಿದ್ದು, ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ‌ ನಂದಿಸಿದ್ದಾರೆ. ಘಟನೆ ಕುರಿತು ನ್ಯಾಯ ಕೊಡಿಸುವಂತೆ ನೊಂದ ಅಂಗಡಿ ಮಾಲೀಕರು ಒತ್ತಾಯಿಸುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:42 am, Tue, 18 July 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ