AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಜಮೀನು ಮಾಲೀಕರ ಬೇಜವಾಬ್ದಾರಿಗೆ ಸುಟ್ಟು ಭಸ್ಮವಾದ 600 ಅಡಕೆ ಮರಗಳು!

ಪಕ್ಕದ ಜಮೀನು ಮಾಲೀಕ ಕೊಟ್ರಪ್ಪ ಎಂಬುವರು ಕಸ ಸುಡುವುದಕ್ಕಾಗಿ ಬೆಂಕಿ ಹಚ್ಚಿದ್ದಾರೆ. ಇದೇ ಬೆಂಕಿ ವ್ಯಾಪಕವಾಗಿ ಹರಡಿ ಅಡಕೆ ತೋಟಕ್ಕೂ ಹೊತ್ತಿಕೊಂಡಿದೆ. ನಾಲ್ಕು ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ ಅಡಕೆ ಮರ ಭಸ್ಮವಾಗಿದೆ.

ದಾವಣಗೆರೆಯಲ್ಲಿ ಜಮೀನು ಮಾಲೀಕರ ಬೇಜವಾಬ್ದಾರಿಗೆ ಸುಟ್ಟು ಭಸ್ಮವಾದ 600 ಅಡಕೆ ಮರಗಳು!
ಸುಟ್ಟು ಕರಕಲಾದ ಅಡಕೆ ತೋಟ
TV9 Web
| Updated By: sandhya thejappa|

Updated on:Feb 05, 2022 | 9:28 AM

Share

ದಾವಣಗೆರೆ: ಜಮೀನು ಮಾಲೀಕರ ಬೇಜವಾಬ್ದಾರಿಗೆ ಸುಮಾರು 600 ಅಡಕೆ ಮರಗಳು (Areca Trees) ಸುಟ್ಟು ಭಸ್ಮವಾಗಿದ್ದು, ಈ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಹೀರೇಕೊಗಲೂರ ಗ್ರಾಮದಲ್ಲಿ ನಡೆದಿದೆ. ಎರಡು ಎಕರೆ ಪ್ರದೇಶದಲ್ಲಿದ್ದ ನಾಲ್ಕು ವರ್ಷದ ಅಡಕೆ ಮರಗಳು ಬೆಂಕಿಗೆ ಬಲಿಯಾಗಿವೆ. ಹೀರೇಕೊಗಲೂರ ಗ್ರಾಮದ ರುದ್ರಪ್ಪ ಎಂಬ ರೈತ ಎರಡು ಎಕರೆಯಲ್ಲಿ ಅಡಕೆ ಗಿಡ ಹಾಕಿದ್ದರು. ಗಿಡಗಳಿಗೆ ನಾಲ್ಕು ವರ್ಷ ಆಗಿತ್ತು. ಆದರೆ ಬೆಂಕಿ ತಗುಲಿ ಇದೀಗ ನಾಶವಾಗಿದೆ.

ಪಕ್ಕದ ಜಮೀನು ಮಾಲೀಕ ಕೊಟ್ರಪ್ಪ ಎಂಬುವರು ಕಸ ಸುಡುವುದಕ್ಕಾಗಿ ಬೆಂಕಿ ಹಚ್ಚಿದ್ದಾರೆ. ಇದೇ ಬೆಂಕಿ ವ್ಯಾಪಕವಾಗಿ ಹರಡಿ ಅಡಕೆ ತೋಟಕ್ಕೂ ಹೊತ್ತಿಕೊಂಡಿದೆ. ನಾಲ್ಕು ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ ಅಡಕೆ ಮರ ಭಸ್ಮವಾಗಿದೆ. ತೋಟ ನೋಡಿ ರೈತ ಕುಟುಂಬ ಕಣ್ಣೀರು ಹಾಕುತ್ತಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬರುವಷ್ಟರಲ್ಲಿ ಅಡಕೆ ಮರಗಳು ಸುಟ್ಟು ಕರಕಲಾಗಿವೆ. ಈ ಪ್ರಕರಣ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಜಾನುವಾರು ರಕ್ಷಣೆಗೆ ರೈತ ಹರಸಾಹ: ಈ ಹಿಂದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ‌ ಅವರೊಳ್ಳಿ ಗ್ರಾಮದಲ್ಲಿ ತೋಟ ಮನೆಗೆ ಬೆಂಕಿ ಬಿದ್ದಿತ್ತು. ಈ ವೇಳೆ ಜಾನುವಾರು ರಕ್ಷಣೆಗೆ ರೈತ ಹರಸಾಹಸ ಪಟ್ಟಿದ್ದರು. ಆಕಸ್ಮಿಕವಾಗಿ ಬೆಂಕಿ ಬಿದ್ದು ತೋಟದ ಮನೆ ಹತ್ತಿಕೊಂಡು ಉರಿದಿದ್ದು, ಪ್ರಾಣದ ಹಂಗು ತೊರೆದು ಜಾನುವಾರು ರಕ್ಷಣೆಗೆ ರೈತ ಹರಸಾಹಸ ಪಟ್ಟಿದ್ದರು.

ಅವರೊಳ್ಳಿ ಗ್ರಾಮದಲ್ಲಿ ತಡರಾತ್ರಿ ನವರತ್ನ ಜೋಳದ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಜೀವವನ್ನೂ ಲೆಕ್ಕಿಸದೇ ಬೆಂಕಿಯಲ್ಲಿ ನುಗ್ಗಿದ ರೈತ ಜಾನುವಾರು ರಕ್ಷಣೆ ಮಾಡಿದ್ದರು. 1 ಕರು ಬೆಂಕಿಗಾಹುತಿಯಾಗಿತ್ತು. 2 ಎಮ್ಮೆ ಹಾಗೂ 1 ಹಸುವಿಗೆ ಗಂಭೀರ ಗಾಯಗಳಾಗಿತ್ತು. ತೋಟದ ಮನೆಯಲ್ಲಿದ್ದ ಕೃಷಿ ಸಾಮಗ್ರಿಯಲ್ಲವೂ ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿತ್ತು.

ಇದನ್ನೂ ಓದಿ

ಹೃದಯಾಘಾತದಿಂದ ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್ ನಿಧನ

Statue of Equality: ಪ್ರಧಾನಿ ನರೇಂದ್ರ ಮೋದಿಯಿಂದ ಇಂದು ಸಮಾನತೆಯ ಪ್ರತಿಮೆ ಅನಾವರಣ; ವಿವರ ಇಲ್ಲಿದೆ

Published On - 9:28 am, Sat, 5 February 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!