AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿತ್ತಿದ್ದು ಆರು ಕೆಜಿ ಬೀಜ, ಬೆಳೆದಿದ್ದು 31 ಕ್ವಿಂಟಾಲ್ ಮೆಕ್ಕೆಜೋಳ; ಅಡಿಕೆ ತೋಟದಲ್ಲಿ ಬಂಪರ್ ಬೆಳೆಯಾಗಿ ಬಂದ ಮೆಕ್ಕೆಜೋಳ, ರೈತನ ವಿಶಿಷ್ಟ ಸಾಧನೆ

ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ಬಳಿ ಇರುವ ಹರೋಸಾಗರ ಗ್ರಾಮದ ವಿ. ಲಿಂಗರಾಜ್ ಇಂತಹ ಸಾಧನೆ ಮಾಡಿದ ರೈತ. ನಿರಂತರ ಪರಿಶ್ರಮ. ವಿಭಿನ್ನ ಕೃಷಿಯಿಂದ ಹೆಚ್ಚು ಚರ್ಚೆಯಲ್ಲಿ ಇರುವ ಲಿಂಗರಾಜ್ ಅವರು ಅಡಿಕೆ ತೋಟ ಮಾಡಿದ್ದಾರೆ.

ಬಿತ್ತಿದ್ದು ಆರು ಕೆಜಿ ಬೀಜ, ಬೆಳೆದಿದ್ದು 31 ಕ್ವಿಂಟಾಲ್ ಮೆಕ್ಕೆಜೋಳ; ಅಡಿಕೆ ತೋಟದಲ್ಲಿ ಬಂಪರ್ ಬೆಳೆಯಾಗಿ ಬಂದ ಮೆಕ್ಕೆಜೋಳ, ರೈತನ ವಿಶಿಷ್ಟ ಸಾಧನೆ
ಬಿತ್ತಿದ್ದು ಆರು ಕೆಜಿ ಬೀಜ, ಬೆಳೆದಿದ್ದು 31 ಕ್ವಿಂಟಾಲ್ ಮೆಕ್ಕೆಜೋಳ
TV9 Web
| Edited By: |

Updated on: Jan 09, 2022 | 12:07 PM

Share

ದಾವಣಗೆರೆ: ಒಂದು ಕಾಲದಲ್ಲಿ ದಾವಣಗೆರೆ ಜಿಲ್ಲೆಯನ್ನ ಮೆಕ್ಕೆಜೋಳದ ಮೆಕ್ಕಾ ಎಂದು ಕರೆಯುತ್ತಿದ್ದರು. ರಾಜ್ಯದಲ್ಲಿಯೇ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯುವ ಪ್ರಮುಖ ಮೂರು ಜಿಲ್ಲೆಗಳಲ್ಲಿ ದಾವಣಗೆರೆ ಕೂಡಾ ಒಂದು. ಇತ್ತೀಚಿಗೆ ನೀರಾವರಿ ಹೆಚ್ಚಾಗಿದ್ದರಿಂದ ಅಡಿಕೆ ತೆಂಗು ಭತ್ತದ ಕ್ಷೇತ್ರ ಹೆಚ್ಚಾಗುತ್ತಿದೆ. ಆದ್ರೆ ಮೆಕ್ಕೆಜೋಳದ ಜೊತೆಗಿರುವ ರೈತನ ಸಂಬಂಧ ಮಾತ್ರ ಕಡಿಮೆ ಆಗಿಲ್ಲ. ಇಲ್ಲೊಬ್ಬ ರೈತ ತನ್ನ ಅಡಿಕೆ ತೋಟದಲ್ಲಿ ಉಪ ಬೆಳೆಯಾಗಿ ಒಂದು ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದ. ಒಂದೇ ಎಕರೆ ಪ್ರದೇಶದಲ್ಲಿ ಬರೋಬರಿ 31 ಕ್ವಿಂಟಾಲ್ ಮೆಕ್ಕೆಜೋಳ ಬೆಳೆದು ಅಚ್ಚರಿ ಮೂಡಿಸಿದ್ದಾನೆ. ಅದು ಅಡಿಕೆ ತೋಟದಲ್ಲಿನ ಉಪ ಬೆಳೆಯಾಗಿ.

ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ಬಳಿ ಇರುವ ಹರೋಸಾಗರ ಗ್ರಾಮದ ವಿ. ಲಿಂಗರಾಜ್ ಇಂತಹ ಸಾಧನೆ ಮಾಡಿದ ರೈತ. ನಿರಂತರ ಪರಿಶ್ರಮ. ವಿಭಿನ್ನ ಕೃಷಿಯಿಂದ ಹೆಚ್ಚು ಚರ್ಚೆಯಲ್ಲಿ ಇರುವ ಲಿಂಗರಾಜ್ ಅವರು ಅಡಿಕೆ ತೋಟ ಮಾಡಿದ್ದಾರೆ. ಅಡಿಕೆ ಮರಳು ಎರಡು ವರ್ಷಗಳಿಂದ ಬೆಳೆಯುತ್ತಿವೆ. ಹೀಗೆ ಅಡಿಕೆ ಜೊತೆಗೆ ಬಹುತೇಕ ರೈತರು ಮೆಣಸು, ಎಲೆಬಳ್ಳಿ ಸೇರಿದಂತೆ ಹತ್ತಾರು ಬೆಳೆಗಳನ್ನ ಬೆಳೆಯುತ್ತಾರೆ. ಅದೇ ರೀತಿ ಲಿಂಗರಾಜ್ ಸಹ ಅಡಿಕೆ ತೋಟದಲ್ಲಿ ಆರು ಕೆಜಿ ಮೆಕ್ಕೆಜೋಳದ ಬೀಜತಂದು ಹಾಕಿದ್ದ. ನಂತರ ಅಡಿಕೆ ಜೊತೆಗೆ ಮೆಕ್ಕೆಜೋಳಕ್ಕೆ ಬೀಜಗೊಬ್ಬರ ಹಾಕಿದ್ದ. ಅದು ಬರೋಬರಿ 31 ಕ್ವಿಂಟಾಲ್ ಇಳುವಳಿ ಬಂದಿದೆ.

ಈ ರೀತಿ 31 ಕ್ವಿಂಟಾಲ್ ಇಳುವಳಿ ಬಂದಿದ್ದು ವಿರಳ. ಇದೊಂದು ಸಾಧನೆ ಕೂಡಾ. ಮಾಮೂಲಾಗಿ ಮೆಕ್ಕೆಜೋಳ ಮುಖ್ಯ ಬೆಳೆಯಾಗಿಯೇ ಬೆಳೆದರು ಸಹ ಎಕರೆಗೆ 15 ರಿಂದ 20 ಕ್ವಿಂಟಾಲ್ ಇಳುವರಿ ಬರುತ್ತದೆ. ಆದ್ರೆ ಇಲ್ಲಿ ರೈತ ಲಿಂಗರಾಜ್ ಅವರು ಉಪ ಬೆಳೆಯಾಗಿ ಬೆಳೆದಿದ್ದಾರೆ. ಇಂತಹದರಲ್ಲಿ 31 ಕ್ವಿಂಟಾಲ್ ಇಳುವರಿ ಬಂದಿದ್ದು ಮಾತ್ರ ಒಂದು ರೀತಿ ಸಾಧನೆ. ಇತರ ರೈತರಿಗೂ ಮಾದರಿಯಾಗಿದೆ. ಹೀಗೆ ರೈತನ ಜಮೀನಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಇತರ ರೈತರನ್ನ ಕರೆತಂದು ಇಲ್ಲಿನ ಬೆಳೆಯುವ ವಿಧಾನದ ಬಗ್ಗೆ ಮಾಹಿತಿ ಕೂಡಾ ರೈತನಿಂದ ಸಂಗ್ರಹಿಸಿದ್ದರು.

ರೈತ ಲಿಂಗರಾಜ್ ಅವರು ಉಪ ಬೆಳೆಯಾಗಿ ನಿರೀಕ್ಷೆಗೂ ಮೀರಿ ಇಲ್ಲಿ ಇಳುವರಿ ತೆಗೆದಿದ್ದಾರೆ. ಮೆಕ್ಕೆಜೋಳವನ್ನೆ ಮುಖ್ಯ ಬೆಳೆಯಾಗಿ ಬೆಳೆಯುವ ರೈತರಿಗೆ ಇದು ಮಾದರಿ ಎಂದು ಬಸವಾಪಟ್ಟಣ ಕೃಷಿ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಡಾ.ಡಿ.ಎಂ.ರಂಗಸ್ವಾಮಿ ಅವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ವರದಿ: ಬಸವರಾಜ ದೊಡ್ಮನಿ, ಟಿವಿ9 ದಾವಣಗೆರೆ

farmer corn

ಅಡಿಕೆ ತೋಟದಲ್ಲಿ ಬಂಪರ್ ಬೆಳೆಯಾಗಿ ಬಂದ ಮೆಕ್ಕೆಜೋಳ

farmer corn

ರೈತ ವಿ. ಲಿಂಗರಾಜ್

ಇದನ್ನೂ ಓದಿ: NASA: ವಿಶ್ವದ ರಹಸ್ಯ ಅರಿಯುವ ಪ್ರಯತ್ನದಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟ ನಾಸಾ; ಇಲ್ಲಿದೆ ಕುತೂಹಲಕಾರಿ ಮಾಹಿತಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ