AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನುಬಾಹಿರವಾಗಿ ಸರ್ಕಾರದಿಂದ ಅನುದಾನ ಪಡೆದಿದ್ದಾರೆ; ಪ್ರಸನ್ನಾನಂದಪುರಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ

ಹೊಸಪೇಟೆಯಲ್ಲಿ 3 ಎಕರೆ ಜಮೀನನ್ನು ಸ್ವಾಮೀಜಿ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಮಠದ ಸ್ವಾಮೀಜಿ ಮಠದ ಹೆಸರಿಗೆ ಆಸ್ತಿ ಮಾಡುವ ಬದಲು ತನ್ನ ಹೆಸರಿಗೆ ಮಾಡಿಸಿಕೊಂಡಿದ್ದಾರೆ.

ಕಾನೂನುಬಾಹಿರವಾಗಿ ಸರ್ಕಾರದಿಂದ ಅನುದಾನ ಪಡೆದಿದ್ದಾರೆ; ಪ್ರಸನ್ನಾನಂದಪುರಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ
ಪ್ರಸನ್ನಾನಂದಪುರಿ ಸ್ವಾಮೀಜಿ, ವಕೀಲ ಗುಮ್ಮನೂರು ಮಲ್ಲಿಕಾರ್ಜುನ್
TV9 Web
| Edited By: |

Updated on: Nov 25, 2021 | 5:03 PM

Share

ದಾವಣಗೆರೆ: ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರು ಬಿಟ್ಟರೇ ಅತಿ ದೊಡ್ಡ ಸಮುದಾಯ ವಾಲ್ಮೀಕಿ ಸಮಾಜ. ಈ ವಾಲ್ಮೀಕಿ ಸಮಾಜಕ್ಕೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ವಾಲ್ಮೀಕಿ ಗುರುಪೀಠವಿದೆ. ಪ್ರತಿ ವರ್ಷ ಫೆಬ್ರವರಿ 8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ನಡೆಯುತ್ತದೆ. ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ನೇತ್ರತ್ವದಲ್ಲಿ ಈ ಜಾತ್ರೆ ನಡೆಯುತ್ತಿದೆ. ಇಂತಹ ಸ್ವಾಮೀಜಿಗಳ ವಿರುದ್ಧ ಅದೇ ವಾಲ್ಮೀಕಿ ಸಮಾಜದ ನ್ಯಾಯವಾದಿ ಗುಮ್ಮನೂರು ಮಲ್ಲಿಕಾರ್ಜುನ ಕೆಲ ಆರೋಪಗಳನ್ನ ಮಾಡಿದ್ದಾರೆ. ಕೋಟ್ಯಾಂತರ ರೂಪಾಯಿ ಸ್ವಾಮೀಜಿಗಳ ವಾಲ್ಮೀಕಿ ಜಾತ್ರೆಗೆ ಬಳಸಿದ್ದಾರೆ. ಇದು ಬಡ ವಾಲ್ಮೀಕಿ ಸಮಾಜದ ಮಕ್ಕಳಿಗೆ ಸಿಗಬೇಕಾಗಿತ್ತು ಎಂದು ಆರೋಪಿಸಿದ್ದಾರೆ.

ಕಾನೂನು ಬಾಹಿರವಾಗಿ ವಾಲ್ಮೀಕಿ ಶ್ರೀಗಳು ಸರ್ಕಾರದಿಂದ ಅನುದಾನ ಪಡೆದಿದ್ದಾರೆ. ಎಸ್ಟಿ ಸಮುದಾಯಕ್ಕೆ ಮೀಸಲಿದ್ದ ಹಣವನ್ನು ಜಾತ್ರೆಗೆ ಪಡೆದುಕೊಂಡಿದ್ದಾರೆ. ದಾವಣಗೆರೆಯಲ್ಲಿ ಇಂದು (ನ.25) ಸುದ್ದಿಗೋಷ್ಠಿ ನಡೆಸಿ ವಕೀಲ ಗುಮ್ಮನೂರು ಮಲ್ಲಿಕಾರ್ಜುನ್ ಆರೋಪ ಮಾಡಿದ್ದಾರೆ. 15 ಕೋಟಿ ರೂಪಾಯಿ ಹಣವನ್ನು ವಾಲ್ಮೀಕಿ ಜಾತ್ರೆಗೆ ಬಳಕೆ ಮಾಡಿಕೊಂಡಿದ್ದಾರೆ. ಇದೇ ಹಣದಿಂದ ಸಮಾಜದ ಬಡವರ ಅಭಿವೃದ್ಧಿಗೆ ಬಳಕೆ ಮಾಡಬೇಕಿತ್ತು. ಅದನ್ನು ಬಿಟ್ಟು ಜಾತ್ರೆ ಮಾಡಿ ಹಣ ಪೋಲು ಮಾಡಿದ್ದಾರೆ. ಬಂಡೋಳಿ ಗ್ರಾಮದಲ್ಲಿ ಸ್ವಾಮೀಜಿ ಹೆಸರಿಗೆ 17 ಎಕರೆ ಮಾಡಿಕೊಂಡಿದ್ದಾರೆ ಅಂತ ಗಂಭೀರವಾಗಿ ಆರೋಪಿಸಿದ್ದಾರೆ.

ಹೊಸಪೇಟೆಯಲ್ಲಿ 3 ಎಕರೆ ಜಮೀನನ್ನು ಸ್ವಾಮೀಜಿ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಮಠದ ಸ್ವಾಮೀಜಿ ಮಠದ ಹೆಸರಿಗೆ ಆಸ್ತಿ ಮಾಡುವ ಬದಲು ತನ್ನ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ರಾಜನಹಳ್ಳಿಯಲ್ಲಿ ಸರ್ವೇ ನಂಬರ್107/A3 ನಲ್ಲಿರುವ ಜಮೀನನ್ನು ಪರಿಶಿಷ್ಟ ಜಾತಿಗೆ ಸಮಾಜ ಕಲ್ಯಾಣ ಇಲಾಖೆಯ ಆಸ್ತಿ ಇದೆ.ಅದನ್ನು ವಾಲ್ಮೀಕಿ ಮಠದ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಇದನ್ನು ಜಮೀನು ಇಲ್ಲದೆ ಇರುವ ಪರಿಶಿಷ್ಟ ಪಂಗಡದ ಜನರಿಗೆ ನೀಡಬೇಕು. ಸ್ವಾಮೀಜಿಗೆ ಬೇಕಾಗುವರನ್ನು ಟ್ರಸ್ಟಿಗಳನ್ನಾಗಿ ಮಾಡಿಕೊಂಡಿದ್ದಾರೆ. ಕೂಡಲೇ ಟ್ರಸ್ಟ್ ಸೂಪರ್ ಸೀಡ್ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

ಅಲ್ಲದೇ ವಕೀಲ ಗುಮ್ಮನೂರು ಮಲ್ಲಿಕಾರ್ಜುನ್, ಸ್ವಾಮೀಜಿಗಳ ವಿರುದ್ಧ ಕೋರ್ಟ್ನಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಟ್ರಸ್ಟ್​ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಧ್ಯಕ್ಷರಾಗಿದ್ದಾರೆ. ಅವರ ಗಮನಕ್ಕೂ ಈ ವಿಚಾರ ತರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ

‘ಜಂಗ್ಲಿ ಕುಲಪತಿಯ ಜಂಗೀಕಥೆ’- ಧಾರವಾಡದಲ್ಲಿ ಬಿಡುಗಡೆಯಾದ ವಿಭಿನ್ನ ಆತ್ಮಕಥೆ

Girl Child Homicide: ರಾಷ್ಟ್ರೀಯ ಸ್ಯಾಂಪಲ್ ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ -ಭಾರತದಲ್ಲಿ ಕೊನೆಗೊಂಡಿತಾ ಹೆಣ್ಣು ಶಿಶು ಹತ್ಯೆ?

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?