AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಭೀಕರ ಸರಣಿ ಅಪಘಾತ; ಓರ್ವ ಮಹಿಳೆ ಸಾವು

ಕಾರಿನ ಟೈರ್ ಬ್ಲಾಸ್ಟ್​ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಎಸ್​.ಎಸ್​ ಆಸ್ಪತ್ರೆ ಬಳಿ ತಡರಾತ್ರಿ ನಡೆದಿದೆ. ಸ್ಕೂಟರ್​ನಲ್ಲಿದ್ದ ಶೋಭಾ(49) ಮೃತ ಮಹಿಳೆ.

ದಾವಣಗೆರೆಯಲ್ಲಿ ಭೀಕರ ಸರಣಿ ಅಪಘಾತ; ಓರ್ವ ಮಹಿಳೆ ಸಾವು
ಪ್ರಾತಿನಿಧಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jul 15, 2023 | 8:15 AM

Share

ದಾವಣಗೆರೆ: ಕಾರಿನ ಟೈರ್ ಬ್ಲಾಸ್ಟ್​ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ(Davanagere) ನಗರದ ಎಸ್​.ಎಸ್​ ಆಸ್ಪತ್ರೆ ಬಳಿ ತಡರಾತ್ರಿ ನಡೆದಿದೆ. ಸ್ಕೂಟರ್​ನಲ್ಲಿದ್ದ ಶೋಭಾ(49) ಮೃತ ಮಹಿಳೆ. ಇನ್ನು ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಮೃತ ಮಹಿಳೆಯ ಸಂಬಂಧಿಕರು ಚಿಕಿತ್ಸೆಗೆಂದು S.S.ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನಲೆ ಮಹಿಳೆ ಅವರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಕಾರಿನ ಟಾಯರ್​ ಬ್ಲಾಸ್ಟ್​ ಆಗಿ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂರು ಕಾರುಗಳು, ಸ್ಕೂಟಿ ಸಂಪೂರ್ಣ ಜಖಂ ಆಗಿದ್ದು, ದಾವಣಗೆರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೆ ಸಾವು

ಸಾವು ಮನುಷ್ಯನಿಗೆ ಹೇಗೆ ಬರುತ್ತದೆಯೋ ಗೊತ್ತಾಗುವುದಿಲ್ಲ, ಎಷ್ಟೇ ಟೆಕ್ನಾಲಜಿ ಮುಂದುವರೆದರೂ ಸದಾವು ಹೇಗೆ ಎಂಬುದು ತಿಳಿಯದ್ದಾಗಿದೆ. ಹೌದು ಅದರಂತೆ ಹೆದ್ದಾರಿಯಲ್ಲಿ ನಡೆದು‌ಕೊಂಡು ಬರುತ್ತಿದ್ದ ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ50 ರಲ್ಲಿ ನಡೆದಿದೆ. ಇದೇ ತಾಲೂಕಿನ ಬಂಗಾರಕ್ಕನಹಳ್ಳಿ ನಿವಾಸಿ ಕುಮಾರ (45) ಸಾವನ್ನಪ್ಪಿದ ವ್ಯಕ್ತಿ. ಕೆಲಸದ ನಿಮಿತ್ಯ ನಡೆದುಕೊಂಡು ಪಕ್ಕದ ಹಳ್ಳಿಗೆ ಹೋಗುತ್ತಿದ್ದ ಕುಮಾರ್​ಗೆ ಅಪರಿಚಿತ ವಾಹನವೊಂದು ಬಂದು ಡಿಕ್ಕಿ ಹೊಡೆದಿದ್ದು, ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್ ವೇಯಲ್ಲಿ ತಪ್ಪಿತು ಭಾರೀ ದುರಂತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

ಮೈಸೂರಿನಲ್ಲಿ ರೈತನ ಮೇಲೆ ಚಿರತೆ ದಾಳಿ ಪ್ರಕರಣ; ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಮೈಸೂರು: ಹುಣಸೂರು ತಾಲ್ಲೂಕಿನ ರಾಮೇನಹಳ್ಳಿಯಲ್ಲಿ ನಿನ್ನೆ ರೈತ ಅನಿಲ್ ಎಂಬಾತನ ಮೇಲೆ ರಾತ್ರಿ ಸ್ನೇಹಿತರ ಜೊತೆ ಜಾತ್ರೆ ಮಾಳದ ಬಳಿ ಇದ್ದಾಗ ಚಿರತೆ ದಾಳಿ ಮಾಡಿತ್ತು. ಈ ವೇಳೆ ಭುಜ ಕಾಲಿಗೆ ಗಾಯವಾಗಿದ್ದು, ಗಾಯಗೊಂಡಿದ್ದ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದರಿಂದ ಗಾಬರಿಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಚಿರತೆ ಹಿಡಿಯುವಂತೆ ಮನವಿ ಮಾಡಿದ್ದರು. ಇದರಿಂದ ರಾತ್ರಿಯೆಲ್ಲ ಹುಡುಕಿದರೂ ಚಿರತೆ ಸಿಕ್ಕಿಲ್ಲ, ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಸ್ಥಳದಲ್ಲಿ ಚಿರತೆ ಸೆರೆಗೆ ಬೋನು ಹಿಡಿಯುವಂತೆ ಒತ್ತಾಯ ಮಾಡಲಾಗಿದೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?