AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಭೀಕರ ಸರಣಿ ಅಪಘಾತ; ಓರ್ವ ಮಹಿಳೆ ಸಾವು

ಕಾರಿನ ಟೈರ್ ಬ್ಲಾಸ್ಟ್​ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಎಸ್​.ಎಸ್​ ಆಸ್ಪತ್ರೆ ಬಳಿ ತಡರಾತ್ರಿ ನಡೆದಿದೆ. ಸ್ಕೂಟರ್​ನಲ್ಲಿದ್ದ ಶೋಭಾ(49) ಮೃತ ಮಹಿಳೆ.

ದಾವಣಗೆರೆಯಲ್ಲಿ ಭೀಕರ ಸರಣಿ ಅಪಘಾತ; ಓರ್ವ ಮಹಿಳೆ ಸಾವು
ಪ್ರಾತಿನಿಧಿಕ ಚಿತ್ರ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 15, 2023 | 8:15 AM

ದಾವಣಗೆರೆ: ಕಾರಿನ ಟೈರ್ ಬ್ಲಾಸ್ಟ್​ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ(Davanagere) ನಗರದ ಎಸ್​.ಎಸ್​ ಆಸ್ಪತ್ರೆ ಬಳಿ ತಡರಾತ್ರಿ ನಡೆದಿದೆ. ಸ್ಕೂಟರ್​ನಲ್ಲಿದ್ದ ಶೋಭಾ(49) ಮೃತ ಮಹಿಳೆ. ಇನ್ನು ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಮೃತ ಮಹಿಳೆಯ ಸಂಬಂಧಿಕರು ಚಿಕಿತ್ಸೆಗೆಂದು S.S.ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನಲೆ ಮಹಿಳೆ ಅವರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಕಾರಿನ ಟಾಯರ್​ ಬ್ಲಾಸ್ಟ್​ ಆಗಿ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂರು ಕಾರುಗಳು, ಸ್ಕೂಟಿ ಸಂಪೂರ್ಣ ಜಖಂ ಆಗಿದ್ದು, ದಾವಣಗೆರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೆ ಸಾವು

ಸಾವು ಮನುಷ್ಯನಿಗೆ ಹೇಗೆ ಬರುತ್ತದೆಯೋ ಗೊತ್ತಾಗುವುದಿಲ್ಲ, ಎಷ್ಟೇ ಟೆಕ್ನಾಲಜಿ ಮುಂದುವರೆದರೂ ಸದಾವು ಹೇಗೆ ಎಂಬುದು ತಿಳಿಯದ್ದಾಗಿದೆ. ಹೌದು ಅದರಂತೆ ಹೆದ್ದಾರಿಯಲ್ಲಿ ನಡೆದು‌ಕೊಂಡು ಬರುತ್ತಿದ್ದ ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ50 ರಲ್ಲಿ ನಡೆದಿದೆ. ಇದೇ ತಾಲೂಕಿನ ಬಂಗಾರಕ್ಕನಹಳ್ಳಿ ನಿವಾಸಿ ಕುಮಾರ (45) ಸಾವನ್ನಪ್ಪಿದ ವ್ಯಕ್ತಿ. ಕೆಲಸದ ನಿಮಿತ್ಯ ನಡೆದುಕೊಂಡು ಪಕ್ಕದ ಹಳ್ಳಿಗೆ ಹೋಗುತ್ತಿದ್ದ ಕುಮಾರ್​ಗೆ ಅಪರಿಚಿತ ವಾಹನವೊಂದು ಬಂದು ಡಿಕ್ಕಿ ಹೊಡೆದಿದ್ದು, ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್ ವೇಯಲ್ಲಿ ತಪ್ಪಿತು ಭಾರೀ ದುರಂತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

ಮೈಸೂರಿನಲ್ಲಿ ರೈತನ ಮೇಲೆ ಚಿರತೆ ದಾಳಿ ಪ್ರಕರಣ; ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಮೈಸೂರು: ಹುಣಸೂರು ತಾಲ್ಲೂಕಿನ ರಾಮೇನಹಳ್ಳಿಯಲ್ಲಿ ನಿನ್ನೆ ರೈತ ಅನಿಲ್ ಎಂಬಾತನ ಮೇಲೆ ರಾತ್ರಿ ಸ್ನೇಹಿತರ ಜೊತೆ ಜಾತ್ರೆ ಮಾಳದ ಬಳಿ ಇದ್ದಾಗ ಚಿರತೆ ದಾಳಿ ಮಾಡಿತ್ತು. ಈ ವೇಳೆ ಭುಜ ಕಾಲಿಗೆ ಗಾಯವಾಗಿದ್ದು, ಗಾಯಗೊಂಡಿದ್ದ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದರಿಂದ ಗಾಬರಿಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಚಿರತೆ ಹಿಡಿಯುವಂತೆ ಮನವಿ ಮಾಡಿದ್ದರು. ಇದರಿಂದ ರಾತ್ರಿಯೆಲ್ಲ ಹುಡುಕಿದರೂ ಚಿರತೆ ಸಿಕ್ಕಿಲ್ಲ, ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಸ್ಥಳದಲ್ಲಿ ಚಿರತೆ ಸೆರೆಗೆ ಬೋನು ಹಿಡಿಯುವಂತೆ ಒತ್ತಾಯ ಮಾಡಲಾಗಿದೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ