AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಪನಹಳ್ಳಿಯಲ್ಲಿ ಹೊತ್ತಿ ಉರಿದ ಡೀಸೆಲ್ ಟ್ಯಾಂಕರ್! ಬೈಕ್ ಸವಾರ ಸಜೀವ ದಹನ

ಬೈಕ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯಾಗುತ್ತಿದ್ದಂತೆ ಬೈಕ್ ಸವಾರ ಲಾರಿ ಅಡಿ ಸಿಲುಕಿದ್ದ. ಈ ವೇಳೆ ಬೈಕ್ ಹಾಗೂ ಸವಾರನ ಮೇಲೆ ಡೀಸೆಲ್ ತುಂಬಿದ್ದ ಲಾರಿ ಬಿದ್ದಿದೆ.

ಹರಪನಹಳ್ಳಿಯಲ್ಲಿ ಹೊತ್ತಿ ಉರಿದ ಡೀಸೆಲ್ ಟ್ಯಾಂಕರ್! ಬೈಕ್ ಸವಾರ ಸಜೀವ ದಹನ
ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುತ್ತಿದೆ
TV9 Web
| Updated By: sandhya thejappa|

Updated on:Jul 24, 2022 | 1:17 PM

Share

ದಾವಣಗೆರೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ರೈಲ್ವೆ ಗೇಟ್ ಬಳಿ ಡೀಸೆಲ್ ಟ್ಯಾಂಕರ್ (Diesel Tanker) ಪಲ್ಟಿಯಾಗಿದ್ದು, ಬೈಕ್ (Bike) ಸವಾರನೊಬ್ಬ ಸಜೀವ ದಹನವಾಗಿದ್ದಾನೆ. ಬೈಕ್​ಗೆ ಡಿಕ್ಕಿ ಹೊಡೆದ ಬಳಿಕ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿದೆ. ಪಲ್ಟಿಯಾಗುತ್ತಿದ್ದಂತೆ ಲಾರಿ ಧಗಧಗನೇ ಹೊತ್ತಿ ಉರಿದಿದೆ. ಇನ್ನು ಲಾರಿಯಿಂದ ಹಾರಿ ಬಚಾವ್ ಆದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಸದ್ಯ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬೈಕ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯಾಗುತ್ತಿದ್ದಂತೆ ಬೈಕ್ ಸವಾರ ಲಾರಿ ಅಡಿ ಸಿಲುಕಿದ್ದ. ಈ ವೇಳೆ ಬೈಕ್ ಹಾಗೂ ಸವಾರನ ಮೇಲೆ ಡೀಸೆಲ್ ತುಂಬಿದ್ದ ಲಾರಿ ಬಿದ್ದಿದೆ. ಪೆಟ್ರೋಲ್ ಟ್ಯಾಂಕ್ ಓಪನ್ ಆಗಿ ಅವಘಡ ಸಂಭವಿಸಿದೆ. ಬೆಂಕಿ ಬೈಕ್​ಗೆ ತಗುಲುತ್ತಿದ್ದಂತೆ ಲಾರಿಗೂ ವ್ಯಾಪಿಸಿದೆ.

ಇದನ್ನೂ ಓದಿ: ‘ರಕ್ಕಮ್ಮ’ ಬಂದ ಮರುದಿನವೇ ಬರಲಿದೆ ‘ರಕ್ಕಂ’; ನೈಜ ಘಟನೆ ಆಧಾರಿತ ಚಿತ್ರ ಜುಲೈ 29ಕ್ಕೆ ರಿಲೀಸ್​

ಇದನ್ನೂ ಓದಿ
Image
ಊರ ಹಬ್ಬ ವಿಚಾರವಾಗಿ ಬಿಗ್ ಫೈಟ್! ದೇವಸ್ಥಾನ ಕಮಿಟಿಯಲ್ಲಿದ್ದ ಓರ್ವ ಸದಸ್ಯನ ವಜಾ, ಆಕ್ರೋಶಗೊಂಡ ಗ್ರಾಮಸ್ಥರು
Image
‘ರಕ್ಕಮ್ಮ’ ಬಂದ ಮರುದಿನವೇ ಬರಲಿದೆ ‘ರಕ್ಕಂ’; ನೈಜ ಘಟನೆ ಆಧಾರಿತ ಚಿತ್ರ ಜುಲೈ 29ಕ್ಕೆ ರಿಲೀಸ್​
Image
ಭಾರತ ಅತ್ಯಂತ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆ ಹೊಂದಿದೆ: ಸಿಜೆಐ ಹೇಳಿಕೆಗೆ ಕಿರಣ್ ರಿಜಿಜು ಪ್ರತಿಕ್ರಿಯೆ
Image
Team India: ಟೀಮ್ ಇಂಡಿಯಾ ಪರ ಕನ್ನಡಿಗರ ಹೆಸರಿನಲ್ಲಿದೆ ಈ ವಿಶೇಷ ದಾಖಲೆ..!

ಅಪಘಾತವಾಗುತ್ತಿದ್ದಂತೆ ಲಾರಿಯಿಂದ ಚಾಲಕ ಮಹದೇವಪ್ಪ ಹಾರಿದ್ದಾನೆ. ಸುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಸೇಲ್ ಲಾರಿ ಹೆಚ್.ಪಿ ಕಂಪನಿಗೆ ಸೇರಿದ್ದಾಗಿದೆ.

35 ವರ್ಷದ ನಾಗರಾಜ್ ಮೃತ ಬೈಕ್ ಸವಾರ. ಸವಾರ ಹರಪನಹಳ್ಳಿಯಿಂದ ದಾವಣಗೆರೆಗೆ ಹೋಗುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ನಾಗರಾಜ್ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಸವಾರ ಚಂದ್ರು ಗೆ ಗಂಭೀರಗಾಯವಾಗಿದೆ. ಗಾಯಾಳು ಚಂದ್ರುನನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತದೇಹವನ್ನ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Gadag News: ಹೆಸರು, ಶೇಂಗಾ ಬೆಳೆಗಳಿಗೆ ಹಳದಿ ನಂಜಾಣು ರೋಗ ಹಾಗೂ ಕೀಟ ಬಾಧೆ; ಅನ್ನದಾತ ಕಂಗಾಲು

Published On - 1:10 pm, Sun, 24 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ