AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kiccha Sudeep: ಹರಿಹರ ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಕಿಚ್ಚ ಸುದೀಪ್ ಗೆ ಆಹ್ವಾನ ನೀಡಿಲ್ಲ -ಕಮಿಟಿ ಸ್ಪಷ್ಟನೆ

Valmiki jatre, Harihar: ಹಲವಾರು ವರ್ಷಗಳಿಂದ ವಾಲ್ಮೀಕಿ ಜಾತ್ರೆ ನಡೆಯುತ್ತಾ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರು 9 ರಂದು ಆಂಧ್ರದ ಬುಡಕಟ್ಟು ವಿಶ್ವವಿದ್ಯಾಲಯದ ಪ್ರೊ. ತೇಜಸ್ವಿ ಕಟ್ಟಿಮನಿಗೆ ವಾಲ್ಮೀಕಿ ಶ್ರೀ ಪ್ರಶಸ್ತಿ ಹಾಗೂ ಹಿರಿಯ ಸಾಹಿತಿ, ಚಿತ್ರದುರ್ಗದ ಬಿಎಲ್ ವೇಣು ಅವರಿಗೆ ವೀರ ಮದಕರಿ ನಾಯಕ ಪ್ರಶಸ್ತಿಯನ್ನ ಪ್ರದಾನ ಮಾಡಲಿದ್ದಾರೆ.

kiccha Sudeep: ಹರಿಹರ ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಕಿಚ್ಚ ಸುದೀಪ್ ಗೆ ಆಹ್ವಾನ ನೀಡಿಲ್ಲ -ಕಮಿಟಿ ಸ್ಪಷ್ಟನೆ
ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಕಿಚ್ಚ ಸುದೀಪ್ ಗೆ ಆಹ್ವಾನ ನೀಡಿಲ್ಲ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 07, 2024 | 12:44 PM

Share

ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಕಿಚ್ಚ ಸುದೀಪ್ ಗೆ ಆಹ್ವಾನ ( invitation) ನೀಡಿಲ್ಲ. ಕಾರಣ ಪ್ರತಿ ವಾಲ್ಮೀಕಿ ಜಾತ್ರೆಯಲ್ಲಿ ಸುದೀಪ್ ಬಂದರೂ ಗದ್ದಲ, ಬಾರದಿದ್ದರೂ ಗದ್ದಲವೇ! ಹಾಗಾಗಿ ಈ ಬಾರಿ ವಾಲ್ಮೀಕಿ ಸಮುದಾಯದ ನಾಯಕ ನಟ ಸುದೀಪ್ (Actor kiccha Sudeep) ಗೆ ವಾಲ್ಮೀಕಿ ಜಾತ್ರೆಗೆ ಆಹ್ವಾನ ನೀಡದಿರಲು ನಿರ್ಧಾರ ಮಾಡಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಫೆಬ್ರವರಿ 8, 9ಕ್ಕೆ ವಾಲ್ಮೀಕಿ ಜಾತ್ರೆ (Valmiki jatre, Harihar) ನಡೆಯುತ್ತದೆ. ವಾಲ್ಮೀಕಿ ಮಠದಲ್ಲಿ ಎರಡು ದಿನಗಳ ಕಾಲ ನಡೆಯುವ ವಾಲ್ಮೀಕಿ ಜಾತ್ರೆಗೆ ಮಠ ಸಜ್ಜಾಗುತ್ತಿದೆ. ಇಲ್ಲಿದೆ ನೋಡಿ ವಾಲ್ಮೀಕಿ ಜಾತ್ರೆ ಸಚಿತ್ರ.

ಮತ್ತೆ ಬಂದಿದೆ ವಾಲ್ಮೀಕಿ ಜಾತ್ರೆ. ಇದೇ 8 ಮತ್ತು 9 ರಂದು ಎರಡು ದಿನಗಳ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದ ಆವರಣದಲ್ಲಿ ಜಾತ್ರೆ ನಡೆಯಲಿದೆ. ಹಿಂದಿನ ಜಾತ್ರೆಯಲ್ಲಿ ನಟ ಸುದೀಪ್ ಬಂದಿದ್ದರು. ಹೀಗೆ ಬಂದ ನಟನನ್ನ ನೋಡಲು ನೂಕುನುಗ್ಗಲು. ಜಾತ್ರೆಯಲ್ಲಿ ಗದ್ದಲ. ಕಳೆದ ಜಾತ್ರೆಗೆ ನಟ ಸುದೀಪ್​​ ಬಂದಿರಲಿಲ್ಲ. ಬರುತ್ತಾರಾ ಬರುತ್ತಾರೆ ಎಂಬ ಹೇಳಿಕೆಯಲ್ಲಿ ಜಾತ್ರೆ ಮುಕ್ತಾಯವಾಗಿತ್ತು. ವಾಲ್ಮೀಕಿ ಸಮಾಜದ ನಟ ಸುದೀಪ್ ನೋಡಲು ಜನ ಸಾಗರವೇ ಸೇರುತ್ತದೆ. ಬಂದಾಗ ಜಾತ್ರೆಯಲ್ಲಿ ಆಗುತ್ತಿರುವ ಗಲಾಟೆ ಗೊಂದಲಗಳಿಂದ ಸುದೀಪ್ ಕರೆಸದಿರಲು ಜಾತ್ರಾ ಕಮಿಟಿ ನಿರ್ಧಾರ ಮಾಡಿದೆ.

ಕಳೆದ ಬಾರಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಬರುತ್ತಾರೆ ಅಂತ ಹೇಳಲಾಗಿತ್ತು ಕೊನೆಗೆ ಸುದೀಪ್ ಬರಲ್ಲ ಎಂದು ಹೇಳುತಿದ್ದಂತೆ ಅಭಿಮಾನಿಗಳು ಚೇರ್ ಗಳ ಮುರಿದು ಆಕ್ರೋಶ ಹೊರ ಹಾಕಿದ್ದರು. ಈ ಹಿಂದೆ ಒಮ್ಮೆ ಸುದೀಪ್ ಬರುತಿದ್ದಂತೆ ಅಭಿಮಾನಿಗಳು ವೇದಿಕೆಗೆ ನುಗ್ಗಿ ಬಂದಿದ್ದರು. ಆಗ ಅಲ್ಲಿದ್ದ ಹಿರಿಯರು ಮಕ್ಕಳಿಗೆ ಗಾಯ ಕೂಡ ಆಗಿದ್ದವು. ಈ ಎಲ್ಲ ಗೊಂದಲಗಳಿಂದ ನಟ ಸುದೀಪ್ ಕರೆಸದಿರಲು ವಾಲ್ಮೀಕಿ ಜಾತ್ರ ಸಮಿತಿ ನಿರ್ಧರಿಸಿದೆ. ಅಚ್ಚುಕಟ್ಟಾಗಿ ಜಾತ್ರೆ ನಡೆಸುವ ಸಲುವಾಗಿ ಸುದೀಪ್ ರನ್ನು ಕರೆಸದಿರಲು ತೀರ್ಮಾನಿಸಲಾಗಿದೆ ಎಂದು ಪ್ರಸನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠ ರಾಜನಹಳ್ಳಿ, ಹೇಳಿದ್ದಾರೆ.

Also Read: ಕಿಚ್ಚ ಸುದೀಪ್ ಎಷ್ಟು ಸ್ವೀಟ್ ನೋಡಿ; ಅವರು ಇಷ್ಟ ಆಗೋದೇ ಈ ಕಾರಣಕ್ಕೆ..

ಎಂಟರಂದು ಬೆಳಿಗ್ಗೆ ಕುಂಬ ಮೇಳ. ರಾಜ್ಯದ ಬಹುತೇಕ ಕಡೆಯಿಂದ ಲಕ್ಷಾಂತರ ಜನರ ಆಗಮನ. ಮಹಿಳಾ ಗೋಷ್ಠಿ ಹಾಗೂ ನೌಕರರ ಗೋಷ್ಠಿಗಳು. ಎಂಟರಂದು ಧರ್ಮ ಸಭೆ – ಐವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಧರ್ಮ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ನಂತರ ಬಹಿರಂಗ ಸಭೆಗೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಗಳಾದ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಪ್ರತಿ ಪಕ್ಷದ ನಾಯಕ ಆರ್ ಅಶೋಕ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ವಾಲ್ಮೀಕಿ ಸಮಾಜದ ಮುಖಂಡ ಚಂದ್ರಶೇಖರ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್