AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಿಲಾಡಿ ಪೊಲೀಸ್ ಕಾನ್ಸ್​ಸ್ಟೇಬಲ್ ಅಮಾನತು

ತಪ್ಪು ಮಾಡದಂತೆ ತಡೆಯಬೇಕಾದ ಪೊಲೀಸ್​ವೊಬ್ಬ ಪತ್ನಿ ಇದ್ದರೂ ಮತ್ತೊಬ್ಬಳೊಂದಿಗೆ ಚಕ್ಕಂದ ಆಡುತ್ತಿದ್ದ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿತ್ತು. ಈ ಕುರಿತು ಎಸ್ಪಿ ಉಮಾ ಪ್ರಶಾಂತ್ ಅವರು ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಿ, ಆರೋಪ ಸತ್ಯವೆಂದು ಸಾಭೀತಾದ ಮೇಲೆ ಆತನನ್ನು ಅಮಾನತುಗೊಳಿಸಿದ್ದಾರೆ.

ದಾವಣಗೆರೆ: ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಿಲಾಡಿ ಪೊಲೀಸ್ ಕಾನ್ಸ್​ಸ್ಟೇಬಲ್ ಅಮಾನತು
ಪ್ರಾತಿನಿಧಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jul 27, 2024 | 8:02 PM

Share

ದಾವಣಗೆರೆ, ಜು.27: ಮನೆಯಲ್ಲಿ ಪತ್ನಿ ಇದ್ದರೂ ಮತ್ತೊಬ್ಬಳೊಂದಿಗೆ ಚಕ್ಕಂದ ಆಡುತ್ತಿದ್ದ ಪೊಲೀಸ್ ಕಾನ್ಸ್​ಸ್ಟೇಬಲ್(Police Constable) ​ನ್ನು ಅಮಾನತ್ತು ಮಾಡಿ ಎಸ್ಪಿ ಉಮಾ ಪ್ರಶಾಂತ್ ಬಿಸಿ ಮುಟ್ಟಿಸಿದ್ದಾರೆ. ಹೌದು, ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಸಿ 124 ನಂಬರ್ ಪ್ರಸನ್ ಟಿ. ಅಮಾನತ್ತು ಆದ ಪೇದೆ. ಪತ್ನಿಯಿಂದ‌ ದೂರು‌ಪಡೆದು ನಂತರ ಹಿರಿಯ ಅಧಿಕಾರಿಗಳಿಂದ ‌ತನಿಖೆ ಮಾಡಿಸಿ ಆರೋಪ ಸತ್ಯವೆಂದು‌ ಗೊತ್ತಾದ ಬಳಿಕ ಅಮಾನತ್ತುಗೊಳಿಸಿದ್ದಾರೆ.

ಪತ್ನಿಯ ತಲೆಗೆ ಕಬ್ಬಿಣದ ವಸ್ತುವಿನಿಂದ ಹೊಡೆದು ಹಲ್ಲೆ‌ ಮಾಡಿದ್ದ ಪೇದೆ

ಪರಸ್ತ್ರೀ ಸಂಘ ಮಾಡಿ ‌ಕೆಲ‌ ತಿಂಗಳಿಂದ ಮನೆಗೆ ಬರುವುದನ್ನೇ ಪೇದೆ ಪ್ರಸನ್ ನಿಲ್ಲಿಸಿದ್ದ. ಒಂದು ಗಂಡು, ಒಂದು‌ ಹೆಣ್ಣು ಮಕ್ಕಳ‌ನ್ನ ಕಟ್ಟಿಕೊಂಡು ಕುಟುಂಬ ನಡೆಸಲು ಪ್ರಸನ್ನ ಅವರ ಪತ್ನಿ ಪರದಾಡುತ್ತಿದ್ದರು. ಈ ಮಧ್ಯೆ ಮತ್ತೊಬ್ಬಳೊಂದಿಗೆ ರಂಗಿನಾಟ ಪ್ರಶ್ನೆ ಮಾಡಿದಕ್ಕೆ ಪತ್ನಿಯ ತಲೆಗೆ ಕಬ್ಬಿಣದ ವಸ್ತುವಿನಿಂದ ಹೊಡೆದು ಹಲ್ಲೆ‌ಮಾಡಿದ್ದ. ಆತನ ದೌರ್ಜನ್ಯದಿಂದ ಬೇಸತ್ತು ಪತ್ನಿ ದೂರು ನೀಡಿದ್ದರು. ಈ ಹಿನ್ನಲೆ ಹಿರಿಯ ಅಧಿಕಾರಿಗಳಿಂದ ಎಸ್​ಪಿ ತನಿಖೆ ಮಾಡಿಸಿದ್ದರು. ಆರೋಪ ಸತ್ಯವೆಂದು ಸಾಭೀತಾದ ಮೇಲೆ ಕ್ರಮಕೈಗೊಂಡಿದ್ದಾರೆ.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿರುವ ಆರೋಪ, ಪೊಲೀಸ್ ಪೇದೆ ಅಮಾನತು

ಪಕ್ಕದ ಮನೆ ನಿವಾಸಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪಿ ಬಂಧನ

ಹುಬ್ಬಳ್ಳಿ: ಅಯೋಧ್ಯೆ ನಗರದಲ್ಲಿ ಜುಲೈ 23ರಂದು ಪಕ್ಕದ ಮನೆ ನಿವಾಸಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪಿಯನ್ನು ಪೊಲೀರು ಬಂಧಿಸಿದ್ದಾರೆ. ಆಕಾಶ್ ದೊಡ್ಮನಿ ಬಂಧಿತ ಆರೋಪಿ. ಅನೂಪ್ ದೊಡ್ಮನಿ ದೂರಿನ ಮೇರೆಗೆ ಆಕಾಶ್‌ನನ್ನು ಹಳೇ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:58 pm, Sat, 27 July 24

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!