AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. ಕೆ ಶಿವಕುಮಾರ್ ಸ್ವಾಗತ ಮಾಡಿದರೂ ನಾವು ಕಾಂಗ್ರೆಸ್​​ ಪಕ್ಷಕ್ಕೆ ಹೋಗಲ್ಲ: ಎಂಟಿಬಿ ನಾಗರಾಜ್

ಡಿ. ಕೆ ಶಿವಕುಮಾರ್ ಸ್ವಾಗತ ಮಾಡಿದರೂ ನಾವು ಕಾಂಗ್ರೆಸ್​​ ಪಕ್ಷಕ್ಕೆ ಹೋಗಲ್ಲ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.

ಡಿ. ಕೆ ಶಿವಕುಮಾರ್ ಸ್ವಾಗತ ಮಾಡಿದರೂ ನಾವು ಕಾಂಗ್ರೆಸ್​​ ಪಕ್ಷಕ್ಕೆ ಹೋಗಲ್ಲ: ಎಂಟಿಬಿ ನಾಗರಾಜ್
ಸಚಿವ ಎಂಟಿಬಿ ನಾಗರಾಜ
TV9 Web
| Edited By: |

Updated on:Dec 11, 2022 | 4:32 PM

Share

ದಾವಣಗೆರೆ: ಸದ್ಯ ಬಿಜೆಪಿಯಲ್ಲಿ ವಲಸಿಗರು ಮತ್ತು ಮೂಲ ಬಿಜೆಪಿಗರು ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್​ನಿಂದ (Congress) ಬಿಜೆಪಿಗೆ (BJP) ವಲಸೆ ಬಂದ ಕೆಲ ಶಾಸಕರಲ್ಲಿ ಹಳ್ಳಿ ಹಕ್ಕಿ ವಿಶ್ವನಾಥ್​ ಕೂಡ ಒಬ್ಬರು. ಇದೀಗ ವಿಶ್ವನಾಥ್​​ ಕಾಂಗ್ರೆಸ್​ನತ್ತ ಮುಖಮಾಡಿದ್ದಾರೆ. ಈ ಹಿನ್ನೆಲೆ ಕೆಲ ಶಾಸಕರು ಮತ್ತೆ ಕಾಂಗ್ರೆಸ್​ಗೆ ಹೋಗುತ್ತಾರೆ ಎಂಬ ಮಾತಿಗೆ ಉತ್ತರಿಸಿದ ಸಚಿವ ಎಂ.ಟಿ.ಬಿ ನಾಗರಾಜ್ (M. T. B. Nagaraj), ಕೆಪಿಸಿಸಿ (KPCC) ಅಧ್ಯಕ್ಷ ಡಿ. ಕೆ ಶಿವಮಾಕುಮಾರ (D. K. Shivakumar) ಸ್ವಾಗತ ಮಾಡಿದರೂ ನಾವು ಕಾಂಗ್ರೆಸ್​​ ಪಕ್ಷಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲೂ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ. 125 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೆಲ್ಲರಿಗೂ ಟಿಕೆಟ್ ಸಿಗುತ್ತದೆ, ಇದರ ಬಗ್ಗೆ ಬೇರೆ ಮಾತಿಲ್ಲ. ನಾವು ಬಿಜೆಪಿಯಲ್ಲೇ ಇರುತ್ತೇವೆ. ಇನ್ನು ಚುನಾವಣೆ ಹೇಗೆ ನಡೆಸಬೇಕು, ಯಾರಿಗೆ ಯಾವ ಉಸ್ತುವಾರಿ ‌ಕೊಡಬೇಕು ಎಂಬುದು ಪಕ್ಷದ ವರಿಷ್ಠರು‌ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು

ಇದೆ ವೇಳೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಕಾಂಗ್ರೆಸ್​ಗೆ ನಾವೀಕನೇ ಇಲ್ಲ, ಹೀಗಾಗಿ ಬಿಜೆಪಿಗೆ ಬರುತ್ತಿದ್ದಾರೆ. ಬಿಜೆಪಿಯಿಂದ ಯಾರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಗುಜರಾತ್ ಮಾದರಿ ಚುನಾವಣೆ ಮಾಡುವುದು ವರಿಷ್ಠರಿಗೆ ಬಿಟ್ಟ ವಿಚಾರ. 2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರ ಹಿಡಿಯಲಿದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Sun, 11 December 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ