AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಎಲ್ಲಾ ರೀತಿಯ ವಿವಾದಗಳು ಬಗೆಹರಿದಿವೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಯಾವುದೇ ಗಲಭೆ, ಹಿಜಾಬ್ ವಿವಾದ ಇಲ್ಲ. ಸದ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇದೆ. ಸದ್ಯ ರಾಜ್ಯದಲ್ಲಿ ಎಲ್ಲಾ ರೀತಿಯ ವಿವಾದಗಳು ಬಗೆಹರಿದಿವೆ ಎಂದು ದಾವಣಗೆರೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ರಾಜ್ಯದಲ್ಲಿ ಎಲ್ಲಾ ರೀತಿಯ ವಿವಾದಗಳು ಬಗೆಹರಿದಿವೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ: ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Jun 08, 2022 | 3:53 PM

Share

ದಾವಣಗೆರೆ: ರಾಜ್ಯದಲ್ಲಿ ಎಲ್ಲಾ ರೀತಿಯ ವಿವಾದಗಳು ಬಗೆಹರಿದಿವೆ. ರಾಜ್ಯದಲ್ಲಿ ಯಾವುದೇ ಗಲಭೆ, ಹಿಜಾಬ್ ವಿವಾದ ಇಲ್ಲ. ಸದ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇದೆ ಎಂದು ಎಸ್ಪಿ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದರು. ಸಚಿವ ನಾಗೇಶ್ ಮನೆಗೆ ಮುತ್ತಿಗೆ ಹಾಕಿದ್ದು ಸರಿಯಲ್ಲ. ಮುತ್ತಿಗೆ ಹಾಕಿರೋರು ಹೊರಗಿನಿಂದ ಬಂದಿರುವ ಮಾಹಿತಿಯಿದೆ. ದಾವಣಗೆರೆಯಿಂದಲೂ ಮೂವರು ಬಂದಿರುವ ಬಗ್ಗೆ ಮಾಹಿತಿಯಿದ್ದು, ಪ್ರತಿಭಟನೆಗೂ ಮುನ್ನ ಯಾವುದೇ ಅನುಮತಿ ಪಡೆದಿಲ್ಲ. ಈ ಎಲ್ಲದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಇದನ್ನೂ ಓದಿ: Parineeti : ಮುಂಬೈ ವಿಮಾನ ನಿಲ್ದಾಣದಲ್ಲಿ ಚಿಕ್ ಲುಕ್ ನಲ್ಲಿ ಕಂಡ ನಟಿ ಪರಿಣಿತಿ

ಉಗ್ರನ ಬಂಧನದ ವಿಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ

ಬೆಂಗಳೂರಿನಲ್ಲಿ ಉಗ್ರ ತಾಲಿಬ್ ಹುಸೇನ್ ಬಂಧನ ವಿಚಾರವಾಗಿ ಮಾತನಾಡಿದ್ದು, ಉಗ್ರನ ಬಂಧನದ ವಿಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾಶ್ಮೀರದ ಶ್ರೀನಗರ ಪೊಲೀಸರು ಉಗ್ರನನ್ನ ಕರೆದೊಯ್ದಿದ್ದಾರೆ. ದೇಶದ ರಕ್ಷಣಾ ದೃಷ್ಟಿಯಿಂದ ಈ ಬಗ್ಗೆ ಹೆಚ್ಚು ಮಾತನಾಡಲ್ಲ. ನಿಷೇಧಿತ ಸ್ಯಾಟಲೈಟ್​​​ ಫೋನ್ ಬಳಕೆ ಬಗ್ಗೆ ತನಿಖೆ ನಡೆಯುತ್ತಿದೆ. ಕೇಂದ್ರದ ತನಿಖಾ ಸಂಸ್ಥೆ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.

ಪಿಎಸ್​ಐ ನೇಮಕಾತಿ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ

ರಾಜ್ಯದಲ್ಲಿ ನಡೆದ ಪಿಎಸ್​ಐ ನೇಮಕಾತಿಯಲ್ಲಿ ನಡೆದ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ. ಇಂತಹ ಅವ್ಯವಹಾರ ಮೊದಲಿನಿಂದಲೇ ನಡೆದುಕೊಂಡು ಬಂದಿದೆ. ಆದರೆ ಅಂತವರು ಎದೆ ಮುಟ್ಟಿಕೊಂಡು ನೋಡಿಕೊಳ್ಳುವಂತೆ ಮಾಡುತ್ತೇವೆ. ನಮ್ಮ ಇಲಾಖೆ ಡಿವೈಎಸ್ಪಿಗಳನ್ನೆ ಬಂಧಿಸಿದ್ದೇವೆ. ತನಿಖಾ ತಂಡ ಕೂಡಾ ಚೆನ್ನಾಗಿ ಕೆಲ್ಸಾ ಮಾಡುತ್ತಿದ್ದೆ. ಉಗ್ರನ ಬಂಧನ ಹೆಚ್ಚು ಮಾತಾಡಲ್ಲ. ಬೆಂಗಳೂರನಲ್ಲಿ ಉಗ್ರನ ಬಂಧನ ಹಿನ್ನೆಲೆ ಶ್ರೀನಗರ ಪೊಲೀಸರು ಓರ್ವನನ್ನ ಕರೆದುಕೊಂಡು ಹೋಗಿದ್ದಾರೆ. ನಮ್ಮ ಪೊಲೀಸರು ಸಹ ಶ್ರೀನಗರ ಪೊಲೀಸರ ಜೊತೆ ಸಂಪರ್ಕದಲ್ಲಿ ಇದ್ದಾರೆ. ದೇಶದ ಸಮಗ್ರತೆ ದೃಷ್ಟಿಯಿಂದ ಈ ಬಗ್ಗೆ ಹೆಚ್ಚು ಮಾತಾಡಲ್ಲ. ಸೆಟ್ ಲೈಟ್ ಕಾಲ್ ವಿಚಾರ ತನಿಖೆಯಾಗುತ್ತಿದೆ. ಈಗಾಗಲೇ ಶಿವಮೊಗ್ಗ ಸೇರಿದಂತೆ ಕೆಲ ಕಡೆ ಸೆಟ್ ಲೈಟ್ ಕಾಲ್ ಮಾತಾಡಿದ್ದು ಗೊತ್ತಾಗಿದೆ. ಇದರ ಬಗ್ಗೆ ತನಿಖೆ ನಡೆದಿದೆ. ಕೇಂದ್ರ ಸರ್ಕಾರದ ಎಜೆನ್ಸಿ ಜೊತೆ ಸಂಪರ್ಕದಲ್ಲಿ ಇದ್ದೇವೆ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:53 pm, Wed, 8 June 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ