AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಧಿಕಾರಿ ನೇಮಕಕ್ಕೆ ನಿರ್ಲಕ್ಷ್ಯ ಆರೋಪ: ಸಿರಿಗೆರೆ ಸ್ವಾಮೀಜಿ ವಿರುದ್ಧ ಮುಂದುವರಿದ ವಾಗ್ದಾಳಿ

ಸ್ವಾಮೀಜಿಗೆ 76 ವರ್ಷವಾಗಿದೆ. ಉತ್ತರಾಧಿಕಾರಿ ನೇಮಕಕ್ಕಾಗಿ ಹತ್ತಾರು ಪತ್ರ ಬರೆದರೂ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ದೂರಿದರು.

ಉತ್ತರಾಧಿಕಾರಿ ನೇಮಕಕ್ಕೆ ನಿರ್ಲಕ್ಷ್ಯ ಆರೋಪ: ಸಿರಿಗೆರೆ ಸ್ವಾಮೀಜಿ ವಿರುದ್ಧ ಮುಂದುವರಿದ ವಾಗ್ದಾಳಿ
ದಾವಣಗೆರೆಯಲ್ಲಿ ಸಿರಿಗೆರೆ ಭಕ್ತರ ಬಣಗಳ ನಡುವೆ ಮಾತಿನ ಚಕಮಕಿ (ಎಡಚಿತ್ರ). ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 07, 2021 | 8:15 PM

Share

ದಾವಣಗೆರೆ: ಸಿರಿಗೆರೆ ಮಠದ ಭಕ್ತರು ಎರಡು ಬಣಗಳಾಗಿ ಒಡೆದಿದ್ದು ಪೀಠದಲ್ಲಿರುವ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಒಂದು ಬಣವು ಬಹಿರಂಗ ಆರೋಪ ಮಾಡುತ್ತಿದೆ. ಸ್ವಾಮೀಜಿಗೆ 76 ವರ್ಷವಾಗಿದೆ. ಉತ್ತರಾಧಿಕಾರಿ ನೇಮಕಕ್ಕಾಗಿ ಹತ್ತಾರು ಪತ್ರ ಬರೆದರೂ ಸಮರ್ಪಕ ಉತ್ತರ ನೀಡುತ್ತಿಲ್ಲ. ಅವರ ಸಂಬಂಧಿಕರನ್ನೇ ಉತ್ತರಾಧಿಕಾರಿಯನ್ನಾಗಿ ಮಾಡಲು ಸಂಚು ನಡೆಸುತ್ತಿದ್ದಾರೆ ಎಂದು ಒಂದು ಬಣವು ದೂರಿದೆ.

ಸ್ವಾಮೀಜಿ ಬಗ್ಗೆ ಆಕ್ಷೇಪವಿದ್ದರೆ ಮಠಕ್ಕೆ ಬಂದು ಪ್ರಶ್ನಿಸಬೇಕಿತ್ತು. ಬಹಿರಂಗವಾಗಿ ಪತ್ರಿಕಾಗೋಷ್ಠಿ ಮಾಡಿದ್ದು ತಪ್ಪು ಎಂದು ಕೆಲ ಭಕ್ತರು ಆಕ್ಷೇಪಿಸಿದರು. ಸ್ವಾಮೀಜಿ ಪೀಠತ್ಯಾಗಕ್ಕೆ ಸಂಬಂಧಿಸಿದಂತೆ ಎರಡೂ ಬಣಗಳ ನಡುವೆ ಮಾತಿನ ಚಕಮಕಿ ನಡೆಯಿತು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಮುದೇಗೌಡ, ವೀರಭದ್ರಪ್ಪ, ಆನಗೋಡು ನಂಜುಂಡಪ್ಪ, ರುದ್ರಪ್ಪಗೌಡ, ಶಿವನಕೆರೆ ಬಸವಲಿಂಗಪ್ಪ, ಎಸ್.ಟಿ.ಶಾಂತಗಂಗಾಧರ್, ಎಂ.ಸಿದ್ದಯ್ಯ ಸ್ವಾಮೀಜಿ ವಿರುದ್ಧ ಗುರುತರ ಆರೋಪ ಮಾಡಿದರು. ಭಕ್ತರ ಸಂಪರ್ಕಕ್ಕೆ ಸ್ವಾಮೀಜಿ ಸುಲಭವಾಗಿ ಸಿಗುತ್ತಿಲ್ಲ. ಭೇಟಿಗಾಗಿ ದಿನಗಟ್ಟಲೆ ಕಾಯಬೇಕಿದೆ. ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘದ 1977ರ ಬೈಲಾ ನಿರ್ಲಕ್ಷಿಸಿ ಟ್ರಸ್ಟ್ ರಚಿಸಿದ್ದಾರೆ ಎಂದು ದೂರಿದರು.

ವಿದ್ಯಾಸಂಸ್ಥೆಗಳನ್ನು ನಿರ್ಲಕ್ಷಿಸುತ್ತಿರುವ ಸ್ವಾಮೀಜಿ, ಅದ್ಧೂರಿ ಮದುವೆ ಮಂಟಪ ಹಾಗೂ ದೇವಾಲಯ ಕಟ್ಟಲು ಭಕ್ತರ ಹಣ ವಿನಿಯೋಗಿಸುತ್ತಿದ್ದಾರೆ. ಟ್ರಸ್ಟ್​ನ ಕೇಂದ್ರ ಸಮಿತಿಯಲ್ಲಿ ಸಮಾಜಕ್ಕೆ ಏನೂ ಕೊಡುಗೆಯನ್ನೇ ನೀಡದವರಿಗೆ ಅವಕಾಶ ಕೊಟ್ಟಿದ್ದಾರೆ. ಸ್ವಾಮೀಜಿಗೆ ಗನ್ ಮ್ಯಾನ್ ಏಕೆ ಬೇಕು? ತಮ್ಮನ್ನು ಪ್ರಶ್ನಿಸಿದವರನ್ನು ಹತ್ತಿಕ್ಕಲು ಗೂಂಡಾಗಳನ್ನು ಕಳುಹಿಸುವ ಪರಿಪಾಠವನ್ನು ಸ್ವಾಮೀಜಿ ಬೆಳೆಸಿಕೊಂಡಿದ್ದಾರೆ. ಸ್ವಾಮೀಜಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ಮಾಡಿದ್ದಾರೆ ಎಂದು ಹೇಳಿದರು.

ಜಾಗೃತಿ ಸಮಿತಿಯ ಸದಸ್ಯರು ಸುದ್ದಿಗೋಷ್ಠಿ ಮುಗಿಸಿ ಹೊರಗೆ ಬಂದಾಗ ಅವರನ್ನು ಎದುರುಗೊಂಡ ಭಕ್ತರು ಪತ್ರಿಕಾಗೋಷ್ಠಿ ನಡೆಸಿದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ನೀವು ಮಾತನಾಡುವುದಿದ್ದರೆ ಮಠಕ್ಕೆ ತೆರಳಿ ಸ್ವಾಮೀಜಿ ಅವರನ್ನು ಭೇಟಿಯಾಗಬೇಕಿತ್ತು. ಹೀಗೆ ಸುದ್ದಿಗೋಷ್ಠಿ ನಡೆಸಿದ್ದು ತಪ್ಪು ಎಂದು ಹೇಳಿದರು. ಈ ವೇಳೆ ಎರಡೂ ಬಣಗಳ‌‌ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ: ಸಾಣೆಹಳ್ಳಿ ಶಿವಸಂಚಾರ ನಾಟಕೋತ್ಸವಕ್ಕೆ ಚಾಲನೆ: ಯಡಿಯೂರಪ್ಪ, ದೊಡ್ಡರಂಗೇಗೌಡ ಭಾಗಿ ಇದನ್ನೂ ಓದಿ: ಕೂಡು ಒಕ್ಕಲಿಗ ಎಂಬುದು ಲಿಂಗಾಯತ ಸಮುದಾಯದ ಉಪಪಂಗಡ: ಎಂ.ಬಿ. ಪಾಟೀಲ್ ಸ್ಪಷ್ಟನೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?