AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಶಿಕ್ಷಕಿಯರ ಜೊತೆ ಅನುಚಿತ ವರ್ತನೆ ಆರೋಪ: ಶಿಕ್ಷಕನನ್ನು ವರ್ಗಾಯಿಸುವಂತೆ ಗ್ರಾಮಸ್ಥರ ಪಟ್ಟು

ಶಿಕ್ಷಕಿಯರ ಜೊತೆಗೆ ಅನುಚಿತ ವರ್ತನೆ ಹಾಗೂ ಮಕ್ಕಳಿಗೆ ಪಾಠ ಮಾಡದೇ ಸುತ್ತಾಡುತ್ತಿದ್ದಾರೆಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕನನ್ನು ವರ್ಗಾವಣೆ ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ದಾವಣಗೆರೆ: ಶಿಕ್ಷಕಿಯರ ಜೊತೆ ಅನುಚಿತ ವರ್ತನೆ ಆರೋಪ: ಶಿಕ್ಷಕನನ್ನು ವರ್ಗಾಯಿಸುವಂತೆ ಗ್ರಾಮಸ್ಥರ ಪಟ್ಟು
ಶಿಕ್ಷಕ ಅಜ್ಗರಾಲಿ ಖಾನ್
TV9 Web
| Edited By: |

Updated on: Feb 10, 2023 | 3:30 PM

Share

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಶಿಕ್ಷಕ ಅಜ್ಗರಾಲಿ ಖಾನ್ ಶಾಲೆಯ ಶಿಕ್ಷಕಿಯರ ಜೊತೆಗೆ ಅನುಚಿತ ವರ್ತನೆ ಹಾಗೂ ಮಕ್ಕಳಿಗೆ ಪಾಠ ಮಾಡದೇ ಸುತ್ತಾಡುತ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಕ ಅಜ್ಗರಾಲಿ ಖಾನ್​ನನ್ನು ವರ್ಗಾವಣೆಗೆ ಮಾಡಬೇಕೆಂದು ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಪ್ರತಿಭಟ‌ನೆ ನಡೆಸಿದರು.

ಈ ಸಂಬಂಧ ಬಿಇಓ‌ಕಡೆಯಿಂದ ವರದಿ ಪಡೆದು ಶಿಕ್ಷಕನ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಡಿಪಿಐ ತಿಪ್ಪೇಸ್ವಾಮಿ ಭರವಸೆ ನೀಡಿದ್ದಾರೆ. ವಿಶೇಷವಾಗಿ ಕೆಲ ಶಿಕ್ಷಕಿಯರು ಸಹ ಆರೋಪ ಮಾಡಿದ್ದು ಶಿಕ್ಷಕ ತಪ್ಪು ಮಾಡಿದ್ದಾನೆ ಎಂಬ ಸಂಶಯ ವ್ಯಕ್ತವಾಗಿದೆ. ಹಾಗೆ ಮುಸ್ಲಿಂ ಸಮಾಜದ ಗ್ರಾಮ ಪಂಚಾಯಿತ ಸದಸ್ಯರು ಶಿಕ್ಷಕನ ವಿರುದ್ದ ಧ್ವನಿ ಎತ್ತಿದ್ದಾರೆ‌.

ಶಾಲೆ ಸ್ಥಳ ಕಬಳಿಕೆ ಬಗ್ಗೆ ಹೋರಾಟದ ಹಿನ್ನೆಲೆ ನನ್ನ ಮೇಲೆ ಸುಳ್ಳು ಆರೋಪ

ಕಳೆದ 20 ವರ್ಷಗಳಿಂದ ಉರ್ದು ಶಾಲೆಯಲ್ಲಿ ‌ಕನ್ನಡ ಶಿಕ್ಷಕನಾಗಿ ಸೇವೆಯಲ್ಲಿ ಇರುವೆ. ಮಕ್ಕಳಿಗೆ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಎರಡು ದಶಕಗಳಿಂದ ಮಾಡುತ್ತಿರುವೆ. ಗ್ರಾಮ ಪಂಚಾಯತಿಗೆ ಹೋಗಿ ನಾನು ಶಾಲೆಯ ಜಮೀನು ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇ ಈ ವಿವಾದಕ್ಕೆ ಕಾರಣ ಎಂಬುದು ಆರೋಪ ಎದುರಿಸುತ್ತಿರುವ ಶಿಕ್ಷಕ ಅಜ್ಗರಾಲಿ ಖಾನ್ ಹೇಳಿದ್ದಾರೆ. ಹಾಗೇ ನಾನು ಯಾರಿಗೂ ತೊಂದರೆ ನೀಡಿಲ್ಲ. ಈ ಬಗ್ಗೆ ತನಿಖೆ ಆಗಲಿ ಎಂದು ಅವರು ಆಗ್ರಹಿಸಿದ್ದಾರೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್