AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಶಿಕ್ಷಕಿಯರ ಜೊತೆ ಅನುಚಿತ ವರ್ತನೆ ಆರೋಪ: ಶಿಕ್ಷಕನನ್ನು ವರ್ಗಾಯಿಸುವಂತೆ ಗ್ರಾಮಸ್ಥರ ಪಟ್ಟು

ಶಿಕ್ಷಕಿಯರ ಜೊತೆಗೆ ಅನುಚಿತ ವರ್ತನೆ ಹಾಗೂ ಮಕ್ಕಳಿಗೆ ಪಾಠ ಮಾಡದೇ ಸುತ್ತಾಡುತ್ತಿದ್ದಾರೆಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕನನ್ನು ವರ್ಗಾವಣೆ ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ದಾವಣಗೆರೆ: ಶಿಕ್ಷಕಿಯರ ಜೊತೆ ಅನುಚಿತ ವರ್ತನೆ ಆರೋಪ: ಶಿಕ್ಷಕನನ್ನು ವರ್ಗಾಯಿಸುವಂತೆ ಗ್ರಾಮಸ್ಥರ ಪಟ್ಟು
ಶಿಕ್ಷಕ ಅಜ್ಗರಾಲಿ ಖಾನ್
TV9 Web
| Edited By: |

Updated on: Feb 10, 2023 | 3:30 PM

Share

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಶಿಕ್ಷಕ ಅಜ್ಗರಾಲಿ ಖಾನ್ ಶಾಲೆಯ ಶಿಕ್ಷಕಿಯರ ಜೊತೆಗೆ ಅನುಚಿತ ವರ್ತನೆ ಹಾಗೂ ಮಕ್ಕಳಿಗೆ ಪಾಠ ಮಾಡದೇ ಸುತ್ತಾಡುತ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಕ ಅಜ್ಗರಾಲಿ ಖಾನ್​ನನ್ನು ವರ್ಗಾವಣೆಗೆ ಮಾಡಬೇಕೆಂದು ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಪ್ರತಿಭಟ‌ನೆ ನಡೆಸಿದರು.

ಈ ಸಂಬಂಧ ಬಿಇಓ‌ಕಡೆಯಿಂದ ವರದಿ ಪಡೆದು ಶಿಕ್ಷಕನ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಡಿಪಿಐ ತಿಪ್ಪೇಸ್ವಾಮಿ ಭರವಸೆ ನೀಡಿದ್ದಾರೆ. ವಿಶೇಷವಾಗಿ ಕೆಲ ಶಿಕ್ಷಕಿಯರು ಸಹ ಆರೋಪ ಮಾಡಿದ್ದು ಶಿಕ್ಷಕ ತಪ್ಪು ಮಾಡಿದ್ದಾನೆ ಎಂಬ ಸಂಶಯ ವ್ಯಕ್ತವಾಗಿದೆ. ಹಾಗೆ ಮುಸ್ಲಿಂ ಸಮಾಜದ ಗ್ರಾಮ ಪಂಚಾಯಿತ ಸದಸ್ಯರು ಶಿಕ್ಷಕನ ವಿರುದ್ದ ಧ್ವನಿ ಎತ್ತಿದ್ದಾರೆ‌.

ಶಾಲೆ ಸ್ಥಳ ಕಬಳಿಕೆ ಬಗ್ಗೆ ಹೋರಾಟದ ಹಿನ್ನೆಲೆ ನನ್ನ ಮೇಲೆ ಸುಳ್ಳು ಆರೋಪ

ಕಳೆದ 20 ವರ್ಷಗಳಿಂದ ಉರ್ದು ಶಾಲೆಯಲ್ಲಿ ‌ಕನ್ನಡ ಶಿಕ್ಷಕನಾಗಿ ಸೇವೆಯಲ್ಲಿ ಇರುವೆ. ಮಕ್ಕಳಿಗೆ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಎರಡು ದಶಕಗಳಿಂದ ಮಾಡುತ್ತಿರುವೆ. ಗ್ರಾಮ ಪಂಚಾಯತಿಗೆ ಹೋಗಿ ನಾನು ಶಾಲೆಯ ಜಮೀನು ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇ ಈ ವಿವಾದಕ್ಕೆ ಕಾರಣ ಎಂಬುದು ಆರೋಪ ಎದುರಿಸುತ್ತಿರುವ ಶಿಕ್ಷಕ ಅಜ್ಗರಾಲಿ ಖಾನ್ ಹೇಳಿದ್ದಾರೆ. ಹಾಗೇ ನಾನು ಯಾರಿಗೂ ತೊಂದರೆ ನೀಡಿಲ್ಲ. ಈ ಬಗ್ಗೆ ತನಿಖೆ ಆಗಲಿ ಎಂದು ಅವರು ಆಗ್ರಹಿಸಿದ್ದಾರೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ