AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು

ತಾವು ಬೆಳೆದ ಈರುಳ್ಳಿ ಬೆಳೆಯಲ್ಲಿ ಕೊಳೆ ರೋಗ ಕಂಡು ಬರುತ್ತಿದೆ. ಲೋಲೇಶ್ವರ ಗ್ರಾಮದ ಬಸವರಾಜಪ್ಪ, ರಾಜಪ್ಪಗೌಡ್ರು, ಪಂಪಾಪತಿ ಸೇರಿದಂತೆ ಹತ್ತಾರು ರೈತರು ಸುಮಾರು 1,500 ಎಕರೆ ಪ್ರದೇಶದಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ. ಬೆಳೆ ಕಟಾವು ಮಾಡಿ ತಿಪ್ಪೆಗೆ ಎಸೆದಿದ್ದಾರೆ.

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು
ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು
TV9 Web
| Updated By: ಆಯೇಷಾ ಬಾನು|

Updated on:Sep 17, 2021 | 1:55 PM

Share

ದಾವಣಗೆರೆ: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ ಶುರುವಾಗಿದೆ. ಈರುಳ್ಳಿ ಕಟಾವು ಮಾಡಿ ತಿಪ್ಪೆಗೆ ಎಸೆಯುವಂತ ಪರಿಸ್ಥಿತಿ ರೈತರಿಗೆ ಬಂದಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ಲೋಲೇಶ್ವರ ಸೇರಿದಂತೆ ಸುತ್ತಮತ್ತ 10 ಗ್ರಾಮಗಳ ರೈತರಿಗೆ ಸಂಕಷ್ಟ ಎದುರಾಗಿದೆ.

ತಾವು ಬೆಳೆದ ಈರುಳ್ಳಿ ಬೆಳೆಯಲ್ಲಿ ಕೊಳೆ ರೋಗ ಕಂಡು ಬರುತ್ತಿದೆ. ಲೋಲೇಶ್ವರ ಗ್ರಾಮದ ಬಸವರಾಜಪ್ಪ, ರಾಜಪ್ಪಗೌಡ್ರು, ಪಂಪಾಪತಿ ಸೇರಿದಂತೆ ಹತ್ತಾರು ರೈತರು ಸುಮಾರು 1,500 ಎಕರೆ ಪ್ರದೇಶದಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ. ಬೆಳೆ ಕಟಾವು ಮಾಡಿ ತಿಪ್ಪೆಗೆ ಎಸೆದಿದ್ದಾರೆ. ಅಲ್ಪ ಸ್ವಲ್ಪ ಉಳಿದ ಗುಣಮಟ್ಟದ ಈರುಳ್ಳಿ ಸಹ ಸೂಕ್ತ ಬೆಲೆ ಇಲ್ಲದ ಕಾರಣ. ಮಾರುಕಟ್ಟೆ ತೆಗೆದುಕೊಂದು ಹೋಗಲು ರೈತರು ಹಿಂದೇಟು ಹಾಕಿದ್ದಾರೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದು ರೈತರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಆಗ್ರಹಿಸಿದ್ದಾರೆ.

ಏನಿದು ಕೊಳೆರೋಗ? ಕೊಳೆರೋಗ ಒಂದು ಮಾದರಿಯ ಶಿಲೀಂದ್ರ ರೋಗ. ಭೂಮಿಯಲ್ಲಿ ತೇವಾಂಶ ಹೆಚ್ಚಾದಾಗ ಈರುಳ್ಳಿ ಬೆಳೆಗೆ ಈ ರೋಗ ಬರುತ್ತೆ. ಇನ್ನು ಸಾಮಾನ್ಯವಾಗಿ ಪ್ಯುಸೇರಿಯಂ ಕೊಳೆರೋಗ, ಫೈಥಿಯಂ ಮತ್ತು ಆಲ್ಟರ್ನೇರಿಯಾ ಕೊಳೆರೋಗಗಳು ಈರುಳ್ಳಿಗೆ ಬರುತ್ತವೆ. ಈರುಳ್ಳಿ ಬೆಳೆಗಳು ಕೊಳೆತು ಹೋಗುತ್ತವೆ.

onion diseases

ಈರುಳ್ಳಿ ಕಟಾವು ಮಾಡಿ ತಿಪ್ಪೆಗೆ ಎಸೆಯುತ್ತಿರುವ ರೈತರು

ಇದನ್ನೂ ಓದಿ: ಬಾಗಲಕೋಟೆ: ರೈತರಲ್ಲಿ ಆತಂಕ ಸೃಷ್ಟಿಸಿದ ಮೋಡ ಕವಿದ ವಾತಾವರಣ; ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ

Published On - 9:26 am, Fri, 17 September 21

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್