AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಿನಲ್ಲಿ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಾಕಾರಿ ಹೇಳಿಕೆ ಆರೋಪ; ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು

ಹರಿಹರ(Harihara) ತಾಲೂಕಿನ ಮಲೇಬೆನ್ನೂರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರು, ಮಕ್ಕಳಿಗೆ ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಸರ್ಕಾರಿ ಕಾಲೇಜು ಉಪನ್ಯಾಸಕನ ವಿರುದ್ಧ ಎಫ್​ಐಆರ್(FIR) ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಲೇಜಿನಲ್ಲಿ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಾಕಾರಿ ಹೇಳಿಕೆ ಆರೋಪ; ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು
ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 27, 2023 | 5:46 PM

Share

ದಾವಣಗೆರೆ, ಡಿ.27: ಮಕ್ಕಳಿಗೆ ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಸರ್ಕಾರಿ ಕಾಲೇಜು ಉಪನ್ಯಾಸಕನ ವಿರುದ್ಧ ಎಫ್​ಐಆರ್(FIR) ದಾಖಲಾಗಿದೆ. ಹರಿಹರ(Harihara) ತಾಲೂಕಿನ ಮಲೇಬೆನ್ನೂರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರಾದ ಮಲ್ಲಿಕಾರ್ಜುನ ಎಂ ಬಿ ಎನ್ನುವವರ ಮೇಲೆ ವಿದ್ಯಾರ್ಥಿಗಳ ಪಾಲಕರು ದೂರು ದಾಖಲಿಸಿದ್ದರು. ಪಿಯು ವಿಜ್ಞಾನ ವಿಭಾಗದ ಮಕ್ಕಳಿಗೆ ‘ವೋಟರ್’ ಎಂಬ ಪಾಠ ಮಾಡುವಾಗ ಸಂವಿಧಾನ, ಅಂಬೇಡ್ಕರ್​ ಮತ್ತು ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಆಗಿ ನಿಂದನೆಯ ಜೊತೆಗೆ ಮಕ್ಕಳಿಗೆ ಬೇರೆ ಬೇರೆ ಕೋಮುಗಳೆಂದು‌ ಪಾಠ ಮಾಡಿದ್ದರಂತೆ.

ಪೋಷಕರಿಗೆ ಹೇಳಿದ ವಿದ್ಯಾರ್ಥಿಗಳು

ಇನ್ನು ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಪಾಠ ಕೇಳಿದ ವಿದ್ಯಾರ್ಥಿಗಳು, ಮನೆಗೆ ಬಂದು ಪೋಷಕರಿಗೆ ಹೇಳಿದ್ದಾರೆ. ಈ ಹಿನ್ನಲೆ ಆಕ್ರೋಶಗೊಂಡ ಪಾಲಕರಲ್ಲಿ ಒಬ್ಬರಾದ ಬಿ.ಸೌಖತ್ ಅಲಿ ಎಂಬುವವರು ‘ಉಪನ್ಯಾಸಕ ಮಲ್ಲಿಕಾರ್ಜುನ್ ಅವರ ಪಾಠ ಕೇಳಿ ಮನೆಗೆ ಬಂದ ನನ್ನ ಮಗ, ಘಟನೆ ಕುರಿತು ಹೇಳಿದ್ದ.

ಇದನ್ನೂ ಓದಿ:ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್

ಈ ಕುರಿತು ಇತರ ವಿದ್ಯಾರ್ಥಿಗಳನ್ನು ಸಹ ವಿಚಾರಿಸಿದಾಗ ಘಟನೆ ನಡೆದಿದ್ದು ನಿಜವಾಗಿದೆ. ಈ ಹಿನ್ನಲೆ ದೂರು ನೀಡಲಾಗಿದೆ. ಈ ಮೂಲಕ ಇಂತಹ ಕೋಮು ಭಾವನೆ ಕೇರಳಿಸುವ ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಐಪಿಸಿ ಕಲಂ 505(2) ಅಡಿ ಎಫ್ ಐ ಆರ್ ದಾಖಲು ಮಾಡಲಾಗಿದ್ದು, ಮಲೇಬೆನ್ನೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Wed, 27 December 23

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?