AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಿನಲ್ಲಿ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಾಕಾರಿ ಹೇಳಿಕೆ ಆರೋಪ; ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು

ಹರಿಹರ(Harihara) ತಾಲೂಕಿನ ಮಲೇಬೆನ್ನೂರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರು, ಮಕ್ಕಳಿಗೆ ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಸರ್ಕಾರಿ ಕಾಲೇಜು ಉಪನ್ಯಾಸಕನ ವಿರುದ್ಧ ಎಫ್​ಐಆರ್(FIR) ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಲೇಜಿನಲ್ಲಿ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಾಕಾರಿ ಹೇಳಿಕೆ ಆರೋಪ; ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು
ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Dec 27, 2023 | 5:46 PM

Share

ದಾವಣಗೆರೆ, ಡಿ.27: ಮಕ್ಕಳಿಗೆ ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಸರ್ಕಾರಿ ಕಾಲೇಜು ಉಪನ್ಯಾಸಕನ ವಿರುದ್ಧ ಎಫ್​ಐಆರ್(FIR) ದಾಖಲಾಗಿದೆ. ಹರಿಹರ(Harihara) ತಾಲೂಕಿನ ಮಲೇಬೆನ್ನೂರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರಾದ ಮಲ್ಲಿಕಾರ್ಜುನ ಎಂ ಬಿ ಎನ್ನುವವರ ಮೇಲೆ ವಿದ್ಯಾರ್ಥಿಗಳ ಪಾಲಕರು ದೂರು ದಾಖಲಿಸಿದ್ದರು. ಪಿಯು ವಿಜ್ಞಾನ ವಿಭಾಗದ ಮಕ್ಕಳಿಗೆ ‘ವೋಟರ್’ ಎಂಬ ಪಾಠ ಮಾಡುವಾಗ ಸಂವಿಧಾನ, ಅಂಬೇಡ್ಕರ್​ ಮತ್ತು ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಆಗಿ ನಿಂದನೆಯ ಜೊತೆಗೆ ಮಕ್ಕಳಿಗೆ ಬೇರೆ ಬೇರೆ ಕೋಮುಗಳೆಂದು‌ ಪಾಠ ಮಾಡಿದ್ದರಂತೆ.

ಪೋಷಕರಿಗೆ ಹೇಳಿದ ವಿದ್ಯಾರ್ಥಿಗಳು

ಇನ್ನು ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಪಾಠ ಕೇಳಿದ ವಿದ್ಯಾರ್ಥಿಗಳು, ಮನೆಗೆ ಬಂದು ಪೋಷಕರಿಗೆ ಹೇಳಿದ್ದಾರೆ. ಈ ಹಿನ್ನಲೆ ಆಕ್ರೋಶಗೊಂಡ ಪಾಲಕರಲ್ಲಿ ಒಬ್ಬರಾದ ಬಿ.ಸೌಖತ್ ಅಲಿ ಎಂಬುವವರು ‘ಉಪನ್ಯಾಸಕ ಮಲ್ಲಿಕಾರ್ಜುನ್ ಅವರ ಪಾಠ ಕೇಳಿ ಮನೆಗೆ ಬಂದ ನನ್ನ ಮಗ, ಘಟನೆ ಕುರಿತು ಹೇಳಿದ್ದ.

ಇದನ್ನೂ ಓದಿ:ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್

ಈ ಕುರಿತು ಇತರ ವಿದ್ಯಾರ್ಥಿಗಳನ್ನು ಸಹ ವಿಚಾರಿಸಿದಾಗ ಘಟನೆ ನಡೆದಿದ್ದು ನಿಜವಾಗಿದೆ. ಈ ಹಿನ್ನಲೆ ದೂರು ನೀಡಲಾಗಿದೆ. ಈ ಮೂಲಕ ಇಂತಹ ಕೋಮು ಭಾವನೆ ಕೇರಳಿಸುವ ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಐಪಿಸಿ ಕಲಂ 505(2) ಅಡಿ ಎಫ್ ಐ ಆರ್ ದಾಖಲು ಮಾಡಲಾಗಿದ್ದು, ಮಲೇಬೆನ್ನೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Wed, 27 December 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?