AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಿನಲ್ಲಿ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಾಕಾರಿ ಹೇಳಿಕೆ ಆರೋಪ; ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು

ಹರಿಹರ(Harihara) ತಾಲೂಕಿನ ಮಲೇಬೆನ್ನೂರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರು, ಮಕ್ಕಳಿಗೆ ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಸರ್ಕಾರಿ ಕಾಲೇಜು ಉಪನ್ಯಾಸಕನ ವಿರುದ್ಧ ಎಫ್​ಐಆರ್(FIR) ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಲೇಜಿನಲ್ಲಿ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಾಕಾರಿ ಹೇಳಿಕೆ ಆರೋಪ; ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು
ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Dec 27, 2023 | 5:46 PM

Share

ದಾವಣಗೆರೆ, ಡಿ.27: ಮಕ್ಕಳಿಗೆ ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಸರ್ಕಾರಿ ಕಾಲೇಜು ಉಪನ್ಯಾಸಕನ ವಿರುದ್ಧ ಎಫ್​ಐಆರ್(FIR) ದಾಖಲಾಗಿದೆ. ಹರಿಹರ(Harihara) ತಾಲೂಕಿನ ಮಲೇಬೆನ್ನೂರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರಾದ ಮಲ್ಲಿಕಾರ್ಜುನ ಎಂ ಬಿ ಎನ್ನುವವರ ಮೇಲೆ ವಿದ್ಯಾರ್ಥಿಗಳ ಪಾಲಕರು ದೂರು ದಾಖಲಿಸಿದ್ದರು. ಪಿಯು ವಿಜ್ಞಾನ ವಿಭಾಗದ ಮಕ್ಕಳಿಗೆ ‘ವೋಟರ್’ ಎಂಬ ಪಾಠ ಮಾಡುವಾಗ ಸಂವಿಧಾನ, ಅಂಬೇಡ್ಕರ್​ ಮತ್ತು ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಆಗಿ ನಿಂದನೆಯ ಜೊತೆಗೆ ಮಕ್ಕಳಿಗೆ ಬೇರೆ ಬೇರೆ ಕೋಮುಗಳೆಂದು‌ ಪಾಠ ಮಾಡಿದ್ದರಂತೆ.

ಪೋಷಕರಿಗೆ ಹೇಳಿದ ವಿದ್ಯಾರ್ಥಿಗಳು

ಇನ್ನು ರಾಷ್ಟ್ರ ನಾಯಕರ ಬಗ್ಗೆ ಅವಹೇಳನಕಾರಿ ಪಾಠ ಕೇಳಿದ ವಿದ್ಯಾರ್ಥಿಗಳು, ಮನೆಗೆ ಬಂದು ಪೋಷಕರಿಗೆ ಹೇಳಿದ್ದಾರೆ. ಈ ಹಿನ್ನಲೆ ಆಕ್ರೋಶಗೊಂಡ ಪಾಲಕರಲ್ಲಿ ಒಬ್ಬರಾದ ಬಿ.ಸೌಖತ್ ಅಲಿ ಎಂಬುವವರು ‘ಉಪನ್ಯಾಸಕ ಮಲ್ಲಿಕಾರ್ಜುನ್ ಅವರ ಪಾಠ ಕೇಳಿ ಮನೆಗೆ ಬಂದ ನನ್ನ ಮಗ, ಘಟನೆ ಕುರಿತು ಹೇಳಿದ್ದ.

ಇದನ್ನೂ ಓದಿ:ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್

ಈ ಕುರಿತು ಇತರ ವಿದ್ಯಾರ್ಥಿಗಳನ್ನು ಸಹ ವಿಚಾರಿಸಿದಾಗ ಘಟನೆ ನಡೆದಿದ್ದು ನಿಜವಾಗಿದೆ. ಈ ಹಿನ್ನಲೆ ದೂರು ನೀಡಲಾಗಿದೆ. ಈ ಮೂಲಕ ಇಂತಹ ಕೋಮು ಭಾವನೆ ಕೇರಳಿಸುವ ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಐಪಿಸಿ ಕಲಂ 505(2) ಅಡಿ ಎಫ್ ಐ ಆರ್ ದಾಖಲು ಮಾಡಲಾಗಿದ್ದು, ಮಲೇಬೆನ್ನೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Wed, 27 December 23

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ