AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ

ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ
ಅರ್ಜುನ್ ಹಲಕುರ್ಕಿ
TV9 Web
| Edited By: |

Updated on: Apr 20, 2022 | 3:48 PM

Share

ದಾವಣಗೆರೆ: ಬಾಗಲಕೋಟೆ ಮೂಲದ ಅರ್ಜುನ್ ಹಲಕುರ್ಕಿ ಎಂಬ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದಾರೆ. ಮಂಗೋಲಿಯಾದಲ್ಲಿ ನಡೆದ 55 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಹೆಮ್ಮೆಯ ಕನ್ನಡಿಗರಾಗಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅರ್ಜುನ್ ಹಲಕುರ್ಕಿ ಸಾಧನೆಗೆ ತರಬೇತುದಾರ ಶಿವಾನಂದ ಹರ್ಷ ವ್ಯಕ್ತಪಡಿಸಿದ್ದಾರೆ.

ಅರ್ಜುನ್ ಹಲಕುರ್ಕಿ ಅಪ್ಪಟ ಹಳ್ಳಿಯ ಹುಡುಗ. ಉತ್ತರ ಕರ್ನಾಟಕದ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಕಸರತ್ತು ಮಾಡಿ ಈಗ ದೇಶದ ಗಮನ ಸೆಳೆಯುತ್ತಿದ್ದಾರೆ. ಮೂಲತ ಬಾಗಲಕೋಟೆ ಜಿಲ್ಲೆಯ ಬೇವಿನಮಟ್ಟಿ ಗ್ರಾಮದ ಅರ್ಜುನ್, ಏಕಲವ್ಯನಂತೆ ನಿರಂತರ ಪರಿಶ್ರಮ ವಹಿಸಿ ಸುತ್ತ ಹಳ್ಳಿಗಳಲ್ಲಿ ಹತ್ತಾರು ಪೈಲ್ವಾನ್ ರನ್ನ ಸೋಲಿಸಿ ಹೆಸರು ಮಾಡಿದ್ದರು. ಇಂತಹ ಯುವಕನಿಗೆ ಇನ್ನಷ್ಟು ಕೌಶಲ್ಯ ಬೇಕಾಗಿತ್ತು. ಅದಕ್ಕೆ ವೇದಿಕೆ ಆಗಿದ್ದು ದಾವಣಗೆರೆ ಕ್ರೀಡಾ ಹಾಸ್ಟೆಲ್. ಇಲ್ಲಿನ ಅಂತರಾಷ್ಟ್ರೀಯ ಕುಸ್ತಿ ತರಬೇತುದಾರ ಶಿವಾನಂದ ಅವರ ಬಳಿ ಸತತ ಎಂಟು ವರ್ಷಗಳ ಕಾಲ ತರಬೇತಿ ಪಡೆದ ಅರ್ಜುನ್ ಈಗ ದೇಶ – ವಿದೇಶಗಳಲ್ಲಿ ಹೆಸರು ಗಳಿಸುತ್ತಿದ್ದಾರೆ. ಈ ಹಿಂದೆ ಜ್ಯೂನಿಯರ್ ವಿಭಾಗದಲ್ಲಿ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಸಹ ಕಂಚಿನ‌ ಪದಕ ಗೆದ್ದು ಸುದ್ದಿ ಆಗಿದ್ದರು.

ಸೀನಿಯರ್ ವಿಭಾಗದಲ್ಲೂ ಕಂಚಿನ ಪದಕ ಗೆದ್ದ ಅರ್ಜುನ ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಾವಬಂದಿ ಮುಖಾ ಅವರ ವಿರುದ್ಧ 10-07 ರಿಂದ ಗೆದ್ದು ಅರ್ಜುನ ಬರುವ ದಿನಗಳಲ್ಲಿ ಓಲಂಪಿಕ್ ನಲ್ಲಿ ದೇಶವನ್ನ ಪ್ರತಿನಿಧಿವ ತಂಡದಲ್ಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಆರ್ಮಿಯಲ್ಲಿ ನೇಮಕ ಆಗಿರುವ ಅರ್ಜುನ ಸದ್ಯ ಹವಾಲ್ದಾರ ಹುದ್ದೆಯಲ್ಲಿದ್ದಾರೆ‌. ದಿನಕ್ಕೆ ಕನಿಷ್ಟ ಹತ್ತು ಗಂಟೆಗಳ ಕಾಲ ಕಸರತ್ತು ನಡೆಸುವ ಅರ್ಜುನ ದೇಶಕ್ಕೆ ಆಸ್ತಿ ಆಗಲಿದ್ದಾರೆ.

ಇದನ್ನೂ ಓದಿ: ತನ್ನ ಗ್ರಾಮಕ್ಕೆ ರಸ್ತೆ, ನೀರಿನ ಸೌಲಭ್ಯವಿಲ್ಲ ಎಂದ ಯುವಕನಿಗೆ ಪಾವಗಡದ ಕಾಂಗ್ರೆಸ್ ಶಾಸಕರಿಂದ ಕಪಾಳಮೋಕ್ಷ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!