AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ

ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ
ಅರ್ಜುನ್ ಹಲಕುರ್ಕಿ
TV9 Web
| Edited By: |

Updated on: Apr 20, 2022 | 3:48 PM

Share

ದಾವಣಗೆರೆ: ಬಾಗಲಕೋಟೆ ಮೂಲದ ಅರ್ಜುನ್ ಹಲಕುರ್ಕಿ ಎಂಬ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದಾರೆ. ಮಂಗೋಲಿಯಾದಲ್ಲಿ ನಡೆದ 55 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಹೆಮ್ಮೆಯ ಕನ್ನಡಿಗರಾಗಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅರ್ಜುನ್ ಹಲಕುರ್ಕಿ ಸಾಧನೆಗೆ ತರಬೇತುದಾರ ಶಿವಾನಂದ ಹರ್ಷ ವ್ಯಕ್ತಪಡಿಸಿದ್ದಾರೆ.

ಅರ್ಜುನ್ ಹಲಕುರ್ಕಿ ಅಪ್ಪಟ ಹಳ್ಳಿಯ ಹುಡುಗ. ಉತ್ತರ ಕರ್ನಾಟಕದ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಕಸರತ್ತು ಮಾಡಿ ಈಗ ದೇಶದ ಗಮನ ಸೆಳೆಯುತ್ತಿದ್ದಾರೆ. ಮೂಲತ ಬಾಗಲಕೋಟೆ ಜಿಲ್ಲೆಯ ಬೇವಿನಮಟ್ಟಿ ಗ್ರಾಮದ ಅರ್ಜುನ್, ಏಕಲವ್ಯನಂತೆ ನಿರಂತರ ಪರಿಶ್ರಮ ವಹಿಸಿ ಸುತ್ತ ಹಳ್ಳಿಗಳಲ್ಲಿ ಹತ್ತಾರು ಪೈಲ್ವಾನ್ ರನ್ನ ಸೋಲಿಸಿ ಹೆಸರು ಮಾಡಿದ್ದರು. ಇಂತಹ ಯುವಕನಿಗೆ ಇನ್ನಷ್ಟು ಕೌಶಲ್ಯ ಬೇಕಾಗಿತ್ತು. ಅದಕ್ಕೆ ವೇದಿಕೆ ಆಗಿದ್ದು ದಾವಣಗೆರೆ ಕ್ರೀಡಾ ಹಾಸ್ಟೆಲ್. ಇಲ್ಲಿನ ಅಂತರಾಷ್ಟ್ರೀಯ ಕುಸ್ತಿ ತರಬೇತುದಾರ ಶಿವಾನಂದ ಅವರ ಬಳಿ ಸತತ ಎಂಟು ವರ್ಷಗಳ ಕಾಲ ತರಬೇತಿ ಪಡೆದ ಅರ್ಜುನ್ ಈಗ ದೇಶ – ವಿದೇಶಗಳಲ್ಲಿ ಹೆಸರು ಗಳಿಸುತ್ತಿದ್ದಾರೆ. ಈ ಹಿಂದೆ ಜ್ಯೂನಿಯರ್ ವಿಭಾಗದಲ್ಲಿ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಸಹ ಕಂಚಿನ‌ ಪದಕ ಗೆದ್ದು ಸುದ್ದಿ ಆಗಿದ್ದರು.

ಸೀನಿಯರ್ ವಿಭಾಗದಲ್ಲೂ ಕಂಚಿನ ಪದಕ ಗೆದ್ದ ಅರ್ಜುನ ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಾವಬಂದಿ ಮುಖಾ ಅವರ ವಿರುದ್ಧ 10-07 ರಿಂದ ಗೆದ್ದು ಅರ್ಜುನ ಬರುವ ದಿನಗಳಲ್ಲಿ ಓಲಂಪಿಕ್ ನಲ್ಲಿ ದೇಶವನ್ನ ಪ್ರತಿನಿಧಿವ ತಂಡದಲ್ಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಆರ್ಮಿಯಲ್ಲಿ ನೇಮಕ ಆಗಿರುವ ಅರ್ಜುನ ಸದ್ಯ ಹವಾಲ್ದಾರ ಹುದ್ದೆಯಲ್ಲಿದ್ದಾರೆ‌. ದಿನಕ್ಕೆ ಕನಿಷ್ಟ ಹತ್ತು ಗಂಟೆಗಳ ಕಾಲ ಕಸರತ್ತು ನಡೆಸುವ ಅರ್ಜುನ ದೇಶಕ್ಕೆ ಆಸ್ತಿ ಆಗಲಿದ್ದಾರೆ.

ಇದನ್ನೂ ಓದಿ: ತನ್ನ ಗ್ರಾಮಕ್ಕೆ ರಸ್ತೆ, ನೀರಿನ ಸೌಲಭ್ಯವಿಲ್ಲ ಎಂದ ಯುವಕನಿಗೆ ಪಾವಗಡದ ಕಾಂಗ್ರೆಸ್ ಶಾಸಕರಿಂದ ಕಪಾಳಮೋಕ್ಷ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ