AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ

ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ
ಅರ್ಜುನ್ ಹಲಕುರ್ಕಿ
TV9 Web
| Edited By: |

Updated on: Apr 20, 2022 | 3:48 PM

Share

ದಾವಣಗೆರೆ: ಬಾಗಲಕೋಟೆ ಮೂಲದ ಅರ್ಜುನ್ ಹಲಕುರ್ಕಿ ಎಂಬ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದಾರೆ. ಮಂಗೋಲಿಯಾದಲ್ಲಿ ನಡೆದ 55 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಹೆಮ್ಮೆಯ ಕನ್ನಡಿಗರಾಗಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅರ್ಜುನ್ ಹಲಕುರ್ಕಿ ಸಾಧನೆಗೆ ತರಬೇತುದಾರ ಶಿವಾನಂದ ಹರ್ಷ ವ್ಯಕ್ತಪಡಿಸಿದ್ದಾರೆ.

ಅರ್ಜುನ್ ಹಲಕುರ್ಕಿ ಅಪ್ಪಟ ಹಳ್ಳಿಯ ಹುಡುಗ. ಉತ್ತರ ಕರ್ನಾಟಕದ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಕಸರತ್ತು ಮಾಡಿ ಈಗ ದೇಶದ ಗಮನ ಸೆಳೆಯುತ್ತಿದ್ದಾರೆ. ಮೂಲತ ಬಾಗಲಕೋಟೆ ಜಿಲ್ಲೆಯ ಬೇವಿನಮಟ್ಟಿ ಗ್ರಾಮದ ಅರ್ಜುನ್, ಏಕಲವ್ಯನಂತೆ ನಿರಂತರ ಪರಿಶ್ರಮ ವಹಿಸಿ ಸುತ್ತ ಹಳ್ಳಿಗಳಲ್ಲಿ ಹತ್ತಾರು ಪೈಲ್ವಾನ್ ರನ್ನ ಸೋಲಿಸಿ ಹೆಸರು ಮಾಡಿದ್ದರು. ಇಂತಹ ಯುವಕನಿಗೆ ಇನ್ನಷ್ಟು ಕೌಶಲ್ಯ ಬೇಕಾಗಿತ್ತು. ಅದಕ್ಕೆ ವೇದಿಕೆ ಆಗಿದ್ದು ದಾವಣಗೆರೆ ಕ್ರೀಡಾ ಹಾಸ್ಟೆಲ್. ಇಲ್ಲಿನ ಅಂತರಾಷ್ಟ್ರೀಯ ಕುಸ್ತಿ ತರಬೇತುದಾರ ಶಿವಾನಂದ ಅವರ ಬಳಿ ಸತತ ಎಂಟು ವರ್ಷಗಳ ಕಾಲ ತರಬೇತಿ ಪಡೆದ ಅರ್ಜುನ್ ಈಗ ದೇಶ – ವಿದೇಶಗಳಲ್ಲಿ ಹೆಸರು ಗಳಿಸುತ್ತಿದ್ದಾರೆ. ಈ ಹಿಂದೆ ಜ್ಯೂನಿಯರ್ ವಿಭಾಗದಲ್ಲಿ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಸಹ ಕಂಚಿನ‌ ಪದಕ ಗೆದ್ದು ಸುದ್ದಿ ಆಗಿದ್ದರು.

ಸೀನಿಯರ್ ವಿಭಾಗದಲ್ಲೂ ಕಂಚಿನ ಪದಕ ಗೆದ್ದ ಅರ್ಜುನ ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಾವಬಂದಿ ಮುಖಾ ಅವರ ವಿರುದ್ಧ 10-07 ರಿಂದ ಗೆದ್ದು ಅರ್ಜುನ ಬರುವ ದಿನಗಳಲ್ಲಿ ಓಲಂಪಿಕ್ ನಲ್ಲಿ ದೇಶವನ್ನ ಪ್ರತಿನಿಧಿವ ತಂಡದಲ್ಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಆರ್ಮಿಯಲ್ಲಿ ನೇಮಕ ಆಗಿರುವ ಅರ್ಜುನ ಸದ್ಯ ಹವಾಲ್ದಾರ ಹುದ್ದೆಯಲ್ಲಿದ್ದಾರೆ‌. ದಿನಕ್ಕೆ ಕನಿಷ್ಟ ಹತ್ತು ಗಂಟೆಗಳ ಕಾಲ ಕಸರತ್ತು ನಡೆಸುವ ಅರ್ಜುನ ದೇಶಕ್ಕೆ ಆಸ್ತಿ ಆಗಲಿದ್ದಾರೆ.

ಇದನ್ನೂ ಓದಿ: ತನ್ನ ಗ್ರಾಮಕ್ಕೆ ರಸ್ತೆ, ನೀರಿನ ಸೌಲಭ್ಯವಿಲ್ಲ ಎಂದ ಯುವಕನಿಗೆ ಪಾವಗಡದ ಕಾಂಗ್ರೆಸ್ ಶಾಸಕರಿಂದ ಕಪಾಳಮೋಕ್ಷ

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌