AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ

ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ
ಅರ್ಜುನ್ ಹಲಕುರ್ಕಿ
TV9 Web
| Edited By: |

Updated on: Apr 20, 2022 | 3:48 PM

Share

ದಾವಣಗೆರೆ: ಬಾಗಲಕೋಟೆ ಮೂಲದ ಅರ್ಜುನ್ ಹಲಕುರ್ಕಿ ಎಂಬ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದಾರೆ. ಮಂಗೋಲಿಯಾದಲ್ಲಿ ನಡೆದ 55 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಹೆಮ್ಮೆಯ ಕನ್ನಡಿಗರಾಗಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅರ್ಜುನ್ ಹಲಕುರ್ಕಿ ಸಾಧನೆಗೆ ತರಬೇತುದಾರ ಶಿವಾನಂದ ಹರ್ಷ ವ್ಯಕ್ತಪಡಿಸಿದ್ದಾರೆ.

ಅರ್ಜುನ್ ಹಲಕುರ್ಕಿ ಅಪ್ಪಟ ಹಳ್ಳಿಯ ಹುಡುಗ. ಉತ್ತರ ಕರ್ನಾಟಕದ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಕಸರತ್ತು ಮಾಡಿ ಈಗ ದೇಶದ ಗಮನ ಸೆಳೆಯುತ್ತಿದ್ದಾರೆ. ಮೂಲತ ಬಾಗಲಕೋಟೆ ಜಿಲ್ಲೆಯ ಬೇವಿನಮಟ್ಟಿ ಗ್ರಾಮದ ಅರ್ಜುನ್, ಏಕಲವ್ಯನಂತೆ ನಿರಂತರ ಪರಿಶ್ರಮ ವಹಿಸಿ ಸುತ್ತ ಹಳ್ಳಿಗಳಲ್ಲಿ ಹತ್ತಾರು ಪೈಲ್ವಾನ್ ರನ್ನ ಸೋಲಿಸಿ ಹೆಸರು ಮಾಡಿದ್ದರು. ಇಂತಹ ಯುವಕನಿಗೆ ಇನ್ನಷ್ಟು ಕೌಶಲ್ಯ ಬೇಕಾಗಿತ್ತು. ಅದಕ್ಕೆ ವೇದಿಕೆ ಆಗಿದ್ದು ದಾವಣಗೆರೆ ಕ್ರೀಡಾ ಹಾಸ್ಟೆಲ್. ಇಲ್ಲಿನ ಅಂತರಾಷ್ಟ್ರೀಯ ಕುಸ್ತಿ ತರಬೇತುದಾರ ಶಿವಾನಂದ ಅವರ ಬಳಿ ಸತತ ಎಂಟು ವರ್ಷಗಳ ಕಾಲ ತರಬೇತಿ ಪಡೆದ ಅರ್ಜುನ್ ಈಗ ದೇಶ – ವಿದೇಶಗಳಲ್ಲಿ ಹೆಸರು ಗಳಿಸುತ್ತಿದ್ದಾರೆ. ಈ ಹಿಂದೆ ಜ್ಯೂನಿಯರ್ ವಿಭಾಗದಲ್ಲಿ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಸಹ ಕಂಚಿನ‌ ಪದಕ ಗೆದ್ದು ಸುದ್ದಿ ಆಗಿದ್ದರು.

ಸೀನಿಯರ್ ವಿಭಾಗದಲ್ಲೂ ಕಂಚಿನ ಪದಕ ಗೆದ್ದ ಅರ್ಜುನ ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಾವಬಂದಿ ಮುಖಾ ಅವರ ವಿರುದ್ಧ 10-07 ರಿಂದ ಗೆದ್ದು ಅರ್ಜುನ ಬರುವ ದಿನಗಳಲ್ಲಿ ಓಲಂಪಿಕ್ ನಲ್ಲಿ ದೇಶವನ್ನ ಪ್ರತಿನಿಧಿವ ತಂಡದಲ್ಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಆರ್ಮಿಯಲ್ಲಿ ನೇಮಕ ಆಗಿರುವ ಅರ್ಜುನ ಸದ್ಯ ಹವಾಲ್ದಾರ ಹುದ್ದೆಯಲ್ಲಿದ್ದಾರೆ‌. ದಿನಕ್ಕೆ ಕನಿಷ್ಟ ಹತ್ತು ಗಂಟೆಗಳ ಕಾಲ ಕಸರತ್ತು ನಡೆಸುವ ಅರ್ಜುನ ದೇಶಕ್ಕೆ ಆಸ್ತಿ ಆಗಲಿದ್ದಾರೆ.

ಇದನ್ನೂ ಓದಿ: ತನ್ನ ಗ್ರಾಮಕ್ಕೆ ರಸ್ತೆ, ನೀರಿನ ಸೌಲಭ್ಯವಿಲ್ಲ ಎಂದ ಯುವಕನಿಗೆ ಪಾವಗಡದ ಕಾಂಗ್ರೆಸ್ ಶಾಸಕರಿಂದ ಕಪಾಳಮೋಕ್ಷ

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ