Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ

ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ
ಅರ್ಜುನ್ ಹಲಕುರ್ಕಿ
Follow us
TV9 Web
| Updated By: ಆಯೇಷಾ ಬಾನು

Updated on: Apr 20, 2022 | 3:48 PM

ದಾವಣಗೆರೆ: ಬಾಗಲಕೋಟೆ ಮೂಲದ ಅರ್ಜುನ್ ಹಲಕುರ್ಕಿ ಎಂಬ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದಾರೆ. ಮಂಗೋಲಿಯಾದಲ್ಲಿ ನಡೆದ 55 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಹೆಮ್ಮೆಯ ಕನ್ನಡಿಗರಾಗಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅರ್ಜುನ್ ಹಲಕುರ್ಕಿ ಸಾಧನೆಗೆ ತರಬೇತುದಾರ ಶಿವಾನಂದ ಹರ್ಷ ವ್ಯಕ್ತಪಡಿಸಿದ್ದಾರೆ.

ಅರ್ಜುನ್ ಹಲಕುರ್ಕಿ ಅಪ್ಪಟ ಹಳ್ಳಿಯ ಹುಡುಗ. ಉತ್ತರ ಕರ್ನಾಟಕದ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಕಸರತ್ತು ಮಾಡಿ ಈಗ ದೇಶದ ಗಮನ ಸೆಳೆಯುತ್ತಿದ್ದಾರೆ. ಮೂಲತ ಬಾಗಲಕೋಟೆ ಜಿಲ್ಲೆಯ ಬೇವಿನಮಟ್ಟಿ ಗ್ರಾಮದ ಅರ್ಜುನ್, ಏಕಲವ್ಯನಂತೆ ನಿರಂತರ ಪರಿಶ್ರಮ ವಹಿಸಿ ಸುತ್ತ ಹಳ್ಳಿಗಳಲ್ಲಿ ಹತ್ತಾರು ಪೈಲ್ವಾನ್ ರನ್ನ ಸೋಲಿಸಿ ಹೆಸರು ಮಾಡಿದ್ದರು. ಇಂತಹ ಯುವಕನಿಗೆ ಇನ್ನಷ್ಟು ಕೌಶಲ್ಯ ಬೇಕಾಗಿತ್ತು. ಅದಕ್ಕೆ ವೇದಿಕೆ ಆಗಿದ್ದು ದಾವಣಗೆರೆ ಕ್ರೀಡಾ ಹಾಸ್ಟೆಲ್. ಇಲ್ಲಿನ ಅಂತರಾಷ್ಟ್ರೀಯ ಕುಸ್ತಿ ತರಬೇತುದಾರ ಶಿವಾನಂದ ಅವರ ಬಳಿ ಸತತ ಎಂಟು ವರ್ಷಗಳ ಕಾಲ ತರಬೇತಿ ಪಡೆದ ಅರ್ಜುನ್ ಈಗ ದೇಶ – ವಿದೇಶಗಳಲ್ಲಿ ಹೆಸರು ಗಳಿಸುತ್ತಿದ್ದಾರೆ. ಈ ಹಿಂದೆ ಜ್ಯೂನಿಯರ್ ವಿಭಾಗದಲ್ಲಿ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಸಹ ಕಂಚಿನ‌ ಪದಕ ಗೆದ್ದು ಸುದ್ದಿ ಆಗಿದ್ದರು.

ಸೀನಿಯರ್ ವಿಭಾಗದಲ್ಲೂ ಕಂಚಿನ ಪದಕ ಗೆದ್ದ ಅರ್ಜುನ ಮಂಗೋಲಿಯಾದಲ್ಲಿ‌ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ‌ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಾವಬಂದಿ ಮುಖಾ ಅವರ ವಿರುದ್ಧ 10-07 ರಿಂದ ಗೆದ್ದು ಅರ್ಜುನ ಬರುವ ದಿನಗಳಲ್ಲಿ ಓಲಂಪಿಕ್ ನಲ್ಲಿ ದೇಶವನ್ನ ಪ್ರತಿನಿಧಿವ ತಂಡದಲ್ಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಆರ್ಮಿಯಲ್ಲಿ ನೇಮಕ ಆಗಿರುವ ಅರ್ಜುನ ಸದ್ಯ ಹವಾಲ್ದಾರ ಹುದ್ದೆಯಲ್ಲಿದ್ದಾರೆ‌. ದಿನಕ್ಕೆ ಕನಿಷ್ಟ ಹತ್ತು ಗಂಟೆಗಳ ಕಾಲ ಕಸರತ್ತು ನಡೆಸುವ ಅರ್ಜುನ ದೇಶಕ್ಕೆ ಆಸ್ತಿ ಆಗಲಿದ್ದಾರೆ.

ಇದನ್ನೂ ಓದಿ: ತನ್ನ ಗ್ರಾಮಕ್ಕೆ ರಸ್ತೆ, ನೀರಿನ ಸೌಲಭ್ಯವಿಲ್ಲ ಎಂದ ಯುವಕನಿಗೆ ಪಾವಗಡದ ಕಾಂಗ್ರೆಸ್ ಶಾಸಕರಿಂದ ಕಪಾಳಮೋಕ್ಷ

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್