AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere News: ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಬಂದು ಕಳ್ಳತನಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಪರಿಚಯಸ್ಥರ ರೀತಿಯಲ್ಲಿ ಮನೆಗೆ ಬಂದು, ಲಗ್ನ ಪತ್ರಿಕೆ ಕೊಟ್ಟು ಬಳಿಕ ಕಳ್ಳತನ ಮಾಡುತ್ತಿದ್ದ ಕಿಲಾಡಿಗಳಿಬ್ಬರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ನಗರದ ರಾಮನಗರದ ನಿವಾಸಿಗಳಾದ ಮಂಜುನಾಥ ಭಜಂತ್ರಿ(24) ಹಾಗೂ ಮಂಜುನಾಥ ಪಿ (23) ಬಂಧಿತ ಆರೋಪಿಗಳು

Davanagere News: ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಬಂದು ಕಳ್ಳತನಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 19, 2023 | 7:19 AM

ದಾವಣಗೆರೆ: ಪರಿಚಯಸ್ಥರ ರೀತಿಯಲ್ಲಿ ಮನೆಗೆ ನುಗ್ಗಿ ಕಳ್ಳತನ(Theft) ಮಾಡುತ್ತಿದ್ದ ಕಿಲಾಡಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಲಗ್ನ ಪತ್ರಿಕೆ ನೀಡಲು ಬಂದಿರುವುದಾಗಿ ಹೇಳಿ ಕೆಟಿಜೆ ನಗರದ ನಾಗರತ್ನಮ್ಮ ಎಂಬ ಮಹಿಳೆಯ ಚಿನ್ನದ ಸರ ಕಳ್ಳತನಕ್ಕೆ ಯತ್ನಿಸಿದ್ದರು. ಈ ವೇಳೆ ಮಹಿಳೆ ಜೋರಾಗಿ ಕಿರುಚಿದ ಹಿನ್ನೆಲೆ ಮನೆಯಲ್ಲಿನ ಮೊಬೈಲ್ ಕದ್ದು ಪರಾರಿಯಾಗಿದ್ದರು. ಈ ಕುರಿತು ದಾವಣಗೆರೆ(Davanagere)ನಗರದ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಇದೀಗ ನಗರದ ರಾಮನಗರದ ನಿವಾಸಿಗಳಾದ ಮಂಜುನಾಥ ಭಜಂತ್ರಿ(24) ಹಾಗೂ ಮಂಜುನಾಥ ಪಿ (23) ಬಂಧಿಸಲಾಗಿದೆ. ಆರೋಪಿಗಳಿಂದ ಒಂದು ಮೊಬೈಲ್ ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.

ಮಹಿಳಾ ಕಾಲೇಜು, ಹಾಸ್ಟೆಲ್​ಗಳಿಗೆ ಪೊಲೀಸ್​ ಬೀಟ್ ವ್ಯವಸ್ಥೆ

ನಿತ್ಯ ಜಿಲ್ಲೆಯ ಮಹಿಳಾ ಕಾಲೇಜು ಹಾಗೂ ಮಹಿಳಾ ಹಾಸ್ಟೆಲ್​ಗಳಿಗೆ ಕಾಲೇಜ್ ಆರಂಭ ಹಾಗೂ ಮುಕ್ತಾಯದ ಸಮಯದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಮಾಡಲಾಗಿದೆ ಎಂದು ದಾವಣಗೆರೆ ಎಸ್ಪಿ ಡಾ.ಕೆ‌.ಅರುಣ್ ತಿಳಿಸಿದ್ದಾರೆ. ಪೊಲೀಸ್​ ಸಿಬ್ಬಂದಿ ಹೋಗಿ ವಿದ್ಯಾರ್ಥಿನಿಯರ ಹಾಗೂ ಮಹಿಳಾ ಹಾಸ್ಟೆಲ್​​ ಸಿಬ್ಬಂದಿ‌ ಜೊತೆ ಸಂವಹನ ನಡೆಸಿ, ತುರ್ತು ಸೇವೆಗೆ 112 ರ ಬಗ್ಗೆ ಮಾಹಿತಿ ನೀಡಬೇಕೆಂದು ಸೂಚಿಸಲಾಗಿದೆ. ಇನ್ನು ದಾವಣಗೆರೆ ನಗರ ಹಾಗೂ ಗ್ರಾಮಾಂತರ ಹಾಗೂ ಚನ್ನಗಿರಿ ಹೀಗೆ ಮೂರು ವಿಭಾಗದಲ್ಲಿ 245 ಮಹಿಳಾ ಕಾಲೇಜ್ ಹಾಗೂ ಹಾಸ್ಟೆಲ್​ಗಳಿವೆ. ಪ್ರತಿಯೊಂದು ಮಹಿಳಾ ಕಾಲೇಜ್ ಹಾಸ್ಟೆಲ್​ಗಳಿಂದ ಮಾಹಿತಿ ಅಪ್ ಡೆಟ್ ಮಾಡುವುದು ಕಡ್ಡಾಯ ಆಗಬೇಕೆಂದು ಎಸ್ಪಿ ಖಡಕ್​ ಸೂಚನೆ ನೀಡಿದ್ದಾರೆ.

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!