AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere News: ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಬಂದು ಕಳ್ಳತನಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಪರಿಚಯಸ್ಥರ ರೀತಿಯಲ್ಲಿ ಮನೆಗೆ ಬಂದು, ಲಗ್ನ ಪತ್ರಿಕೆ ಕೊಟ್ಟು ಬಳಿಕ ಕಳ್ಳತನ ಮಾಡುತ್ತಿದ್ದ ಕಿಲಾಡಿಗಳಿಬ್ಬರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ನಗರದ ರಾಮನಗರದ ನಿವಾಸಿಗಳಾದ ಮಂಜುನಾಥ ಭಜಂತ್ರಿ(24) ಹಾಗೂ ಮಂಜುನಾಥ ಪಿ (23) ಬಂಧಿತ ಆರೋಪಿಗಳು

Davanagere News: ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಬಂದು ಕಳ್ಳತನಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 19, 2023 | 7:19 AM

Share

ದಾವಣಗೆರೆ: ಪರಿಚಯಸ್ಥರ ರೀತಿಯಲ್ಲಿ ಮನೆಗೆ ನುಗ್ಗಿ ಕಳ್ಳತನ(Theft) ಮಾಡುತ್ತಿದ್ದ ಕಿಲಾಡಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಲಗ್ನ ಪತ್ರಿಕೆ ನೀಡಲು ಬಂದಿರುವುದಾಗಿ ಹೇಳಿ ಕೆಟಿಜೆ ನಗರದ ನಾಗರತ್ನಮ್ಮ ಎಂಬ ಮಹಿಳೆಯ ಚಿನ್ನದ ಸರ ಕಳ್ಳತನಕ್ಕೆ ಯತ್ನಿಸಿದ್ದರು. ಈ ವೇಳೆ ಮಹಿಳೆ ಜೋರಾಗಿ ಕಿರುಚಿದ ಹಿನ್ನೆಲೆ ಮನೆಯಲ್ಲಿನ ಮೊಬೈಲ್ ಕದ್ದು ಪರಾರಿಯಾಗಿದ್ದರು. ಈ ಕುರಿತು ದಾವಣಗೆರೆ(Davanagere)ನಗರದ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಇದೀಗ ನಗರದ ರಾಮನಗರದ ನಿವಾಸಿಗಳಾದ ಮಂಜುನಾಥ ಭಜಂತ್ರಿ(24) ಹಾಗೂ ಮಂಜುನಾಥ ಪಿ (23) ಬಂಧಿಸಲಾಗಿದೆ. ಆರೋಪಿಗಳಿಂದ ಒಂದು ಮೊಬೈಲ್ ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.

ಮಹಿಳಾ ಕಾಲೇಜು, ಹಾಸ್ಟೆಲ್​ಗಳಿಗೆ ಪೊಲೀಸ್​ ಬೀಟ್ ವ್ಯವಸ್ಥೆ

ನಿತ್ಯ ಜಿಲ್ಲೆಯ ಮಹಿಳಾ ಕಾಲೇಜು ಹಾಗೂ ಮಹಿಳಾ ಹಾಸ್ಟೆಲ್​ಗಳಿಗೆ ಕಾಲೇಜ್ ಆರಂಭ ಹಾಗೂ ಮುಕ್ತಾಯದ ಸಮಯದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಮಾಡಲಾಗಿದೆ ಎಂದು ದಾವಣಗೆರೆ ಎಸ್ಪಿ ಡಾ.ಕೆ‌.ಅರುಣ್ ತಿಳಿಸಿದ್ದಾರೆ. ಪೊಲೀಸ್​ ಸಿಬ್ಬಂದಿ ಹೋಗಿ ವಿದ್ಯಾರ್ಥಿನಿಯರ ಹಾಗೂ ಮಹಿಳಾ ಹಾಸ್ಟೆಲ್​​ ಸಿಬ್ಬಂದಿ‌ ಜೊತೆ ಸಂವಹನ ನಡೆಸಿ, ತುರ್ತು ಸೇವೆಗೆ 112 ರ ಬಗ್ಗೆ ಮಾಹಿತಿ ನೀಡಬೇಕೆಂದು ಸೂಚಿಸಲಾಗಿದೆ. ಇನ್ನು ದಾವಣಗೆರೆ ನಗರ ಹಾಗೂ ಗ್ರಾಮಾಂತರ ಹಾಗೂ ಚನ್ನಗಿರಿ ಹೀಗೆ ಮೂರು ವಿಭಾಗದಲ್ಲಿ 245 ಮಹಿಳಾ ಕಾಲೇಜ್ ಹಾಗೂ ಹಾಸ್ಟೆಲ್​ಗಳಿವೆ. ಪ್ರತಿಯೊಂದು ಮಹಿಳಾ ಕಾಲೇಜ್ ಹಾಸ್ಟೆಲ್​ಗಳಿಂದ ಮಾಹಿತಿ ಅಪ್ ಡೆಟ್ ಮಾಡುವುದು ಕಡ್ಡಾಯ ಆಗಬೇಕೆಂದು ಎಸ್ಪಿ ಖಡಕ್​ ಸೂಚನೆ ನೀಡಿದ್ದಾರೆ.

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು