ಹರಿಹರದ ‌ಮನೆ ಮನೆಗೆ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ, ರಾಮ ವೇಷಧಾರಿ ಮಕ್ಕಳ ಪಾದ ಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮ‌ಮಂದಿರ ಉದ್ಘಾಟನೆ ಹಿನ್ನೆಲೆ ‌ರಾಮಮಂದಿರದ ಮಂತ್ರಾಕ್ಷತೆ ಮುಟ್ಟಿಸುವ ವಿಶಿಷ್ಟ ಕಾರ್ಯಕ್ರಮಕ್ಕೆ ದಾವಣಗೆರೆಯಲ್ಲಿ ಚಾಲನೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿಜಯನಗರದಲ್ಲಿ ರಾಮ ಲಕ್ಷ್ಮಣ ಸೀತಾ ವೇಷಧಾರಿ ಮಕ್ಕಳ ಪಾದ ಪೂಜೆ ಮಾಡಿ ಸಿಹಿ ವಿತರಣೆ ಮಾಡಲಾಗುತ್ತಿದೆ.

ಹರಿಹರದ ‌ಮನೆ ಮನೆಗೆ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ, ರಾಮ ವೇಷಧಾರಿ ಮಕ್ಕಳ ಪಾದ ಪೂಜೆ
ಮನೆ ಮನೆಗೆ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ
Follow us
| Updated By: ಆಯೇಷಾ ಬಾನು

Updated on:Jan 02, 2024 | 10:07 AM

ದಾವಣಗೆರೆ, ಜ.02: ಇದೇ ಜನವರಿ 22ರಂದು ರಾಮಮಂದಿರ (Ayodhya Ram Mandir) ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು (Mantrakshate Distribution Campaign) ದೇಶಾದ್ಯಂತ ಪ್ರತಿ ಹಿಂದೂ ಮನೆಗಳಿಗೆ ವಿತರಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ದಾವಣಗೆರೆಯ (Davangere) ಹರಿಹರದಲ್ಲಿ ಮನೆ ಮನೆಗೆ ರಾಮ ವಿಶಿಷ್ಟ ಮಂತ್ರಾಕ್ಷತೆಯನ್ನು ಮುಟ್ಟಿಸುವ ಕಾರ್ಯ ನಡೆಯುತ್ತಿದೆ.

ಅಯೋಧ್ಯೆಯಲ್ಲಿ ಶ್ರೀರಾಮ‌ಮಂದಿರ ಉದ್ಘಾಟನೆ ಹಿನ್ನೆಲೆ ‌ರಾಮಮಂದಿರದ ಮಂತ್ರಾಕ್ಷತೆ ಮುಟ್ಟಿಸುವ ವಿಶಿಷ್ಟ ಕಾರ್ಯಕ್ರಮಕ್ಕೆ ದಾವಣಗೆರೆಯಲ್ಲಿ ಚಾಲನೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿಜಯನಗರದಲ್ಲಿ ರಾಮ ಲಕ್ಷ್ಮಣ ಸೀತಾ ವೇಷಧಾರಿ ಮಕ್ಕಳ ಪಾದ ಪೂಜೆ ಮಾಡಿ ಸಿಹಿ ವಿತರಣೆ ಮಾಡಲಾಗುತ್ತಿದೆ. ಹರಿಹರದ ಬಡಾವಣೆಯಲ್ಲಿ ಅಯೋಧ್ಯೆಯ ಸಂಭ್ರಮ ಮನೆ ಮಾಡಿದೆ. ಶ್ರೀರಾಮನ ವೇಷಧಾರಿ ಮಗುವಿನ ಪಾದಕ್ಕೆ ನಮಸ್ಕರಿಸಿ ಜನ ಭಕ್ತಿ ಮೆರೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ‌ ಮನೆ ಮನೆ ರಾಮ ವಿಶೇಷ ಕಾರ್ಯಕ್ರಮದ ಮೂಲಕ ಹರಿಹರ ಜನ ಗಮನ ಸೆಳೆದಿದ್ದಾರೆ.

ಕೊಪ್ಪಳದಲ್ಲೂ ಮಂತ್ರಾಕ್ಷತೆ ಮುಟ್ಟಿಸುವ ಕಾರ್ಯ

ಇನ್ನು ಕೊಪ್ಪಳ ನಗರದಲ್ಲಿ ಹಿಂದೂ ಕಾರ್ಯಕರ್ತರು ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆಯನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕೊಪ್ಪಳ ನಗರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು, ನಗರದ ವಿವಿಧ ಬಡಾವಣೆಗಳಿಗೆ ಹೋಗಿ ಮಂತ್ರಾಕ್ಷತೆಯನ್ನು ನೀಡುವ ಕೆಲಸ ಮಾಡಿದ್ದಾರೆ. ಜಿಲ್ಲೆಯ ಬಹುತೇಕ ಮನೆಗಳಿಗೆ ಮಂತ್ರಾಕ್ಷತೆಯನ್ನು ತಲುಪಿಸಲು ಹಿಂದೂಪರ ಕಾರ್ಯಕರ್ತರು ಮುಂದಾಗಿದ್ದಾರೆ.

ಇದನ್ನೂ ಓದಿ: ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ

ವಿಶ್ವಹಿಂದೂ ಪರಿಷತ್‌ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಪರಿವಾರ ಸಂಘಟನೆಗಳು ಭಾರತದಲ್ಲಿರುವ ಸಮಸ್ತ ಹಿಂದೂ ಮನೆಗಳಿಗೆ ಕರಪತ್ರ, ಅಯೋಧ್ಯೆ ರಾಮಮಂದಿರದ ಭಾವಚಿತ್ರ ಹಾಗೂ ರಾಮನ ಪವಿತ್ರ ಮಂತ್ರಾಕ್ಷತೆಯನ್ನು ಮನೆಮನೆಗಳಿಗೆ ಹಂಚುವ ಅಭಿಯಾನ ಕೈಗೊಂಡಿದ್ದಾರೆ.

ಮಂತ್ರಾಕ್ಷತೆ ವಿತರಣೆ ಸಂದರ್ಭದಲ್ಲಿ ಯಾರೂ ಕೂಡ ಹಣವನ್ನು ನೀಡಿವಂತಿಲ್ಲ. ಯಾವುದೇ ಹಣವನ್ನು ಅಥವಾ ಯಾವುದೇ ವಸ್ತು ರೂಪದಲ್ಲಿ ನೀಡಬಾರದು. ಇದೊಂದು ಅಭಿಯಾನವಾಗಿರುವ ಕಾರಣ ಯಾವುದೇ ರೀತಿಯ ವ್ರತಾಚಾರಣೆ, ಕಟ್ಟು ಪಾಡು ನಿಯಮಗಳು ಇರುವುದಿಲ್ಲ ಎಂದು ಸೂಚಿಸಲಾಗಿದೆ.

ಅಯೋದ್ಯೆಯಲ್ಲಿ ರಾಮ ಪ್ರಾಣಪ್ರತಿಷ್ಠೆಯ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ, ಹವನ ಸತ್ಸಂಗ, ಭಜನೆ ಮುಂತಾದ ಕಾರ್ಯಕ್ರಮ ನಡೆಯಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:37 am, Tue, 2 January 24

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ