AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Sevalal Jayanti 2021 |ಸಂತ ಸೇವಾಲಾಲ್ ಜಯಂತ್ಯುತ್ಸವಕ್ಕೆ ಕ್ಷಣಗಣನೆ.. ಇಂದಿನಿಂದ 2 ದಿನ ನಡೆಯಲಿದೆ ಜಾತ್ರೆ

ಅದೊಂದು ವರ್ಣರಂಜಿತ ಜಾತ್ರೆ. ಬಣ್ಣಬಣ್ಣದ ವೇಷದಲ್ಲಿ ಸಾವಿರಾರು ಜನ ಅಲ್ಲಿಗೆ ಬರ್ತಾರೆ. ಜೊತೆಯಲ್ಲೇ ಭಜನೆ, ವಾದ್ಯದ ಸದ್ದು. ಹೀಗೆ ಹತ್ತು ಹಲವು ಕಾರಣಕ್ಕೆ ರಾಜ್ಯದ ಗಮನ ಸೆಳೆವ ಜಾತ್ರೆ ಅದು. ಸಂತನೊಬ್ಬನ ಜಾತ್ರೆಗೆ ಸಿಎಂ, ಮಾಜಿ ಸಿಎಂ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಲಿದ್ದಾರೆ.

Guru Sevalal Jayanti 2021 |ಸಂತ ಸೇವಾಲಾಲ್ ಜಯಂತ್ಯುತ್ಸವಕ್ಕೆ ಕ್ಷಣಗಣನೆ.. ಇಂದಿನಿಂದ 2 ದಿನ ನಡೆಯಲಿದೆ ಜಾತ್ರೆ
ಸಂತ ಸೇವಾಲಾಲ್ ಜಯತ್ಯುತ್ಸವ: ಪಾದಯಾತ್ರೆ ಮೂಲಕ ಬರ್ತಾ ಇರುವ ಭಕ್ತರು
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Feb 14, 2021 | 10:13 AM

Share

ದಾವಣಗೆರೆ: ಜಿಲ್ಲೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇಂದಿನಿಂದ ಸಂತ ಸೇವಾಲಾಲ್ ಜಾತ್ರೆ ನಡೆಯಲಿದೆ. ಸಿಎಂ ತವರು ಶಿಕಾರಿಪುರ ಸಮೀಪವೇ ಇರುವ ಗ್ರಾಮವಿದು. ಇದೇ ಗ್ರಾಮದಲ್ಲಿ ಸಂತ ಸೇವಾಲಾಲ್ ಅವರು ಜನ್ಮ ತಾಳಿದ್ದರು. ಹೀಗೆ ಸಂತ ಸೇವಾಲಾಲ್​ರ 282ನೇ ಜಯಂತ್ಯುತ್ಸವ ಇಂದಿನಿಂದ 2 ದಿನಗಳ ಕಾಲ ನಡೆಯಲಿದೆ. ಬಂಜಾರಾ ಸಮಾಜ ಸಾಗರೋಪಾದಿಯಲ್ಲಿ ಇಲ್ಲಿಗೆ ಬರುತ್ತೆ. ರಾಜ್ಯದ ವಿವಿಧ ಭಾಗಗಳಿಂದ ನಿರಂತರವಾಗಿ ಪಾದಯಾತ್ರೆ ಮೂಲಕ ಸಾವಿರಾರು ಜನ ಬರ್ತಾರೆ. ಮದ್ಯ, ಮಾಂಸ ಬಿಟ್ಟು ಸುಮಾರು 1 ತಿಂಗಳ ಕಾಲ ಸೇವಾಲಾಲ್ ಹೆಸರಿನಲ್ಲಿ ಮಾಲೆ ಧರಿಸುತ್ತಾರೆ. ಪಾದಯಾತ್ರೆ ಮೂಲಕ ಬಂದು ಪುಣ್ಯಕ್ಷೇತ್ರ ಸಂತ ಸೇವಾಲಾಲ್​ರ ಜನ್ಮ ಸ್ಥಳವನ್ನ ಸೇರ್ತಾರೆ.

ಸಂತ ಸೇವಾಲಾಲ್ ಜಾತ್ರೆಗೆ ಸಿಎಂ ಯಡಿಯೂರಪ್ಪ ಆಗಮಿಸಲಿದ್ದಾರೆ. ಕಳೆದ ವರ್ಷ ಘೋಷಣೆ ಮಾಡಿದಂತೆ ಬಂಜಾರ ಭಾಷಾ ಅಕಾಡಮಿ ಈಗ ಆರಂಭವಾಗಿದೆ. ಇದೇ ರೀತಿ ಸಮಾಜದ ಅಭಿವೃದ್ಧಿಗಾಗಿ ಸಿಎಂ ಬಿಎಸ್​ವೈ ಕೆಲವು ಯೋಜನೆಗಳನ್ನ ಘೋಷಣೆ ಮಾಡಲಿದ್ದಾರೆ ಎಂಬ ನಿರೀಕ್ಷೆ ಬಂಜಾರಾ ಸಮಾಜಕ್ಕಿದೆ. ಇಂದು ಬೆಳಗ್ಗೆ ದೂದಿಯಾ ತಳಾವ್ ತೀರ್ಥದೊಂದಿಗೆ ಜಾತ್ರೆ ಆರಂಭವಾಗುತ್ತದೆ. ಸಪ್ತ ತಾಯಂದಿರ ಕೊಳದ ದರ್ಶನ ಪಡೆದು ಜಾತ್ರೆಗೆ ಅಧಿಕೃತ ಚಾಲನೆ ಸಿಗಲಿದೆ.

ದೂದಿಯಾ ತಳಾವ್ ತೀರ್ಥ ಅಂದ್ರೆ ಲಂಬಾಣಿ ಭಾಷೆಯಲ್ಲಿ ಪುಣ್ಯಕ್ಷೇತ್ರದ ತೀರ್ಥ ಎಂಬುದು ಭಕ್ತರ ನಂಬಿಕೆ. ಇದೇ ಕಾರಣಕ್ಕೆ ಲಂಬಾಣಿ ಸಮುದಾಯದ ಭಕ್ತರು ವರ್ಷಕ್ಕೆ ಒಮ್ಮೆ ಆದ್ರು ಈ ಪುಣ್ಯ ಕ್ಷೇತ್ರಕ್ಕೆ ಬಂದು ಸಂತ ಸೇವಾಲಾಲ್ ಹಾಗೂ ಮರಿಯಮ್ಮ ದೇವಸ್ಥಾನದ ದರ್ಶನ ಪಡೆದುಕೊಂಡು ಹೋಗ್ತ್ತಾರೆ. ಸಿಎಂ ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಜಾತ್ರೆಗೆ ಆಗಮಿಸಿ, ದರ್ಶನ ಪಡೆಯಲಿದ್ದಾರೆ.

ಹೀಗೆ ಸಂತ ಸೇವಾಲಾಲ್ ಜಾತ್ರೆ ಅಂದ್ರೆ ವಿಭಿನ್ನ ಹಾಗೂ ವಿಶೇಷತೆಯಿಂದ ಕೂಡಿರುತ್ತದೆ. ಲಂಬಾಣಿ ಸಂಸ್ತೃತಿ ಅನಾವರಣಕ್ಕೆ ಜಾತ್ರೆ ವೇದಿಕೆ ಕಲ್ಪಿಸುತ್ತೆ. ಜಾತ್ರೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕ್ಷಣಗಣನೆ ಆರಂಭವಾಗಿದೆ.

Guru Sevalal Jayanti 2021

ಸಂತ ಸೇವಾಲಾಲ್ ಜಯತ್ಯುತ್ಸವ: ಪಾದಯಾತ್ರೆ ಮೂಲಕ ಬರ್ತಾ ಇರುವ ಭಕ್ತರು

Guru Sevalal Jayanti 2021

ಸಂತ ಸೇವಾಲಾಲ್ ಜಯತ್ಯುತ್ಸವ: ಪಾದಯಾತ್ರೆ ಮೂಲಕ ಬರ್ತಾ ಇರುವ ಭಕ್ತರು

ಇದನ್ನೂ ಓದಿ: ಸಂತ ಸೇವಾಲಾಲ್ ಜಯಂತಿಗೆ ಹೊಸ ಮೆರುಗು: ಡಿಜೆ ಸದ್ದಿಗೆ ಲಲನೆಯರ ಸ್ಟೆಪ್ಸ್​

Published On - 10:03 am, Sun, 14 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು