AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಪಾಲಿಕೆಯ 28, 37ನೇ ವಾರ್ಡ್​ಗೆ ಉಪ ಚುನಾವಣೆ; ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ದಂಪತಿಗೆ ಭರ್ಜರಿ ಗೆಲುವು

ಚುನಾವಣೆಯಲ್ಲಿ ಕಾಂಗ್ರೆಸ್​ನ ಗಣೇಶ್ 1,884 ಮತ ಪಡೆದಿದ್ದರೆ, ಬಿಜೆಪಿಯ ಶ್ರೀನಿವಾಸ 2,565 ಮತ ಪಡೆದಿದ್ದಾರೆ. ಇನ್ನು ಕಾಂಗ್ರೆಸ್​ನ ರೇಖಾರಾಣಿ 1,303 ಪಡೆದಿದ್ದರೆ, ಶ್ವೇತಾ 2,096 ಮತಗಳನ್ನ ಪಡೆದು ಜಯಗೊಂಡಿದ್ದಾರೆ. 

ದಾವಣಗೆರೆ ಪಾಲಿಕೆಯ 28, 37ನೇ ವಾರ್ಡ್​ಗೆ ಉಪ ಚುನಾವಣೆ; ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ದಂಪತಿಗೆ ಭರ್ಜರಿ ಗೆಲುವು
ಉಪ ಚುನಾವಣೆಯಲ್ಲು ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳಾದ ಜೆ.ಎನ್.ಶ್ರೀನಿವಾಸ, ಶ್ವೇತಾ
TV9 Web
| Edited By: |

Updated on:May 22, 2022 | 12:32 PM

Share

ದಾವಣಗೆರೆ: ಪಾಲಿಕೆಯ 28, 37ನೇ ವಾರ್ಡ್​ಗೆ ನಡೆದ ಉಪ ಚುನಾವಣೆಯಲ್ಲಿ (By Election) ಕಾಂಗ್ರೆಸ್ ತೊರೆದು ಬಿಜೆಪಿ (BJP) ಸೇರಿದ್ದ ದಂಪತಿಗೆ ಭರ್ಜರಿ ಗೆಲುವು ಸಿಕ್ಕಿದೆ. ಉಪ ಚುನಾವಣೆಯಲ್ಲಿ ಶ್ರೀನಿವಾಸ, ಶ್ವೇತಾ ದಂಪತಿ ಮರು ಆಯ್ಕೆಯಾಗಿದ್ದಾರೆ. 28ನೇ ವಾರ್ಡ್​ನಲ್ಲಿ ಬಿಜೆಪಿ ಅಭ್ಯರ್ಥಿ ಜೆ.ಎನ್.ಶ್ರೀನಿವಾಸ ಮತ್ತು 37ನೇ ವಾರ್ಡ್​ನಲ್ಲಿ ಬಿಜೆಪಿ ಅಭ್ಯರ್ಥಿ ಶ್ವೇತಾ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್​ನ ಗಣೇಶ್ 1,884 ಮತ ಪಡೆದಿದ್ದರೆ, ಬಿಜೆಪಿಯ ಶ್ರೀನಿವಾಸ 2,565 ಮತ ಪಡೆದಿದ್ದಾರೆ. ಇನ್ನು ಕಾಂಗ್ರೆಸ್​ನ ರೇಖಾರಾಣಿ 1,303 ಪಡೆದಿದ್ದರೆ, ಶ್ವೇತಾ 2,096 ಮತಗಳನ್ನ ಪಡೆದು ಜಯಗೊಂಡಿದ್ದಾರೆ.

ಈ ಹಿಂದೆ ಕಾಂಗ್ರೆಸ್​ನಿಂದ ಗೆದ್ದ ಜೆ ಎನ್ ಶ್ರೀನಿವಾಸ ಹಾಗೂ ಅವರ ಪತ್ನಿ ಶ್ವೇತಾ ಶ್ರೀನಿವಾಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆ ಉಪ ಚುನಾವಣೆ ನಡೆದಿತ್ತು. ಫಲಿತಾಂಶದಲ್ಲಿ 681 ಮತಗಳ ಅಂತರದಿಂದ ಶ್ರೀನಿವಾಸ ಮತ್ತು 793 ಮತಗಳ ಅಂತರದಿಂದ ಶ್ವೇತಾ ಮತ್ತೆ ಆಯ್ಕೆಯಾಗಿದ್ದಾರೆ.

ಅಭ್ಯರ್ಥಿಗಳ ಪರ ಮತಯಾಚಿಸಿದ್ದ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ: ಉಪ ಚುನಾವಣೆ ಹಿನ್ನೆಲೆ ಮೇ 16ರಂದು ಕಾಂಗ್ರೆಸ್​ನಿಂದ ರೋಡ್ ಶೋ ನಡೆದಿತ್ತು. ರೋಡ್ ಶೋದಲ್ಲಿ ಅಭ್ಯರ್ಥಿಗಳಾದ ಹುಲ್ಮನೆ ಗಣೇಶ್ ಹಾಗೂ ರೇಖಾ ರಾಣಿ ಪರ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಮತ ಯಾಚನೆ ಮಾಡಿದ್ದರು. ದಾವಣಗೆರೆ ನಗರದ ಕೆಟಿಜೆ ನಗರದ ಕೊರಚರ ಹಟ್ಟಿಯಿಂದ ಆರಂಭವಾದ ರೋಡ್ ಶೋ ಸಿದ್ದ ಗಂಗಾ ಶಾಲೆ ಪ್ರದೇಶ, ಡಾಂಗೆ ಪಾರ್ಕ ಹಾಗೂ ಭಗತ್ ಸಿಂಗ್ ನಗರದ ಬಹುತೇಕ ಪ್ರದೇಶದಲ್ಲಿ ಮಲ್ಲಿಕಾರ್ಜುನ ರೋಡ್ ಶೋ ನಡೆಸಿದ್ದರು.

ಇದನ್ನೂ ಓದಿ
Image
ಗೋವಾದ ಮಾಪ್ಸಾ ಬಳಿ ಭೀಕರ ಕಾರು ಅಪಘಾತ: ಬೆಳಗಾವಿಯ ಮೂವರು ಯುವಕರ ದುರ್ಮರಣ
Image
Shantadevi Kanavi Death Anniversary: ‘ಬೀದಿಗಿಳಿಯೋದರಿಂದ ಸ್ವಾತಂತ್ರ್ಯ ಸಿಗ್ತದೇನೂ? ಮಹಿಳೆಯರು ವೈಚಾರಿಕತೆ ಬೆಳೆಸಿಕೊಳ್ಳಬೇಕು’
Image
Trending: 80ರ ವರ್ಷದಲ್ಲಿ ಡೆಡ್‌ಲಿಫ್ಟ್‌ ಮಾಡುತ್ತಿರುವ ಅಜ್ಜಿಯ ವಿಡಿಯೋ ವೈರಲ್
Image
Viral Video: ಡಿಜೆ ಹಾಡಿಗೆ ಅದ್ಭುತವಾಗಿ ಸ್ಟೆಪ್ ಹಾಕೊ ನಾಯಿ | ವಿಡಿಯೋ ವೈರಲ್

ಇದನ್ನೂ ಓದಿ: ಗೋವಾದ ಮಾಪ್ಸಾ ಬಳಿ ಭೀಕರ ಕಾರು ಅಪಘಾತ: ಬೆಳಗಾವಿಯ ಮೂವರು ಯುವಕರ ದುರ್ಮರಣ

ಕಾಂಗ್ರೆಸ್ ಪರ ಜೆಡಿಎಸ್ ಅಭ್ಯರ್ಥಿಯಿಂದಲೂ ಪ್ರಚಾರ: ಈ ರೋಡ್ ಶೋದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಜೆಡಿಎಸ್ ಅಭ್ಯರ್ಥಿಯೂ ಆಗಮಿಸಿದ್ದರು. ಜೆಡಿಎಸ್ ಅಭ್ಯರ್ಥಿ ಸಮೀವುಲ್ಲಾ ವಾರ್ಡ್ ನಂ 28 ರಲ್ಲಿ ಸುತ್ತಾಡಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಪಾರ್ಕ್ ಭಗತ್ ಸಿಂಗ್ ನಗರ ಸೇರಿದಂತೆ ಹತ್ತಾರು ಕಡೆ ಸುತ್ತಾಡಿ ಕಾಂಗ್ರೆಸ್ ಅಭ್ಯರ್ಥಿ ಹುಲ್ಮನೆ ಗಣೇಶ್ ಪರ ಸಮೀವುಲ್ಲಾ ಪ್ರಚಾರ ಮಾಡಿದ್ದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲ ಕ್ಲಿಕ್ ಮಾಡಿ

Published On - 12:24 pm, Sun, 22 May 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!