AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ರಾಜ್ಯದ 4 ದಿಕ್ಕುಗಳಲ್ಲೂ ಬಿಜೆಪಿ ಬಸ್ ಯಾತ್ರೆ: ಬೆಣ್ಣೆನಗರಿಯಲ್ಲಿ ಬೃಹತ್ ಸಮಾವೇಶ- ಜಿ.ಎಂ. ಸಿದ್ದೇಶ್ವರ

ರಾಜ್ಯದ 4 ದಿಕ್ಕುಗಳಲ್ಲೂ ಬಿಜೆಪಿ ಬಸ್ ಯಾತ್ರೆ ನಡೆಯಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ದಾವಣಗೆರೆ: ರಾಜ್ಯದ 4 ದಿಕ್ಕುಗಳಲ್ಲೂ ಬಿಜೆಪಿ ಬಸ್ ಯಾತ್ರೆ: ಬೆಣ್ಣೆನಗರಿಯಲ್ಲಿ ಬೃಹತ್ ಸಮಾವೇಶ- ಜಿ.ಎಂ. ಸಿದ್ದೇಶ್ವರ
ಸಂಸದ ಜಿ.ಎಂ. ಸಿದ್ದೇಶ್ವರ
TV9 Web
| Updated By: ವಿವೇಕ ಬಿರಾದಾರ|

Updated on: Feb 04, 2023 | 2:28 PM

Share

ದಾವಣಗೆರೆ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಾಂಗ್ರೆಸ್​ (Congress) ಎರಡು ಬಣಗಳಾಗಿ ಪ್ರಜಾಧ್ವನಿ ಹೆಸರಿನಲ್ಲಿ ಬಸ್ ಯಾತ್ರೆ ಮಾಡುತ್ತಿದೆ. ಇನ್ನು ಜೆಡಿಎಸ್​ (JDS) ಪಂಚರತ್ನ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದೆ. ಮತ್ತೊಂದಡೆ ಮಾಜಿ ಸಚಿವ ಜನಾರ್ದನ ರೆಡ್ಡಿಯ ಕಲ್ಯಾಣ ರಾಜ್ಯ ಪಗ್ರತಿ ಪಕ್ಷದ (KRPP) ಮೂಲಕ, ಯಾತ್ರೆ ಆರಂಭಿಸಿದ್ದಾರೆ. ಈಗ ಬಿಜೆಪಿ (BJP) ಕೂಡ ಬಸ್​ ಯಾತ್ರೆ ಮಾಡಲು ನಿರ್ಧರಿಸಿದ್ದು, ರಾಜ್ಯದ 4 ದಿಕ್ಕುಗಳಲ್ಲೂ ಬಿಜೆಪಿ ಬಸ್ ಯಾತ್ರೆ (BUS Yatre) ನಡೆಯಲಿದೆ ಎಂದು ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದಾವಣಗೆರೆ ಜಿಲ್ಲೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮಾರ್ಚ್ ಮೊದಲ ಹಾಗೂ 2ನೇ ವಾರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಹಿರಿಯ ಮುತ್ಸದ್ದಿ ನಿವಾಸಕ್ಕೆ ಭೇಟಿ ನೀಡಿ ಸತ್ಕರಿಸಿದ ನಳಿನ್ ಕುಮಾರ್ ಕಟೀಲ್ ಮತ್ತು ಬಿಎಲ್ ಸಂತೋಷ್

ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೇ ಮೈಸೂರು ಭಾಗ, ಕೋಲಾರ ಹೀಗೆ 4 ಕಡೆ ರಥಯಾತ್ರೆ ರೂಪದಲ್ಲಿ ಬಸ್ ಜಾತ್ರೆ ನಡೆಯಲಿದೆ. ರಾಜ್ಯದ 4 ದಿಕ್ಕುಗಳಿಂದ ಬಂದ ಯಾತ್ರೆಗಳು ದಾವಣಗೆರೆ ಸೇರಲಿವೆ. ಶೀಘ್ರವೇ ಸಮಾರೋಪ ಸಮಾವೇಶದ ಸ್ಥಳ ನಿಗದಿ ಮಾಡುತ್ತೇವೆ. ದಾವಣಗೆರೆಯಲ್ಲಿ ಸಮಾವೇಶ ಮಾಡಿ ಚುನಾವಣೆಗೆ ಹೋಗುತ್ತೇವೆ ಎಂದರು.

ಒಟ್ಟಿನಲ್ಲಿ ಮೂರು ರಾಜಕೀಯ ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆಯಲು ಹರಸಾಹ ಪಡುತ್ತಿವೆ. ಇನ್ನು ಬಿಜೆಪಿ ವಿಚಾರಕ್ಕೆ ಬರುವುದಾದರೆ ರಾಜ್ಯ ಬಿಜೆಪಿ ಘಟಕ ಮತ ಸೆಳೆಯಲು ರಣತಂತ್ರ ರೂಪಿಸುತ್ತಿದ್ದು, ಕಾರ್ಯಕರ್ತ ಬಲ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ವಿಜಯ ಸಂಕಲ್ಪ ಅಭಿಯಾನ ಮಾಡಿತ್ತು. ಇನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರದ ನಾಯಕರದತ್ತ ಮುಖ ಮಾಡಿದ್ದು, ಚುನಾವಣಾ ಚಾಣಕ್ಯ ಅಮಿತ್​ ಶಾ​, ಪ್ರಧಾನಿ ನರೇದ್ರ ಮೋದಿ ಅವರು ಈಗಾಗಲೆ 2 ರಿಂದ 3 ಸಾರಿ ರಾಜ್ಯಕ್ಕೆ ಬಂದು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್