AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ರಾಜ್ಯದ 4 ದಿಕ್ಕುಗಳಲ್ಲೂ ಬಿಜೆಪಿ ಬಸ್ ಯಾತ್ರೆ: ಬೆಣ್ಣೆನಗರಿಯಲ್ಲಿ ಬೃಹತ್ ಸಮಾವೇಶ- ಜಿ.ಎಂ. ಸಿದ್ದೇಶ್ವರ

ರಾಜ್ಯದ 4 ದಿಕ್ಕುಗಳಲ್ಲೂ ಬಿಜೆಪಿ ಬಸ್ ಯಾತ್ರೆ ನಡೆಯಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ದಾವಣಗೆರೆ: ರಾಜ್ಯದ 4 ದಿಕ್ಕುಗಳಲ್ಲೂ ಬಿಜೆಪಿ ಬಸ್ ಯಾತ್ರೆ: ಬೆಣ್ಣೆನಗರಿಯಲ್ಲಿ ಬೃಹತ್ ಸಮಾವೇಶ- ಜಿ.ಎಂ. ಸಿದ್ದೇಶ್ವರ
ಸಂಸದ ಜಿ.ಎಂ. ಸಿದ್ದೇಶ್ವರ
TV9 Web
| Edited By: ವಿವೇಕ ಬಿರಾದಾರ|

Updated on: Feb 04, 2023 | 2:28 PM

Share

ದಾವಣಗೆರೆ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಾಂಗ್ರೆಸ್​ (Congress) ಎರಡು ಬಣಗಳಾಗಿ ಪ್ರಜಾಧ್ವನಿ ಹೆಸರಿನಲ್ಲಿ ಬಸ್ ಯಾತ್ರೆ ಮಾಡುತ್ತಿದೆ. ಇನ್ನು ಜೆಡಿಎಸ್​ (JDS) ಪಂಚರತ್ನ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದೆ. ಮತ್ತೊಂದಡೆ ಮಾಜಿ ಸಚಿವ ಜನಾರ್ದನ ರೆಡ್ಡಿಯ ಕಲ್ಯಾಣ ರಾಜ್ಯ ಪಗ್ರತಿ ಪಕ್ಷದ (KRPP) ಮೂಲಕ, ಯಾತ್ರೆ ಆರಂಭಿಸಿದ್ದಾರೆ. ಈಗ ಬಿಜೆಪಿ (BJP) ಕೂಡ ಬಸ್​ ಯಾತ್ರೆ ಮಾಡಲು ನಿರ್ಧರಿಸಿದ್ದು, ರಾಜ್ಯದ 4 ದಿಕ್ಕುಗಳಲ್ಲೂ ಬಿಜೆಪಿ ಬಸ್ ಯಾತ್ರೆ (BUS Yatre) ನಡೆಯಲಿದೆ ಎಂದು ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದಾವಣಗೆರೆ ಜಿಲ್ಲೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮಾರ್ಚ್ ಮೊದಲ ಹಾಗೂ 2ನೇ ವಾರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಹಿರಿಯ ಮುತ್ಸದ್ದಿ ನಿವಾಸಕ್ಕೆ ಭೇಟಿ ನೀಡಿ ಸತ್ಕರಿಸಿದ ನಳಿನ್ ಕುಮಾರ್ ಕಟೀಲ್ ಮತ್ತು ಬಿಎಲ್ ಸಂತೋಷ್

ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೇ ಮೈಸೂರು ಭಾಗ, ಕೋಲಾರ ಹೀಗೆ 4 ಕಡೆ ರಥಯಾತ್ರೆ ರೂಪದಲ್ಲಿ ಬಸ್ ಜಾತ್ರೆ ನಡೆಯಲಿದೆ. ರಾಜ್ಯದ 4 ದಿಕ್ಕುಗಳಿಂದ ಬಂದ ಯಾತ್ರೆಗಳು ದಾವಣಗೆರೆ ಸೇರಲಿವೆ. ಶೀಘ್ರವೇ ಸಮಾರೋಪ ಸಮಾವೇಶದ ಸ್ಥಳ ನಿಗದಿ ಮಾಡುತ್ತೇವೆ. ದಾವಣಗೆರೆಯಲ್ಲಿ ಸಮಾವೇಶ ಮಾಡಿ ಚುನಾವಣೆಗೆ ಹೋಗುತ್ತೇವೆ ಎಂದರು.

ಒಟ್ಟಿನಲ್ಲಿ ಮೂರು ರಾಜಕೀಯ ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆಯಲು ಹರಸಾಹ ಪಡುತ್ತಿವೆ. ಇನ್ನು ಬಿಜೆಪಿ ವಿಚಾರಕ್ಕೆ ಬರುವುದಾದರೆ ರಾಜ್ಯ ಬಿಜೆಪಿ ಘಟಕ ಮತ ಸೆಳೆಯಲು ರಣತಂತ್ರ ರೂಪಿಸುತ್ತಿದ್ದು, ಕಾರ್ಯಕರ್ತ ಬಲ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ವಿಜಯ ಸಂಕಲ್ಪ ಅಭಿಯಾನ ಮಾಡಿತ್ತು. ಇನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರದ ನಾಯಕರದತ್ತ ಮುಖ ಮಾಡಿದ್ದು, ಚುನಾವಣಾ ಚಾಣಕ್ಯ ಅಮಿತ್​ ಶಾ​, ಪ್ರಧಾನಿ ನರೇದ್ರ ಮೋದಿ ಅವರು ಈಗಾಗಲೆ 2 ರಿಂದ 3 ಸಾರಿ ರಾಜ್ಯಕ್ಕೆ ಬಂದು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!