ಸೂಳೆಕೆರೆಯಲ್ಲಿ ಮತ್ತೆ ಉಕ್ಕಿದ ಚೈತನ್ಯದ ಚಿಲುಮೆ, ಸಾರ್ವಜನಿಕರಲ್ಲಿ ಮತ್ತೆ ಮನೆ ಮಾಡಿದ ಸಂಭ್ರಮ

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ಬಳಿಕ ಈಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಬೋಟಿಂಗ್ ಹಾಗೂ ಕೆರೆ ಸುತ್ತಾಟಕ್ಕೆ ಅವಕಾಶ ಕಲ್ಪಿಸಿದೆ. ಹೀಗಾಗಿ ತುಂಬಿ ತುಳುಕುತ್ತಿರುವ ಸೂಳೆಕೆರೆ ಜಲ ರಾಶಿಯಲ್ಲಿ ಸಾವಿರಾರು ಜ‌ನ ಸಂಭ್ರಮಿಸುತ್ತಿದ್ದಾರೆ.

ಸೂಳೆಕೆರೆಯಲ್ಲಿ ಮತ್ತೆ ಉಕ್ಕಿದ ಚೈತನ್ಯದ ಚಿಲುಮೆ, ಸಾರ್ವಜನಿಕರಲ್ಲಿ ಮತ್ತೆ ಮನೆ ಮಾಡಿದ ಸಂಭ್ರಮ
ಸೂಳೆಕೆರೆಯಲ್ಲಿ ಬೋಟಿಂಗ್
Edited By: ಸಾಧು ಶ್ರೀನಾಥ್​

Updated on: Dec 21, 2020 | 11:10 AM

ದಾವಣಗೆರೆ: ಐತಿಹಾಸಿಕ ಸೂಳೆಕೆರೆಯಲ್ಲಿ ಮತ್ತೆ ಚೈತನ್ಯದ ಚಿಲುಮೆ ಉಕ್ಕಿದೆ. ಕೊರೊನಾ ಸಂಕಷ್ಟದ ಬಳಿಕ ಸೂಳೆಕೆರೆಯಲ್ಲಿ ಬೋಟಿಂಗ್ ಆರಂಭವಾಗಿದೆ. ಹೀಗಾಗಿ ಸಾವಿರಾರು ಜನ ಸೂಳೆಕೆರೆ ಅಂಗಳಕ್ಕೆ ಬಂದು ಸಂಭ್ರಮಿಸುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಸೂಳೆಕೆರೆಯಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಿಂದಾಗಿ ಬೋಟಿಂಗ್, ಮೀನುಗಾರಿಕೆ ಹಾಗೂ ಪ್ರವಾಸಿಗರ ಆಗಮನಕ್ಕೆ ನಿಷೇಧ ಹೇರಲಾಗಿತ್ತು. ಆದ್ಧರಿಂದ ಇಷ್ಟು ದಿನ ಪ್ರವಾಸಿಗರಿಲ್ಲದೆ ಖಾಲಿ ಹೊಡೆಯುತ್ತಿದ್ದ ಸೂಳೆಕೆರೆ ಇಂದು ಸಾವಿರಾರು ಜನರ ಆಗಮನದಿಂದ ನೋಡುಗರ ಗಮನ ಸೆಳೆಯುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ಬಳಿಕ ಈಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಬೋಟಿಂಗ್ ಹಾಗೂ ಕೆರೆ ಸುತ್ತಾಟಕ್ಕೆ ಅವಕಾಶ ಕಲ್ಪಿಸಿದೆ. ಹೀಗಾಗಿ ತುಂಬಿ ತುಳುಕುತ್ತಿರುವ ಸೂಳೆಕೆರೆ ಜಲ ರಾಶಿಯಲ್ಲಿ ಸಾವಿರಾರು ಜ‌ನ ಸಂಭ್ರಮಿಸುತ್ತಿದ್ದಾರೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us