AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಮಠದಲ್ಲಿದೆ ಬಾಲಿವುಡ್​ ನಟ ಸುನಿಲ್​ ಶೆಟ್ಟಿ ಕಳುಹಿಸಿದ ರೋಬೋಟಿಕ್​ ಆನೆ: ಹೇಗಿದೆ ನೋಡಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ 17 ಲಕ್ಷ ರೂಪಾಯಿ ಮೌಲ್ಯದ ರೋಬೋಟಿಕ್ ಆನೆಯನ್ನು ದಾನ ಮಾಡಲಾಗಿದೆ. ಮುಂಬೈನ ಕುಪಾ ಆ್ಯಂಡ್ ಪೀಠಾ ಇಂಡಿಯಾ ಸಂಸ್ಥೆಯಿಂದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಆನೆ ಕಳುಹಿಸಿದ್ದಾರೆ. ಈ ರೋಬೋಟಿಕ್ ಆನೆಗೆ "ಉಮಾಮಹೇಶ್ವರ" ಎಂದು ನಾಮಕರಣ ಮಾಡಲಾಗಿದೆ. ಇದು ನಿಜವಾದ ಆನೆಯಂತೆ ಕಾಣುವುದು ಮತ್ತು ಕಾರ್ಯನಿರ್ವಹಿಸುವುದು ವಿಶೇಷವಾಗಿದೆ. ಕಾಡು ಪ್ರಾಣಿಗಳ ಬಳಕೆಯನ್ನು ತಪ್ಪಿಸಲು ಇದು ಒಂದು ಪರ್ಯಾಯವಾಗಿದೆ.

ದಾವಣಗೆರೆ ಮಠದಲ್ಲಿದೆ ಬಾಲಿವುಡ್​ ನಟ ಸುನಿಲ್​ ಶೆಟ್ಟಿ ಕಳುಹಿಸಿದ ರೋಬೋಟಿಕ್​ ಆನೆ: ಹೇಗಿದೆ ನೋಡಿ
ರೋಬೋಟಿಕ್​ ಆನೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Feb 24, 2025 | 8:05 AM

Share

ದಾವಣಗೆರೆ, ಫೆಬ್ರವರಿ 24: ಚನ್ನಗಿರಿ (Channagiri) ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ ರೋಬೋಟಿಕ್​ ಆನೆ (Robotic Elephant) ಬಂದಿದೆ. ರವಿವಾರ (ಫೆ.24) ಶ್ರೀಮಠಕ್ಕೆ ಆಗಮಿಸಿದ ಆನೆಯನ್ನು ಸ್ವಾಮೀಜಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ರೋಬೋಟಿಕ್ ಆನೆಗೆ ಉಮಾಮಹೇಶ್ವರ ಎಂದು ನಾಮಕರಣ ಮಾಡಲಾಯಿತು. ಗ್ರಾಮಸ್ಥರೆಲ್ಲರೂ ಸೇರಿ ಆನೆಯ ಮೆರವಣಿಗೆ ಮಾಡಿದರು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ರೋಬೋಟಿಕ್ ಆನೆಯ ಪಕ್ಕದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳಲು ಜನರು ಮುಗಬಿದ್ದರು.

ಮುಂಬೈನ ಕುಪಾ ಆ್ಯಂಡ್ ಪೀಠಾ ಇಂಡಿಯಾ ಎಂಬ ಸಂಸ್ಥೆವಯಿಂದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ರೋಬೋಟಿಕ್​ ಆನೆಯನ್ನು ನೀಡಿದ್ದಾರೆ. ಈ ಸ್ಥಂಸ್ಥೆವತಿಯಿಂದ ಈಗಾಗಲೇ ರಾಜ್ಯದ ಸುತ್ತೂರು, ಯಡಿಯೂರು ಸೇರಿದಂತೆ ಮೂರು ಮಠಗಳಿಗೆ ಆನೆ ನೀಡಲಾಗಿದೆ. ಇದೀಗ ಶಿಲಾ ಮಠಕ್ಕೆ ಸಂಸ್ಥೆ ನೀಡಿದೆ.

ಇದನ್ನೂ ಓದಿ: ಕೂಲಿ ಕೆಲಸಕ್ಕೆ ಬರುವ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿದ ಶಿರಗನಹಳ್ಳಿ ರೈತ!

Robotic Elephant (1)

ರೋಬೋಟಿಕ್ ಆನೆ

ಒಂದು ರೋಬೋಟಿಕ್​ ಆನೆಗೆ 17 ಲಕ್ಷ ರೂಪಾಯಿ ತಗಲುತ್ತದೆ. ನಿಜವಾದ ಆನೆಯ ತದ್ರೂಪಿ ರೋಬೋಟಿ ಆನೆ. ರೋಬೋಟಿಕ್​ ಆನೆಯನ್ನು ಟ್ರ್ಯಾಲಿ ಮೇಲೆ ನಿಲ್ಲಿಸಲಾಗಿರುತ್ತದೆ. ಟ್ರ್ಯಾಲಿ ಮೂಲಕ ಆನೆ ಚಲಿಸುತ್ತದೆ. ರೋಬೋಟಿಕ್​ ಆನೆಯನ್ನು ರಿಮೋಟ್ ಕಂಟ್ರೋಲ್ ಮೂಲಕ ನಿಯಂತ್ರಸಲಾಗುತ್ತದೆ. ಇದರಿಂದ ಆನೆ ನಿರಂತರವಾಗಿ ಕಣ್ಣು ಪಿಳಿಕಿಸುವುದು, ಕಿವಿ ಅಲ್ಲಾಡಿಸುವುದು, ಬಾಲ ಬಿಸುತ್ತದೆ. ಕಾಡು ಪ್ರಾಣಿಗಳಿಗೆ ಹಿಂಸೆ ನೀಡುವುದು ನಿಷೇಧಿಸಲಾಗಿದೆ. ಹೀಗಾಗಿ, ಪರ್ಯಾಯ ಎಂಬಂತೆ ರೋಬೋಟಿಕ್​ ಆನೆಯನ್ನು ಶ್ರೀಮಠ ತರಿಸಿದೆ. ಯಾವುದೇ ಖರ್ಚು-ವೆಚ್ಚವಿಲ್ಲದೆ ಆನೆಯನ್ನು ಪಾಲನೆ ಮಾಡಬಹುದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 am, Mon, 24 February 25

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು