AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramotsava: ಸಮರ ಸೇನಾನಿ, ನುಡಿದಂತೆ ನಡೆ, ಸಿದ್ದನಡೆ 75; ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ

ತಮ್ಮ ಕಾಲಿಗೆ ಬೀಳುವವರು ಮತ್ತು ಮೇಲೆ ಬೀಳುವವರ ಬಗ್ಗೆ ಎಚ್ಚರವಾಗಿರಬೇಕು ಎಂದು ರಮೇಶ್ ಕುಮಾರ್ ಹೇಳಿದರು.

Siddaramotsava: ಸಮರ ಸೇನಾನಿ, ನುಡಿದಂತೆ ನಡೆ, ಸಿದ್ದನಡೆ 75; ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ
ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಕೃಷ್ಣ ಭೈರೇಗೌಡ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.
TV9 Web
| Edited By: |

Updated on:Aug 03, 2022 | 1:36 PM

Share

ದಾವಣಗೆರೆ: ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ದಾವಣಗೆರೆಯಲ್ಲಿ ನಡೆಯುತ್ತಿರುವ ‘ಸಿದ್ದರಾಮೋತ್ಸವ’ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಕುರಿತು ಪ್ರಕಟಿಸಿರುವ ಸಮರ ಸೇನಾನಿ, ನುಡಿದಂತೆ ನಡೆ, ಸಿದ್ದನಡೆ 75 ಹೆಸರಿನ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್​ ನಾಯಕ ಎಚ್​.ಕೆ.ಪಾಟೀಲ್, ಕರ್ನಾಟಕದಲ್ಲಿ ಇಷ್ಟು ಜನರು ಒಂದೆಡೆ ಸೇರಿದ್ದ ಇತಿಹಾಸವೇ ಬಹುಶಃ ಇಲ್ಲ. ಸಿದ್ದರಾಮಯ್ಯ ಅವರ ಮಾತು ಒರಟಾದರು ಹೃದಯ ಮೃದು. ಪಂಚಾಯತ್ ರಾಜ್ ವ್ಯವಸ್ಥೆ ಗಟ್ಟಿ ಮಾಡಿದವರು ಅವರು. ತಳದಿಂದ ಮೇಲ್ಮಟ್ಟಕ್ಕೆ ಪ್ಲಾನಿಂಗ್ ಆಗಬೇಕು ಎಂಬ ಕಾನೂನು ಮಾಡಿ, ಬಲಗೊಳಿಸಿದರು’ ಎಂದು ಹೇಳಿದರು.

ಶ್ರೀನಿವಾಸಪುರದ ಶಾಸಕ ರಮೇಶ್​ಕುಮಾರ್ ಮಾತನಾಡಿ, ‘ಸಿದ್ದರಾಮಯ್ಯ ನಮಗೆಲ್ಲರಿಗೂ ಸೇರಿದವರು. ತಮ್ಮ ಕಾಲಿಗೆ ಬೀಳುವವರು ಮತ್ತು ಮೇಲೆ ಬೀಳುವವರ ಬಗ್ಗೆ ಎಚ್ಚರವಾಗಿರಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಳ್ಳದವರು ದೇಶದ ಚುಕ್ಕಾಣಿ ಹಿಡಿದಿದ್ದಾರೆ. ಇವರ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು’ ಎಂದು ಕಿವಿಮಾತು ಹೇಳಿದರು. ಶಾಸಕ ಜಮೀರ್ ಅಹಮದ್ ಮಾತನಾಡಿ, ‘ಜನರ ಪ್ರೀತಿಯನ್ನು ನೋಡಿದರೆ ಹೃದಯ ತುಂಬಿ ಬರುತ್ತದೆ’ ಎಂದರು. ಮಾಜಿ ಸಚಿವ ಸತೀಶ್​ ಜಾರಕಿಹೊಳಿ​​​ ಮಾತನಾಡಿ, ಈ ಕಾರ್ಯಕ್ರಮದಿಂದ ರಾಜ್ಯದಲ್ಲಿ ದೊಡ್ಡ ಬದಲಾವಣೆ ಬರಲಿದೆ. ಕಾರ್ಯಕ್ರಮದ ಮೂಲಕ ಸಿದ್ದರಾಮಯ್ಯರಿಗೆ ಶಕ್ತಿ ತುಂಬುವ ಮೂಲಕ ನಮ್ಮ ಕನಸು ನನಸು ಮಾಡಿಕೊಳ್ಳೋಣ’ ಎಂದು ಕರೆ ನೀಡಿದರು.

ಅಮೃತ ಮಹೋತ್ಸವಕ್ಕಾಗಿ ರಾಹುಲ್ ಗಾಂಧಿ ಆಗಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್​ ಉಪಸ್ಥಿತರಿದ್ದಾರೆ.

Published On - 1:27 pm, Wed, 3 August 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್