AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಶಾಸಕ ಒತ್ತಡಕ್ಕೆ ಮಣಿದ ಸರ್ಕಾರ, ಎಸ್​ಪಿ ಅರುಣ್ ದಿಢೀರ್ ವರ್ಗಾವಣೆ

ದಾವಣಗೆರೆ ಎಸ್​​ಪಿ ಅರುಣ್ ಅವರನ್ನು ವರ್ಗಾವಣೆ ಮಾಡುವಂತೆ ಹೊನ್ನಾಳಿ ಶಾಸಕ ಡಿಜಿ ಶಾಂತನಗೌಡ ಪಟ್ಟು ಹಿಡಿದಿದ್ದರು. ಅದರಂತೆ, ಎಸ್​ಪಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ದಾವಣಗೆರೆ: ಶಾಸಕ ಒತ್ತಡಕ್ಕೆ ಮಣಿದ ಸರ್ಕಾರ, ಎಸ್​ಪಿ ಅರುಣ್ ದಿಢೀರ್ ವರ್ಗಾವಣೆ
ದಾವಣಗೆರೆ ಎಸ್​ಪಿ ಡಾ.ಕೆ.ಅರುಣ್ ವರ್ಗಾವಣೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 07, 2023 | 9:42 PM

Share

ದಾವಣಗೆರೆ, ಆಗಸ್ಟ್ 7: ಶಾಸಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರವು ದಾವಣಗೆರೆ (Davanagere) ಎಸ್​​ಪಿ ಡಾ.ಕೆ.ಅರುಣ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದೆ. ಹೊನ್ನಾಳಿ ಶಾಸಕ ಡಿಜಿ ಶಾಂತನಗೌಡ ಅವರು ಎಸ್​ಪಿಯನ್ನು ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಒತ್ತಾಯಿಸಿದ್ದರು. ಅದರಂತೆ, ಕುಲಬುರ್ಗಿ (Kalaburagi) ಪೊಲೀಸ್ ತರಬೇತಿ ಶಾಲೆ ಪ್ರಾಚಾರ್ಯರಾಗಿ ಅರುಣ್ ಅವರನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

2014 ರ ಕರ್ನಾಟಕ ಕೆಡರ್ ಐಪಿಎಸ್ ಅಧಿಕಾರಿ ಡಾ. ಅರುಣ್, ಈ ಹಿಂದೆ ಚಿತ್ರದುರ್ಗ, ವಿಜಯ‌ನಗರ, ಕಲಬುರ್ಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಎಪ್ರೀಲ್ ಅಂತ್ಯದಲ್ಲಿ ದಾವಣಗೆರೆ ಎಸ್​ಪಿಯಾಗಿ ವರ್ಗಾವಣೆಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಮತ್ತೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮ: ಬಿಜೆಪಿ ಬೆಂಬಲಿತ ಸದಸ್ಯರಿಂದ ಅಹೋರಾತ್ರಿ ಧರಣಿ

ಇತ್ತೀಚೆಗಷ್ಟೇ, ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಟಿ ಅವರನ್ನು ಬಳ್ಳಾರಿಗೆ ವರ್ಗಾವಣೆ ಮಾಡಲಾಗಿತ್ತು. ವೆಂಕಟೇಶ್ ಅವನರನ್ನು ತಮ್ಮ ಜಿಲ್ಲೆಗೆ ಡಿಸಿಯನ್ನಾಗಿ ಮಾಡಲು ಜಿಲ್ಲಾ ಉಸ್ತುವಾರಿ ಬಿ ನಾಗೇಂದ್ರ ಅವರು ಒಲವು ಹೊಂದಿದ್ದರು. ಆದರೆ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡ ಹಿನ್ನೆಲೆ ವರ್ಗಾವಣೆಗೆ ತಡೆ ನೀಡಲಾಗಿತ್ತು. ವರ್ಗಾವಣೆ ಸಂಬಂಧ ಇಂತಹ ಅನೇಕ ಘಟನೆಗಳು ನಡೆದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು