AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಡೊಣ್ಣೆಯಿಂದ ತಲೆಗೆ ಹೊಡೆದು ಸ್ವಂತ ಅಕ್ಕನನ್ನೇ ಕೊಂದ ತಮ್ಮ, ಮೂವರು ಅರೆಸ್ಟ್

ಪ್ರಭಾಕರ ತನ್ನ ಮಕ್ಕಳ ಜೊತೆ ಸೇರಿಕೊಂಡು ತನ್ನ 64 ವರ್ಷದ ಅಕ್ಕಮ್ಮ ಎಂಬ ಅಕ್ಕನನ್ನ ಡೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.

ದಾವಣಗೆರೆ: ಡೊಣ್ಣೆಯಿಂದ ತಲೆಗೆ ಹೊಡೆದು ಸ್ವಂತ ಅಕ್ಕನನ್ನೇ ಕೊಂದ ತಮ್ಮ, ಮೂವರು ಅರೆಸ್ಟ್
ಕೊಲೆಯಾದ ಮಹಿಳೆ ಮತ್ತು ಕೊಲೆ ಮಾಡಲು ಬಳಸಲಾದ ಡೊಣ್ಣೆ
ಆಯೇಷಾ ಬಾನು
|

Updated on: May 22, 2023 | 8:24 AM

Share

ದಾವಣಗೆರೆ: ಜಗತ್ತಿನಲ್ಲಿ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಮಾನವೀಯತೆ ಎಂಬುವುದೇ ಮರೆಯಾಗಿದೆ. ರಕ್ತ ಸಂಬಂಧಿಗಳು, ಒಡ ಹುಟ್ಟಿದವರೇ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಹಣ, ಆಸ್ತಿ, ಒಡವೆ, ಪ್ರೀತಿ, ಸ್ನೇಹ, ದ್ವೇಷ, ಸಣ್ಣ ಪುಟ್ಟ ಕಿರಿಕ್​ಗಳಿಗೆ ಸುಪಾರಿ ಕೊಟ್ಟು ಹತ್ಯೆ ಮಾಡಿಸಲಾಗುತ್ತಿದೆ(Murder). ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಮಗ ತಂದೆಯನ್ನೇ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈಗ ಆಸ್ತಿಗಾಗಿ ಅಕ್ಕನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ(Property Dispute).

ಮೂವರನ್ನು ಬಂಧಿಸಿದ ಪೊಲೀಸ್

ದಾವಣಗೆರೆ ಜಿಲ್ಲೆಯ ‌ಚನ್ನಗಿರಿ ತಾಲೂಕಿನ ಗುಳ್ಳೇಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಅಕ್ಕ-ತಮ್ಮನ ನಡುವೆ ಜಗಳ ನಡೆದಿದೆ. ಈ ವೇಳೆ ಪ್ರಭಾಕರ ತನ್ನ ಮಕ್ಕಳ ಜೊತೆ ಸೇರಿಕೊಂಡು ತನ್ನ 64 ವರ್ಷದ ಅಕ್ಕಮ್ಮ ಎಂಬ ಅಕ್ಕನನ್ನ ಡೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಪ್ರಭಾಕರ, ಆತನ ಪುತ್ರ ದಿಲೀಪ ಹಾಗೂ ಪುತ್ರಿ ತ್ರಿವೇಣಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಮಗನಿಂದಲೇ ತಂದೆ ಹತ್ಯೆಗೆ ಸುಫಾರಿ ಪ್ರಕರಣ; ಚಾರ್ಜ್ ಶೀಟ್​ನಲ್ಲಿ ಬಯಲಾಯ್ತು ಕಾರಣ 

ಅಕ್ಕನ ಮೇಲೆಯೇ ತಮ್ಮನಿಂದ ಹಲ್ಲೆ

ಎರಡು ಕುಟುಂಬಗಳ ನಡುವೆ ಕಳೆದ 15 ವರ್ಷಗಳಿಂದ ಜಮೀನಿನ ವಿಚಾರಕ್ಕಾಗಿ ಗಲಾಟೆ ಇತ್ತು. ಅಕ್ಕಮ್ಮ ಹಾಗೂ ಸಹೋದರ ಪ್ರಭಾಕರ ಅವರ ಜಮೀನು ವಿವಾದ ಸದ್ಯ ಈಗ ಕೋರ್ಟ್​ನಲ್ಲಿದೆ. ಅಕ್ಕಮ್ಮ ಕೋರ್ಟ್​ನ ಅನುಮತಿ ಪಡೆದು ಜಮೀನು ಅಳತೆ ಮಾಡಲು ಸರ್ವೇಯರ್ ‌ಜೊತೆ ಜಮೀನಿಗೆ ಬಂದಿದ್ದರು. ಸರ್ವೇಯರ್ ಜಮೀನು ಅಳತೆ ಮಾಡಲು ಬಂದಾಗ ನಮ್ಮ ಜಮೀನು ಅಳತೆ ಮಾಡಲು ನೀವು ಯಾರು ಅಂತಾ ದಿಲೀಪ್ ಅಕ್ಕಮ್ಮನ ಮೇಲೆ ಕೊಡಗೋಲಿನಿಂದ ದಾಳಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿಯೇ ಇದ್ದ ಪ್ರಭಾಕರ ಡೊಣ್ಣೆಯಿಂದ ಅಕ್ಕಮ್ಮನ ತಲೆಗೆ ಹೊಡೆದಿದ್ದಾನೆ. ಈ ವೇಳೆ ಕುಸಿದುಬಿದ್ದ ಅಕ್ಕಮ್ಮ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪ್ರಭಾಕರ್​, ಪೊಲೀಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​