AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಮದುವೆಯಾಗಲ್ಲ ಅಂತ ಹಠ ಹಿಡಿದ ಯುವತಿ ಗ್ರಾಮಕ್ಕೆ ಬಂತು ಬಸ್; ಗ್ರಾಮಸ್ಥರು ಫುಲ್ ಖುಷ್

ಕಳೆದ ಒಂದು ವಾರದ ಹಿಂದೆ ಪಿಎಂ ಹಾಗೂ ಸಿಎಂಗೆ ಪತ್ರ ಬರೆದು ಗಮನ ಸೆಳೆದ ಬಿಂದು ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿತ್ತು. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸ್ವತಹ ಗ್ರಾಮಕ್ಕೆ ನಡೆದುಕೊಂಡು ಹೋಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರು.

ದಾವಣಗೆರೆ: ಮದುವೆಯಾಗಲ್ಲ ಅಂತ ಹಠ ಹಿಡಿದ ಯುವತಿ ಗ್ರಾಮಕ್ಕೆ ಬಂತು ಬಸ್; ಗ್ರಾಮಸ್ಥರು ಫುಲ್ ಖುಷ್
ರಸ್ತೆ ದುರಸ್ತಿ ಆಗುತ್ತಿದೆ, ಗ್ರಾಮಕ್ಕೆ ಬಸ್​ ಸಂಚಾರ ಆರಂಭವಾಗಿದೆ
TV9 Web
| Edited By: sandhya thejappa|

Updated on: Sep 23, 2021 | 9:30 AM

Share

ದಾವಣಗೆರೆ: ನಮ್ಮೂರಿಗೆ ರಸ್ತೆ ಇಲ್ಲಾ, ಬಸ್ಸು ಇಲ್ಲಾ. ನಮ್ಮೂರಿಗೆ ಯಾರು ಹೆಣ್ಣು ಕೊಡಲ್ಲ, ಯಾರು ಹೆಣ್ಣನ್ನು ತೆಗೆದುಕೊಳ್ಳಲ್ಲ. ನಮ್ಮೂರಿಗೆ ರಸ್ತೆ ಆಗುವ ತನಕ ನಾನು ಮದುವೆನೇ ಆಗಲ್ಲ ಅಂತ ಹಠ ಹಿಡಿದಿದ್ದ ಯುವತಿಯ ಆಸೆ ಕೊನೆಗೂ ಈಡೇರಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ರಾಂಪುರ ಗ್ರಾಮದ ಬಿಂದು ಎಂಬ ಯುವತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ವಿಭಿನ್ನ ಹೋರಾಟಕ್ಕೆ ಮುಂದಾಗಿದ್ದಳು. ಹೀಗೆ ಹಠಕ್ಕೆ ಬಿದ್ದ ಯುವತಿ ಕೊನೆಗೂ ಅಂದುಕೊಂಡಿದ್ದು ಸಾಧಿಸಿದ್ದಾಳೆ.

ಕಳೆದ ಒಂದು ವಾರದ ಹಿಂದೆ ಪಿಎಂ ಹಾಗೂ ಸಿಎಂಗೆ ಪತ್ರ ಬರೆದು ಗಮನ ಸೆಳೆದ ಬಿಂದು ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿತ್ತು. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸ್ವತಹ ಗ್ರಾಮಕ್ಕೆ ನಡೆದುಕೊಂಡು ಹೋಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರು. ಜೊತೆಗೆ ರಸ್ತೆ ಕಾಮಗಾರಿ ಆರಂಭಿಸುವ ಬಗ್ಗೆ ಭರವಸೆ ನೀಡಿದ್ದರು. ಜಿಲ್ಲಾಧಿಕಾರಿಗಳು ನೀಡಿದ ಭರವಸೆಯಂತೆ ಮರುದಿನವೇ ರಸ್ತೆ ಕಾಮಗಾರಿ ಆರಂಭವಾಗಿತ್ತು.

ರಸ್ತೆ ದುರಸ್ತಿ ಆಗಿದೆ. ಇನ್ನೂ ಡಾಂಬರ್ ಆಗಬೇಕಿದೆ. ಆದರೆ ಈಗ ಮಾಡಿದ ದುರಸ್ತಿಯಿಂದ ಬಸ್ ಸಂಚಾರ ಆರಂಭಿಸಬಹುದು ಎಂದು ಅರಿತ ಜಿಲ್ಲಾಧಿಕಾರಿ ಅವರು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸಿದ್ದಾರೆ. ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಹೊತ್ತು ರಾಂಪುರ ಗ್ರಾಮದಿಂದ ಜಿಲ್ಲಾ ಕೇಂದ್ರವಾದ ದಾವಣಗೆರೆಗೆ ಬಸ್ ಸಂಚಾರ ಶುರುವಾಗಿದ್ದು, ಗ್ರಾಮಸ್ಥರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು

‘ನಾನು ದುರ್ಬಲರು..ಬಡವರ ತಂದೆ‘-ರಾಕೇಶ್​ ಟಿಕಾಯತ್​ಗೆ ತಿರುಗೇಟು ನೀಡಿದ ಅಸಾದುದ್ದೀನ್​ ಓವೈಸಿ

(Bus start to the village has begun at Davanagere)

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್