AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಮದುವೆಯಾಗಲ್ಲ ಅಂತ ಹಠ ಹಿಡಿದ ಯುವತಿ ಗ್ರಾಮಕ್ಕೆ ಬಂತು ಬಸ್; ಗ್ರಾಮಸ್ಥರು ಫುಲ್ ಖುಷ್

ಕಳೆದ ಒಂದು ವಾರದ ಹಿಂದೆ ಪಿಎಂ ಹಾಗೂ ಸಿಎಂಗೆ ಪತ್ರ ಬರೆದು ಗಮನ ಸೆಳೆದ ಬಿಂದು ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿತ್ತು. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸ್ವತಹ ಗ್ರಾಮಕ್ಕೆ ನಡೆದುಕೊಂಡು ಹೋಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರು.

ದಾವಣಗೆರೆ: ಮದುವೆಯಾಗಲ್ಲ ಅಂತ ಹಠ ಹಿಡಿದ ಯುವತಿ ಗ್ರಾಮಕ್ಕೆ ಬಂತು ಬಸ್; ಗ್ರಾಮಸ್ಥರು ಫುಲ್ ಖುಷ್
ರಸ್ತೆ ದುರಸ್ತಿ ಆಗುತ್ತಿದೆ, ಗ್ರಾಮಕ್ಕೆ ಬಸ್​ ಸಂಚಾರ ಆರಂಭವಾಗಿದೆ
TV9 Web
| Edited By: |

Updated on: Sep 23, 2021 | 9:30 AM

Share

ದಾವಣಗೆರೆ: ನಮ್ಮೂರಿಗೆ ರಸ್ತೆ ಇಲ್ಲಾ, ಬಸ್ಸು ಇಲ್ಲಾ. ನಮ್ಮೂರಿಗೆ ಯಾರು ಹೆಣ್ಣು ಕೊಡಲ್ಲ, ಯಾರು ಹೆಣ್ಣನ್ನು ತೆಗೆದುಕೊಳ್ಳಲ್ಲ. ನಮ್ಮೂರಿಗೆ ರಸ್ತೆ ಆಗುವ ತನಕ ನಾನು ಮದುವೆನೇ ಆಗಲ್ಲ ಅಂತ ಹಠ ಹಿಡಿದಿದ್ದ ಯುವತಿಯ ಆಸೆ ಕೊನೆಗೂ ಈಡೇರಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ರಾಂಪುರ ಗ್ರಾಮದ ಬಿಂದು ಎಂಬ ಯುವತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ವಿಭಿನ್ನ ಹೋರಾಟಕ್ಕೆ ಮುಂದಾಗಿದ್ದಳು. ಹೀಗೆ ಹಠಕ್ಕೆ ಬಿದ್ದ ಯುವತಿ ಕೊನೆಗೂ ಅಂದುಕೊಂಡಿದ್ದು ಸಾಧಿಸಿದ್ದಾಳೆ.

ಕಳೆದ ಒಂದು ವಾರದ ಹಿಂದೆ ಪಿಎಂ ಹಾಗೂ ಸಿಎಂಗೆ ಪತ್ರ ಬರೆದು ಗಮನ ಸೆಳೆದ ಬಿಂದು ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿತ್ತು. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸ್ವತಹ ಗ್ರಾಮಕ್ಕೆ ನಡೆದುಕೊಂಡು ಹೋಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರು. ಜೊತೆಗೆ ರಸ್ತೆ ಕಾಮಗಾರಿ ಆರಂಭಿಸುವ ಬಗ್ಗೆ ಭರವಸೆ ನೀಡಿದ್ದರು. ಜಿಲ್ಲಾಧಿಕಾರಿಗಳು ನೀಡಿದ ಭರವಸೆಯಂತೆ ಮರುದಿನವೇ ರಸ್ತೆ ಕಾಮಗಾರಿ ಆರಂಭವಾಗಿತ್ತು.

ರಸ್ತೆ ದುರಸ್ತಿ ಆಗಿದೆ. ಇನ್ನೂ ಡಾಂಬರ್ ಆಗಬೇಕಿದೆ. ಆದರೆ ಈಗ ಮಾಡಿದ ದುರಸ್ತಿಯಿಂದ ಬಸ್ ಸಂಚಾರ ಆರಂಭಿಸಬಹುದು ಎಂದು ಅರಿತ ಜಿಲ್ಲಾಧಿಕಾರಿ ಅವರು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸಿದ್ದಾರೆ. ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಹೊತ್ತು ರಾಂಪುರ ಗ್ರಾಮದಿಂದ ಜಿಲ್ಲಾ ಕೇಂದ್ರವಾದ ದಾವಣಗೆರೆಗೆ ಬಸ್ ಸಂಚಾರ ಶುರುವಾಗಿದ್ದು, ಗ್ರಾಮಸ್ಥರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು

‘ನಾನು ದುರ್ಬಲರು..ಬಡವರ ತಂದೆ‘-ರಾಕೇಶ್​ ಟಿಕಾಯತ್​ಗೆ ತಿರುಗೇಟು ನೀಡಿದ ಅಸಾದುದ್ದೀನ್​ ಓವೈಸಿ

(Bus start to the village has begun at Davanagere)

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ