AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಮದುವೆಯಾಗಲ್ಲ ಅಂತ ಹಠ ಹಿಡಿದ ಯುವತಿ ಗ್ರಾಮಕ್ಕೆ ಬಂತು ಬಸ್; ಗ್ರಾಮಸ್ಥರು ಫುಲ್ ಖುಷ್

ಕಳೆದ ಒಂದು ವಾರದ ಹಿಂದೆ ಪಿಎಂ ಹಾಗೂ ಸಿಎಂಗೆ ಪತ್ರ ಬರೆದು ಗಮನ ಸೆಳೆದ ಬಿಂದು ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿತ್ತು. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸ್ವತಹ ಗ್ರಾಮಕ್ಕೆ ನಡೆದುಕೊಂಡು ಹೋಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರು.

ದಾವಣಗೆರೆ: ಮದುವೆಯಾಗಲ್ಲ ಅಂತ ಹಠ ಹಿಡಿದ ಯುವತಿ ಗ್ರಾಮಕ್ಕೆ ಬಂತು ಬಸ್; ಗ್ರಾಮಸ್ಥರು ಫುಲ್ ಖುಷ್
ರಸ್ತೆ ದುರಸ್ತಿ ಆಗುತ್ತಿದೆ, ಗ್ರಾಮಕ್ಕೆ ಬಸ್​ ಸಂಚಾರ ಆರಂಭವಾಗಿದೆ
TV9 Web
| Edited By: sandhya thejappa|

Updated on: Sep 23, 2021 | 9:30 AM

Share

ದಾವಣಗೆರೆ: ನಮ್ಮೂರಿಗೆ ರಸ್ತೆ ಇಲ್ಲಾ, ಬಸ್ಸು ಇಲ್ಲಾ. ನಮ್ಮೂರಿಗೆ ಯಾರು ಹೆಣ್ಣು ಕೊಡಲ್ಲ, ಯಾರು ಹೆಣ್ಣನ್ನು ತೆಗೆದುಕೊಳ್ಳಲ್ಲ. ನಮ್ಮೂರಿಗೆ ರಸ್ತೆ ಆಗುವ ತನಕ ನಾನು ಮದುವೆನೇ ಆಗಲ್ಲ ಅಂತ ಹಠ ಹಿಡಿದಿದ್ದ ಯುವತಿಯ ಆಸೆ ಕೊನೆಗೂ ಈಡೇರಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ರಾಂಪುರ ಗ್ರಾಮದ ಬಿಂದು ಎಂಬ ಯುವತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ವಿಭಿನ್ನ ಹೋರಾಟಕ್ಕೆ ಮುಂದಾಗಿದ್ದಳು. ಹೀಗೆ ಹಠಕ್ಕೆ ಬಿದ್ದ ಯುವತಿ ಕೊನೆಗೂ ಅಂದುಕೊಂಡಿದ್ದು ಸಾಧಿಸಿದ್ದಾಳೆ.

ಕಳೆದ ಒಂದು ವಾರದ ಹಿಂದೆ ಪಿಎಂ ಹಾಗೂ ಸಿಎಂಗೆ ಪತ್ರ ಬರೆದು ಗಮನ ಸೆಳೆದ ಬಿಂದು ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿತ್ತು. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸ್ವತಹ ಗ್ರಾಮಕ್ಕೆ ನಡೆದುಕೊಂಡು ಹೋಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರು. ಜೊತೆಗೆ ರಸ್ತೆ ಕಾಮಗಾರಿ ಆರಂಭಿಸುವ ಬಗ್ಗೆ ಭರವಸೆ ನೀಡಿದ್ದರು. ಜಿಲ್ಲಾಧಿಕಾರಿಗಳು ನೀಡಿದ ಭರವಸೆಯಂತೆ ಮರುದಿನವೇ ರಸ್ತೆ ಕಾಮಗಾರಿ ಆರಂಭವಾಗಿತ್ತು.

ರಸ್ತೆ ದುರಸ್ತಿ ಆಗಿದೆ. ಇನ್ನೂ ಡಾಂಬರ್ ಆಗಬೇಕಿದೆ. ಆದರೆ ಈಗ ಮಾಡಿದ ದುರಸ್ತಿಯಿಂದ ಬಸ್ ಸಂಚಾರ ಆರಂಭಿಸಬಹುದು ಎಂದು ಅರಿತ ಜಿಲ್ಲಾಧಿಕಾರಿ ಅವರು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸಿದ್ದಾರೆ. ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಹೊತ್ತು ರಾಂಪುರ ಗ್ರಾಮದಿಂದ ಜಿಲ್ಲಾ ಕೇಂದ್ರವಾದ ದಾವಣಗೆರೆಗೆ ಬಸ್ ಸಂಚಾರ ಶುರುವಾಗಿದ್ದು, ಗ್ರಾಮಸ್ಥರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು

‘ನಾನು ದುರ್ಬಲರು..ಬಡವರ ತಂದೆ‘-ರಾಕೇಶ್​ ಟಿಕಾಯತ್​ಗೆ ತಿರುಗೇಟು ನೀಡಿದ ಅಸಾದುದ್ದೀನ್​ ಓವೈಸಿ

(Bus start to the village has begun at Davanagere)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು