AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರೇಣುಕಾಚಾರ್ಯ ಮೇಲಿದ್ದ ಕೇಸ್​ಗಳು ಖುಲಾಸೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಶಾಸಕ

ಕೋರ್ಟ್​ನಲ್ಲಿ ಕೆಲ ಅಧಿಕಾರಿಗಳೇ ಉಲ್ಟಾ ಹೇಳಿಕೆ ನೀಡಿದ್ದು, ಇನ್ನೂ ಕೆಲ ಪ್ರಕರಣಗಳಲ್ಲಿ ಸಾಕ್ಷ್ಯಾಧಾರದ ಕೊರೆತೆ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ನ್ಯಾಯ ಮೂರ್ತಿ ಜೆ.ಪ್ರೀತ್ ಪ್ರಕರಣಗಳನ್ನ ಖುಲಾಸೆ ಗೊಳಿಸಿ ಆದೇಶ ಹೊರಡಿಸಿದರು.

ಶಾಸಕ ರೇಣುಕಾಚಾರ್ಯ ಮೇಲಿದ್ದ ಕೇಸ್​ಗಳು ಖುಲಾಸೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಶಾಸಕ
ಎಂ.ಪಿ‌ ರೇಣುಕಾಚಾರ್ಯ
TV9 Web
| Edited By: |

Updated on: Jul 01, 2022 | 1:14 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ‌ ರೇಣುಕಾಚಾರ್ಯ ಮೇಲಿದ್ದ ಒಟ್ಟು ನಾಲ್ಕು ಕೇಸ್​ಗಳು ಖುಲಾಸೆ  ಮಾಡಿ, ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ತೀರ್ಪು ನೀಡಿದೆ. ಸದ್ಯ ಶಾಸಕ ರೇಣುಕಾಚಾರ್ಯ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. 2018 ದಾಖಲಾದ ನಾಲ್ಕು ಪ್ರಕರಣಗಳಲ್ಲಿ ಸಾಕ್ಷ್ಯಾಧಾರದ ಕೊರತೆಯಿಂದಾಗಿ ಕೇಸ್​ ಖುಲಾಸೆಯಾಗಿದೆ.

ಇದನ್ನೂ ಓದಿ: Sai Pallavi: ಸಿಂಪಲ್​ ಸೀರೆ ಧರಿಸಿ ಕಣ್ಮನ ಸೆಳೆದ ಸಾಯಿ ಪಲ್ಲವಿ; ಸ್ಟಾರ್​ ನಟಿಗೆ ಅಭಿಮಾನಿಗಳ ಲೈಕ್ಸ್​ ಸುರಿಮಳೆ

ಕೋರ್ಟ್​ನಲ್ಲಿ ಕೆಲ ಅಧಿಕಾರಿಗಳೇ ಉಲ್ಟಾ ಹೇಳಿಕೆ ನೀಡಿದ್ದು, ಇನ್ನೂ ಕೆಲ ಪ್ರಕರಣಗಳಲ್ಲಿ ಸಾಕ್ಷ್ಯಾಧಾರದ ಕೊರೆತೆ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ನ್ಯಾಯ ಮೂರ್ತಿ ಜೆ.ಪ್ರೀತ್ ಪ್ರಕರಣಗಳನ್ನ ಖುಲಾಸೆ ಗೊಳಿಸಿ ಆದೇಶ ಹೊರಡಿಸಿದರು. 2018 ಡಿಸೆಂಬರ್ 10ರಂದು ಅಕ್ರಮ ಮರಳು ಸಾಗಾಣಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಮಾಡಿದ್ದು, ಪೊಲೀಸರ ಕಾರ್ಯಕ್ಕೆ ಅಡ್ಡಿ ಪಡಿಸಿದ ಆರೋಪವನ್ನ ರೇಣುಕಾಚಾರ್ಯ ಎದುರಿಸುತ್ತಿದ್ದರು.

ಮೇ 13, 2018 ವಿಧಾನಸಭೆ ಚುನಾವಣೆ ವೇಳೆ ಮುಷ್ಠಿ ಅಕ್ಕಿ ಅಭಿಯಾನದ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿತ್ತು. ಅಕ್ರಮವಾಗಿ ಮರಳು ತುಂಬಿಕೊಂಡು ಹೋಗುವಂತೆ ಜನರಿಗೆ ಕರೆ ನೀಡಿದ್ದ ಆರೋಪವನ್ನು  ರೇಣುಕಾಚಾರ್ಯ ಎದುರಿಸುತ್ತಿದ್ದರು. ಒಟ್ಟು ನಾಲ್ಕು ಪ್ರಕರಣಗಳಲ್ಲಿ ರೇಣುಕಾಚಾರ್ಯ ಖುಲಾಸೆಯಾಗಿದೆ.

ಇದನ್ನೂ ಓದಿ: ಕರ್ನಾಟಕದ ವಿವಿಧೆಡೆ ಪೌರಕಾರ್ಮಿಕರ ಪ್ರತಿಭಟನೆ: ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು