AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಯುವಕನ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಲೆದಂಡವಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯ ಡಿವೈಎಸ್‌ಪಿ, ಸರ್ಕಲ್ ಇನ್ಸ್​ಪೆಕ್ಟರ್ ಹಾಗೂ ಎಸ್​ಐ ಅಮಾನತು ಮಾಡಲಾಗಿದೆ. ಅಮಾನತು ಹಿನ್ನೆಲೆಯಲ್ಲಿ ಮೂವರನ್ನೂ ಸೇವೆಯಿಂದ ಬಿಡುಗಡೆ ಮಾಡಿದ್ದೇವೆ ಎಂದು ಟಿವಿ9ಗೆ ಪೂರ್ವ ವಲಯದ ಐಜಿಪಿ ಡಾ.ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ:  ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್
ಚನ್ನಗಿರಿ ಪೊಲೀಸ್ ಠಾಣೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:May 27, 2024 | 3:43 PM

Share

ದಾವಣಗೆರೆ, (ಮೇ 27): ಚನ್ನಗಿರಿ ಯುವಕನ ಲಾಕಪ್​ ಡೆತ್​ ಪ್ರಕರಣಕ್ಕೆ (channagiri lockup death Case) ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅವರನ್ನು ಅಮಾನತು ಗೃಹ ಸಚಿವ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ವಶದಲ್ಲಿದ್ದ ಆದಿಲ್ ಎಂಬ ಯುವಕ ಮೇ 24 ರಂದು ಮೃತಪಟ್ಟಿದ್ದ. ಇದರಿಂದ ರೊಚ್ಚಿಗೆದ್ದ ಕುಟುಂಬಸ್ಥರು, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಆರೋಪಿಸಿ ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಠಾಣೆಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನು ಧ್ವಂಸಗೊಳಸಿದ್ದರು. ಹಾಗೇ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು.

ಇದನ್ನೂ ಓದಿ: ಚನ್ನಗಿರಿ ಲಾಕಪ್​ ಡೆತ್: ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ಸಿಐಡಿ ಹೆಗಲಿಗೆ

ಅಮಾಕರಿಗೆ ಅನಗತ್ಯ ಕಿರುಕಳ‌ ನೀಡಬೇಡಿ

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದವರ ಪೈಕಿ ಈಗಾಗಲೇ ಪೊಲೀಸರು 20ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಇನ್ನು ಈ ಬಗ್ಗೆ ನ್ನಗಿರಿ ಮುಸ್ಲಿಂ ಸಮಾಜದ ಮುಖಂಡ ಮಹ್ಮದ್ ಜಬಿವುಲ್ಲಾ ಪ್ರತಿಕ್ರಿಯಿಸಿದ್ದು, ಆರೋಪಿಗಳಿಗೆ ಶಿಕ್ಷೆ ‌ ಕೊಡಿ. ಆದ್ರೆ ಅಮಾಕರಿಗೆ ಅನಗತ್ಯ ಕಿರುಕಳ‌ ನೀಡಬೇಡಿ. ಬೇದರಿಕೆಗೆ ಬೇಸತ್ತು ಜನ ಬಹುತೇಕ ಕಡೆ ಮನೆ ಬೀಗ ಹಾಕಿಕೊಂಡು ಹೋಗುತ್ತಿದ್ದಾರೆ. ಅಮಾಯಕರಿಗೆ ಹಿಂಸೆ ಬೇಡ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕಲ್ಲು ತೂರಾಟ ಮಾಡಿದ ಆರೋಪಿಗಳ ವಿಡಿಯೋ‌ ಪೊಲೀಸರ ಬಳಿ‌ಇದೆ.‌ ಅವರನ್ನ ಗುರುತಿಸಿ ಕರೆತನ್ನಿ . ಅದು ಬಿಟ್ಟು ಪೊಲೀಸರು ಕೆಲ ಗ್ರಾಮಗಳಿಗೆ ಹೋಗಿ ಟಿ ಸ್ಟಾಲ್ ನಲ್ಲಿ ಕಟ್ಟೆ ಮೇಲೆ ಕುಳಿತವರನ್ನ ಕರೆದು ತರುತ್ತಿದ್ದಾರೆ.‌ ಇದೇ ಕಾರಣಕ್ಕೆ ಕೆಲ ಕುಟುಂಬಗಳು ಮನೆ ಬಿಟ್ಟು ಹೋಗಿವೆ. ನಮಗೆ ಪೊಲೀಸರ ಬಗ್ಗೆ ಗೌರವ ಇದೆ. ಮೇಲಾಗಿ ಘಟನೆ ನಡೆದಾಗ ನಾನು ಸ್ಥಳದಲ್ಲಿಯೇ ಇದ್ದೆ.‌ ಪೊಲೀಸರ ಜೊತೆ ಸೇರಿ ಗಲಭೆ ನಿಲ್ಲಿಸಲು ಪ್ರಯತ್ನಿಸಿದೆ ಆದ್ರೆ ಅನೀರಿಕ್ಷತವಾಗಿ ನಡೆದು ಹೋಗಿದೆ. ಇದರ ಬಗ್ಗೆ ‌ನಮಗೂ ಬೇಸರ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:41 pm, Mon, 27 May 24

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ