AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಗಿರಿ ಲಾಕಪ್​ ಡೆತ್​ ಕೇಸ್​: ಆದಿಲ್ ಅಪ್ಪ, ಚಿಕಪ್ಪ ದ್ವಂದ್ವ ಹೇಳಿಕೆ

ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್​ ಠಾಣೆ ಲಾಕಪ್​ಡೆತ್​ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಆದಿಲ್​ ಅನಾರೋಗ್ಯ, ಮೂರ್ಛೆ ರೋಗದಿಂದ ಮೃತಪಟ್ಟಿದ್ದಾನೆ ಎಂದು ಸರ್ಕಾರ ಹೇಳಿದೆ. ಇತ್ತ ಆದಿಲ್​​ ಚಿಕ್ಕಪ್ಪ ಮತ್ತು ಅಪ್ಪ ತಮ್ಮ ಪುತ್ರನ ಸಾವಿನ ಕುರಿತು ದ್ವಂದ್ವ ಹೇಳಿಕೆ ನೀಡಿದ್ದಾರೆ.

ಚನ್ನಗಿರಿ ಲಾಕಪ್​ ಡೆತ್​ ಕೇಸ್​: ಆದಿಲ್ ಅಪ್ಪ, ಚಿಕಪ್ಪ ದ್ವಂದ್ವ ಹೇಳಿಕೆ
ಚನ್ನಗಿರಿ ಪೊಲೀಸ್​ ಠಾಣೆ
TV9 Web
| Edited By: |

Updated on: May 25, 2024 | 1:42 PM

Share

ದಾವಣಗೆರೆ, ಮೇ 25: ಚನ್ನಗಿರಿ ಪೊಲೀಸ್​ ಠಾಣೆ ಲಾಕಪ್ ​ಡೆತ್​ ಪ್ರಕರಣಕ್ಕೆ (Channagiri Police Station Lockup Death Case) ಸಂಬಂಧಿಸಿದ್ದಂತೆ ಮೃತ ಆದಿಲ್​ ಅಪ್ಪ ಮತ್ತು ಚಿಕ್ಕಪ್ಪ ದ್ವಂದ್ವ ಹೇಳಿಕೆ ನೀಡಿದ್ದಾರೆ. ಮೃತ ಆದಿಲ್​ಗೆ ಮೂರ್ಛೆ ರೋಗ ಇತ್ತು. ಅದರಿಂದ ಆತ ಮೃತ ಪಟ್ಟಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಮುಖ್ಯಮಂತ್ರಿಗಳ ಹೇಳಿಕೆಗೆ ಸಂಬಂಧಿಸಿದಂತೆ ಆದಿಲ್ ಚಿಕ್ಕಪ್ಪ ಮೆಹಬೂಬ್ ಅಲಿ ದಾವಣಗೆರೆಯಲ್ಲಿ (Davangere) ಟಿವಿ9 ಜೊತೆ ಮಾತನಾಡಿ, ನನ್ನ ಪುತ್ರನ ಸಾವಿಗೆ ಪೊಲೀಸರೇ ಕಾರಣ. ಆದಿಲ್ ಬೆನ್ನಿಗೆ ಗಾಯ ಆಗಿದೆ, ಚರ್ಮ ಕೆಂಪಾಗಿರುವುದು ಕಂಡು ಬಂದಿದೆ. ನನ್ನ ಪುತ್ರ ಆದಿಲ್​ಗೆ​ ಮೂರ್ಛೆ ರೋಗ ಇಲ್ಲ ಎಂದು ಹೇಳಿದರು.

30 ವರ್ಷದಿಂದ ಆದಿಲ್​ನನ್ನು ನಾನೇ ಸಾಕಿದ್ದು, ಅವನಿಗೆ ಯಾವುದೆ ಕಾಯಿಲೆ ಇರಲಿಲ್ಲ. ವೈದ್ಯಕೀಯ ವರದಿ ಬರಲಿ, ಸತ್ಯ ಗೊತ್ತಾಗುತ್ತದೆ ಎಂದರು.

ಲೋ ಬಿಪಿಯಿಂದ​ ಸಾವು: ಆದಿಲ್ ಅಪ್ಪ

ನನ್ನ ಮಗನ ಮೈಮೇಲೆ ಯಾವುದೇ ಗಾಯಗಳಿರಲಿಲ್ಲ. ಪೊಲೀಸರ ಹಲ್ಲೆಯಿಂದ ಮೃತಪಟ್ಟಿಲ್ಲ, ಲೋ ಬಿಪಿಯಾಗಿ ಮೃತಪಟ್ಟಿದ್ದಾನೆ. ನನ್ನ ಮಗ ಆದಿಲ್​ಗೆ ಯಾವುದೇ ಮೂರ್ಛೆ ರೋಗ ಇರಲಿಲ್ಲ. ಆತನ ಸಾವಿನ ಬಗ್ಗೆ ನಮಗೆ ಯಾವುದೇ ರೀತಿ ಅನುಮಾನ ಇಲ್ಲ. ಠಾಣೆಗೆ ಕಲ್ಲು ಹೊಡೆದವರು ಯಾರು ಅನ್ನೋದು ನನಗೆ ಗೊತ್ತಿಲ್ಲ. ಸರ್ಕಾರ ನನಗೆ ಪರಿಹಾರ ಕೊಡಬೇಕು ಎಂದು ಆದಿಲ್ ತಂದೆ ಖಲೀಮುಲ್ಲಾ ಹೇಳಿದರು.

ಇದನ್ನೂ ಓದಿ: ದಾವಣಗೆರೆ ಯುವಕನ ಸಾವು ಲಾಕಪ್ ಡೆತ್ ಅಲ್ಲ, ಆದರೂ ಪೊಲೀಸರ ಅಮಾನತಿಗೆ ಸೂಚಿಸಿದ್ದೇನೆ; ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ!

ಏನಿದು ಪ್ರಕರಣ

ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್​ ಠಾಣೆ ವ್ಯಾಪ್ತಿಯ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಒಸಿ(ಮಟ್ಕಾ) ಆಡಿಸುತ್ತಿದ್ದ ಎಂದು ಶುಕ್ರವಾರ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಪೊಲೀಸರು ಠಾಣೆಗೆ ಕರೆ ತರುತ್ತಿದ್ದಂತೆ, ಆದಿಲ್​​ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ ಮೃತ ಕುಟುಂಬಸ್ಥರು ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದರು.

11 ಪೊಲೀಸರಿಗೆ ಗಾಯ, 10ಕ್ಕೂ ಹೆಚ್ಚು ವಾಹನ ಜಖಂ

ಕಲ್ಲು ತೂರಾಟದಲ್ಲಿ 11 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 10ಕ್ಕೂ ಹೆಚ್ಚು ಪೊಲೀಸ್ ವ್ಯಾನ್​ಗಳು ಜಖಂ‌ಗೊಂಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು‌ ಪ್ರಕರಣ ದಾಖಲಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ