AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ​ ರಿಂಗ್​ ರೋಡ್​​ ಕಾಮಗಾರಿಗಾಗಿ ತೆರವು ಕಾರ್ಯಾಚರಣೆ; 144 ನಿಷೇಧಾಜ್ಞೆ ಜಾರಿ, ಪಾಲಿಕೆ ಆಯುಕ್ತೆ ವಿರುದ್ಧ ಆಕ್ರೋಶ

ದಾವಣಗೆರೆ​ ರಿಂಗ್​ ರೋಡ್​​ ಕಾಮಗಾರಿ ಪೂರ್ಣಗೊಳಿಸುವ ಹಿನ್ನೆಲೆ ದಾವಣಗೆರೆ ನಗರದ ಮಾಗಾನಹಳ್ಳಿ ರಸ್ತೆಯಲ್ಲಿ ಇರುವ ರಾಮಕೃಷ್ಣ ಹೆಗಡೆ ನಗರ ತೆರವು ಕಾರ್ಯಾಚರಣೆ ಆರಂಭವಾಗಿದೆ. 144 ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಏಕಾಏಕಿ ಜೆಸಿಬಿಯಿಂದ ಮನೆ ಕೆಡವಿದ್ದರಿಂದ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಮನೆಯಲ್ಲಿರುವ ವಸ್ತುಗಳನ್ನು ತೆಗೆಯಲು ಬಿಡದೆ ಜೆಸಿಬಿಯಿಂದ‌ ಮನೆ ಕೆಡವಿದ ಆರೋಪ ಮಾಡಿ ಪಾಲಿಕೆ ಆಯುಕ್ತೆ ರೇಣುಕಾರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದಾವಣಗೆರೆ​ ರಿಂಗ್​ ರೋಡ್​​ ಕಾಮಗಾರಿಗಾಗಿ ತೆರವು ಕಾರ್ಯಾಚರಣೆ; 144 ನಿಷೇಧಾಜ್ಞೆ ಜಾರಿ, ಪಾಲಿಕೆ ಆಯುಕ್ತೆ ವಿರುದ್ಧ ಆಕ್ರೋಶ
ದಾವಣಗೆರೆ​ ರಿಂಗ್​ ರೋಡ್​​ ಕಾಮಗಾರಿಗಾಗಿ ತೆರವು ಕಾರ್ಯಾಚರಣೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Dec 02, 2023 | 10:29 AM

Share

ದಾವಣಗೆರೆ, ಡಿ.02: ದಾವಣಗೆರೆ​ ರಿಂಗ್​ ರೋಡ್​​ ಕಾಮಗಾರಿ ಪೂರ್ಣಗೊಳಿಸುವ (Davangere Ring Road) ಹಿನ್ನೆಲೆ ದಾವಣಗೆರೆ ನಗರದ ಮಾಗಾನಹಳ್ಳಿ ರಸ್ತೆಯಲ್ಲಿ ಇರುವ ರಾಮಕೃಷ್ಣ ಹೆಗಡೆ ನಗರ ತೆರವು ಕಾರ್ಯಾಚರಣೆ ಆರಂಭವಾಗಿದೆ. ನಗರದ ಹಲವು ಮನೆಗಳ ತೆರವು ಕಾರ್ಯ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಇಂದು ಬೆಳಗ್ಗೆ 5ರಿಂದ ನಾಳೆ ಸಂಜೆ 5ಗಂಟೆ ತನಕ 144 ನಿಷೇಧಾಜ್ಞೆ ಜಾರಿ (144 Section) ಮಾಡಿ ದಾವಣಗೆರೆ ಉಪ ವಿಭಾಗಾಧಿಕಾರಿ ದುರ್ಗಾಶ್ರೀ ಆದೇಶ ಹೊರಡಿಸಿದ್ದಾರೆ. ಜೆಸಿಬಿ ಮೂಲಕ ಪೊಲೀಸರ ಸಮ್ಮುಖದಲ್ಲಿ ತೆರವು ಕಾರ್ಯ ನಡೆಯುತ್ತಿದೆ. ಬಹುತೇಕ ಅಲ್ಪಸಂಖ್ಯಾತರ ಮನೆಗಳನ್ನು ತೆರವು ಮಾಡಲಾಗುತ್ತಿದೆ.

ಸುಮಾರು 419ಕ್ಕೂ ಹೆಚ್ಚು ಮನೆಗಳ ತೆರವಿಗೆ ಪ್ಲಾನ್​ ಮಾಡಿಕೊಳ್ಳಲಾಗಿದ್ದು, ಕೆಲವರಿಗೆ ಬೇರೆಡೆ ವಾಸಿಸಲು ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ. ಹಕ್ಕು ಪತ್ರ ಸಿಗದವರು ತೆರವು ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ADC ಲೋಕೇಶ್, ಎಎಸ್ ಪಿ ವಿಜಯಕುಮಾರ ಸಂತೋಷ, ಎಸಿ ದುರ್ಗಾಶ್ರೀ ನೇತ್ರತ್ವದಲ್ಲಿ‌ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪಾಲಿಕೆ ಆಯುಕ್ತೆ ರೇಣುಕಾರವರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

ಇನ್ನು ಏಕಾಏಕಿ ಜೆಸಿಬಿಯಿಂದ ಮನೆ ಕೆಡವಿದ್ದರಿಂದ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಮನೆಯಲ್ಲಿರುವ ವಸ್ತುಗಳನ್ನು ತೆಗೆಯಲು ಬಿಡದೆ ಜೆಸಿಬಿಯಿಂದ‌ ಮನೆ ಕೆಡವಿದ ಆರೋಪ ಮಾಡಿ ಪಾಲಿಕೆ ಆಯುಕ್ತೆ ರೇಣುಕಾರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಪೊಲೀಸ್, ಜೆಸಿಪಿ ತಂದು ಹೆದರಿಸಿದರೇ ನಾವು ಹೆದರಲ್ಲ. ನೀವು ಹಠ ಸಾಧಿಸುತ್ತಿದ್ದರೆ, ಹಠ ಸಾಧಿಸಿ ಏನ್ ಮಾಡ್ತೀರಾ ನೋಡೋಣ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಸ್ಥಳೀಯ ಮುಖಂಡ ಖಾದರ್ ಸಾಬ್ ಅವರು ಪಾಲಿಕೆ ಆಯುಕ್ತೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:19 am, Sat, 2 December 23

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ