AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದಲೇ ರೇಣುಕಾಚಾರ್ಯ ತಮ್ಮನ ಮಗನ ಸಾವಿನ ತನಿಖೆ: ಹೊನ್ನಾಳಿಯಲ್ಲಿ ಸ್ಪಷ್ಟಪಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

ತಲೆ‌ಕೂದಲು ಪತ್ತೆಯಾಗಿರುವುದು ಹಾಗೂ ಹಿಂಬದಿ ಸೀಟಿನಲ್ಲಿ ಶವ ಇದ್ದಿದ್ದು ಅನುಮಾನ ಮೂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪೊಲೀಸರಿಂದಲೇ ರೇಣುಕಾಚಾರ್ಯ ತಮ್ಮನ ಮಗನ ಸಾವಿನ ತನಿಖೆ: ಹೊನ್ನಾಳಿಯಲ್ಲಿ ಸ್ಪಷ್ಟಪಡಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಮನೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Nov 09, 2022 | 1:31 PM

Share

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ (Renukacharya) ತಮ್ಮನ ಮಗ ಚಂದ್ರಶೇಖರ್ (Chandrashekhar) ಸಾವಿನ ತನಿಖೆಯನ್ನು ಪೊಲೀಸರೇ ಮುಂದುವರಿಸುತ್ತಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. ಹೊನ್ನಾಳಿಯ ಶಾಸಕರ ನಿವಾಸಕ್ಕೆ ಬುಧವಾರ (ನ 9) ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮೆಲ್ಲರ ಚಂದ್ರು ನಮ್ಮನ್ನು ಬಿಟ್ಟು ಅಗಲಿದ್ದಾರೆ. ವಿಶೇಷವಾಗಿ ಅವರ‌ ತಂದೆ-ತಾಯಿಗೆ ನೋವು ಭರಿಸುವ ಶಕ್ತಿ ಸಿಗಲಿ’ ಎಂದು ಪ್ರಾರ್ಥಿಸಿದರು.

ಚಂದ್ರು ಅವರನ್ನು ಅವರ ಕುಟುಂಬ ಬಹುವಾಗಿ ನೆಚ್ಚಿಕೊಂಡಿತ್ತು. ಸಿವಿಲ್ ಎಂಜಿನಿಯರಿಂಗ್ ಓದಿದ್ದರೂ ದೊಡ್ಡಪ್ಪನಿಗೆ ಸಹಾಯ ಮಾಡಬೇಕೆಂದು ಅವರು ಹೊನ್ನಾಳಿಯಲ್ಲಿಯೇ ಉಳಿದುಕೊಂಡಿದ್ದರು. ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತಿದ್ದರು. ಈ ಸಾವು ರೇಣುಕಾಚಾರ್ಯ ಅವರಿಗೆ ಆಘಾತ ತಂದೊಡ್ಡಿದೆ. ನಾನು ಫೋನ್ ಮೂಲಕ ಅವರಿಗೆ ಸಮಾಧಾನ ಮಾಡಲು ಯತ್ನಿಸಿದೆ. ಆದರೆ ಮನಸ್ಸು ತಡೀಯಲಿಲ್ಲ. ಹೀಗಾಗಿ ಬಂದಿದ್ದೇನೆ ಎಂದು ನುಡಿದರು.

ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತನಿಖೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ನಿರ್ಣಯಕ್ಕೆ ಬರಲು ಆಗುವುದಿಲ್ಲ. ಘಟನಾ ಸ್ಥಳದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಸಾಧ್ಯತೆಯೂ ಇದೆ. ತಲೆ‌ಕೂದಲು ಪತ್ತೆಯಾಗಿರುವುದು ಹಾಗೂ ಹಿಂಬದಿ ಸೀಟಿನಲ್ಲಿ ಶವ ಇದ್ದಿದ್ದು ಅನುಮಾನ ಮೂಡಿಸಿದೆ ಎಂದರು.

ಕಾರಿನ ಗಾಜು ಒಡೆದಿರುವ ರೀತಿಯೂ ಹಲವು ಅನುಮಾನಗಳಿಗೆ ಕಾರಣವಾಗಿದೆ. ತನಿಖಾಧಿಕಾರಿಗಳು ತನಿಖೆ ಮುಂದುವರಿಸಿದೆ. ಪೋಸ್ಟ್​ಮಾರ್ಟಂ ಹಾಗೂ ವಿಧಿವಿಜ್ಞಾನ (ಎಫ್​ಎಸ್​ಎಲ್) ತಜ್ಞರ ವರದಿಯ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದರು. ಚಂದ್ರು ಅವರು ಗೌರಿಗದ್ದೆಗೆ ಹೊರಟ ನಂತರ ಕಾರು ಪತ್ತೆಯಾಗುವವರೆಗೆ ಏನೆಲ್ಲಾ ನಡೆದಿದೆ ಎನ್ನುವ ಬಗ್ಗೆ ಹಲವು ಆಯಾಮಗಳಲ್ಲಿ ತನಿಖೆ ನಡೆದಿದೆ. ಅನಿವಾರ್ಯವಾದರೆ ಸಿಐಡಿ ತನಿಖೆಯ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟಪಡಿಸಲಾಗುವುದು ಎಂದು ಅವರು ತಿಳಿಸಿದರು.

ಸಚಿವ ಭೈರತಿ ಬಸವರಾಜ ಆಡಿಯೊ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದಾವಣಗೆರೆ ಪಾಲಿಕೆಯ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಅವರೇ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ. ಅನಂತರವಷ್ಟೇ ಯಾರು ತಪ್ಪು ಮಾಡಿದ್ದಾರೆ ಎಂಬುದು ಸ್ಪಷ್ಟವಾಗಲಿದೆ ಎಂದಿದ್ದರು.

ಹಿಂದೂ ಪದದ ಬಗ್ಗೆ ಕಾಂಗ್ರೆಸ್ ಶಾಸಕ ಜಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೋ ಪುಸ್ತಕ ನೋಡಿಕೊಂಡು ಹೇಳಿಕೆ ಕೊಡುವುದಲ್ಲ. ವಿಕಿಪಿಡಿಯಾದ ವಿಶ್ವಾಸಾರ್ಹತೆ ಎಷ್ಟಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ವಿಕಿಪಿಡಿಯಾ ಮೇಲೆ ಸಾಕಷ್ಟು ಪ್ರಕರಣಗಳು ಮತ್ತು ಆರೋಪಗಳಿವೆ. ವಿಕಿಪಿಡಿಯಾ ಮುಖ್ಯಸ್ಥ ಈಗಾಗಲೇ ಜೈಲಿನಲ್ಲಿದ್ದು ಬಂದವನು. ಅಂಥವರ ವಿಚಾರ ನಂಬಿ ಪ್ರತಿಪಾದಿಸುತ್ತಾರೆ ಅಂದರೆ ಏನು ಅರ್ಥ? ಈ ಬಗ್ಗೆ ಕಾಂಗ್ರೆಸ್ ಪಕ್ಷವು ತನ್ನ ನಿಲುವನ್ನು ಸ್ಪಷ್ಟವಾಗಿ ತಿಳಿಸಬೇಕು. ಜಾರಕಿಹೊಳಿ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಏಕೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಆಗ್ರಹಿಸಿದರು.

Published On - 1:31 pm, Wed, 9 November 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?