AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ಬಿಜೆಪಿ ಶಕ್ತಿ ಪ್ರದರ್ಶನ, ಜನಸಂಕಲ್ಪ ಸಮಾವೇಶಕ್ಕೆ ಸಿದ್ಧವಾಯ್ತು ಬೃಹತ್ ವೇದಿಕೆ

ಇಂದು ಜಗಳೂರಿನ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಜನ ಸಂಕಲ್ಪ ಕಾರ್ಯಕ್ರಮಕ್ಕೆ 35 ಸಾವಿರ ಜನ ಕೂರಲು ಬೇಕಾಗುವಂತಹ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.

ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ಬಿಜೆಪಿ ಶಕ್ತಿ ಪ್ರದರ್ಶನ, ಜನಸಂಕಲ್ಪ ಸಮಾವೇಶಕ್ಕೆ ಸಿದ್ಧವಾಯ್ತು ಬೃಹತ್ ವೇದಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Nov 23, 2022 | 7:04 AM

Share

ದಾವಣಗೆರೆ: ಬಿಜೆಪಿಯ(BJP Karnataka) ಭದ್ರಕೋಟೆ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯ ಜಗಳೂರು & ಹರಿಹರದಲ್ಲಿ ಇಂದು ಬಿಜೆಪಿ ಸಂಕಲ್ಪ ಯಾತ್ರೆ(Jana Sankalpa Yatra) ಕೈಗೊಂಡಿದೆ. ಇಂದು ಬೆಳಿಗ್ಗೆ 11.15ಕ್ಕೆ ಜಗಳೂರಲ್ಲಿ ಜನ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಧ್ಯಾಹ್ನ 2.30ಕ್ಕೆ ಹರಿಹರದಲ್ಲಿ ಜನ ಸಂಕಲ್ಪ ಸಭೆ ಇರಲಿದೆ. ಯಾತ್ರೆಯಲ್ಲಿ ಸಿಎಂ ಬಸವರಾಜ್​ ಬೊಮ್ಮಾಯಿ(Basavaraj Bommai), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ಸೇರಿದಂತೆ ಪಕ್ಷದ ಹಿರಿಯ‌ ಮುಖಂಡರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮಕ್ಕೆ ಸಿದ್ಧವಾದ ಬೃಹತ್ ವೇದಿಕೆ

ಇಂದು ಜಗಳೂರಿನ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಜನ ಸಂಕಲ್ಪ ಕಾರ್ಯಕ್ರಮಕ್ಕೆ 35 ಸಾವಿರ ಜನ ಕೂರಲು ಬೇಕಾಗುವಂತಹ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಿಎಂ ಸಿದ್ದೇಶ್ವರ, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಚಳ್ಳಕೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ, ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಹೊಣೆಯನ್ನು ನಾನೇ ಹೊರುತ್ತೇನೆ: ಸಿಎಂ ಬೊಮ್ಮಾಯಿ

ಇನ್ನು ಮುಂಬರುವ ವಿಧಾನ ಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆಗೆ ಸೆಡ್ಡು ಹೊಡೆದು ರಾಜ್ಯದಾದ್ಯಂತ ಜನ ಸಂಕಲ್ಪ ಯಾತ್ರೆ ಮಾಡಲು ತೀರ್ಮಾನಿಸಿದ್ದು ಕಳೆದ ತಿಂಗಳಿಂದ ಈಗಾಗಲೇ ರಾಜ್ಯದಾದ್ಯಂತ ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆಯ ಮೂಲಕ ತಮ್ಮ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಜನತೆಯ ಮುಂದಿಡುತ್ತಿದೆ.

ಹೆಲಿಕಾಪ್ಟರ್ ಮೂಲಕ ಇಂದು 11.15ಕ್ಕೆ ಜಗಳೂರಿಗೆ ಸಿಎಂ ಆಗಮಿಸಲಿದ್ದಾರೆ. ಜಗಳೂರಿನಲ್ಲಿ 11.15 ರಿಂದ 1.30ರವರೆಗೆ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿ ಬಳಿಕ ಜಗಳೂರಿನಿಂದ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್ ಗೆ ತೆರಳಿ ನಂತರ ರಸ್ತೆ ಮೂಲಕ ಮಧ್ಯಾಹ್ನ 2.25ಕ್ಕೆ ಹರಿಹರಕ್ಕೆ ಹಾರಲಿದ್ದಾರೆ.

ನವೆಂಬರ್ 25 ರಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಪ್ರಶಿಕ್ಷಣ ಶಿಬಿರ ಏರ್ಪಡಿಸಲಾಗಿದೆ. ತೀರ್ಥಹಳ್ಳಿ ಕ್ಷೇತ್ರಗಳಲ್ಲಿ BJP ಜನಸಂಕಲ್ಪ ಯಾತ್ರೆ ಇರುತ್ತೆ. ಹಾಗೂ ನವೆಂಬರ್ 27 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಲ್ಲಿ ಜನ ಸಂಕಲ್ಪ ಯಾತ್ರೆ ನಡೆಯಲಿದೆ.

Published On - 7:04 am, Wed, 23 November 22

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್