AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ನಡುವೆ ಇಂದು ದಾವಣಗೆರೆಯಲ್ಲಿ 3 ವಿಐಪಿ ಮದುವೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

ಇಂದು (ನವೆಂಬರ್​ 29) 11.30ಕ್ಕೆ ಉದ್ಯಮಿ ಕಾಸಲ್ ನಾಗರಾಜ್ ಅವರ ಸಹೋದರನ ಪುತ್ರ ವೈಭವ್ ವಿವಾಹ, 12 ಗಂಟೆಗೆ  ಜವಳಿ ಉದ್ಯಮಿ ಬಿಎಸ್ ಚನ್ನಬಸಪ್ಪ ಸನ್ಸ್ ಮಾಲೀಕ ಬಿಸಿ ಚಂದ್ರಶೇಖರ ಪುತ್ರ ವಿವೇಕ್ ಮದುವೆ, ನಂತರ 12.30 ಕ್ಕೆ ಉಮಾ ದೇವರಿಗಿರಿಮಠ ಅವರ ಪುತ್ರಿ ಮೇಘನಾ ವಿವಾಹದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ಕೊರೊನಾ ಭೀತಿ ನಡುವೆ ಇಂದು ದಾವಣಗೆರೆಯಲ್ಲಿ 3 ವಿಐಪಿ ಮದುವೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 29, 2021 | 7:43 AM

Share

ದಾವಣಗೆರೆ: ರಾಜ್ಯದಲ್ಲೂ ಕೊರೊನಾ ರೂಪಾಂತರಿ ಒಮಿಕ್ರಾನ್ (Omicron)​ ಆತಂಕ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಗಡಿ ಭಾಗಗಳಲ್ಲಿ ಹೈ ಅಲರ್ಟ್​ ಮಾಡಲಾಗಿದೆ. ಆದರೆ ಕೊರೊನಾ (Coronavirus) ಭೀತಿ ನಡುವೆಯೂ ಈಗ ಅನೇಕ ಮದುವೆ ಸಮಾರಂಭಗಳು ಸಾಲುಗಟ್ಟಿ ನಿಂತಿವೆ. ಹೀಗಿರುವಾಗ ಇಂದು ದಾಣಗೆರೆ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭೇಟಿ ನೀಡಲಿದ್ದು, 3 ವಿಐಪಿ ಮದುವೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು (ನವೆಂಬರ್​ 29) 11.30ಕ್ಕೆ ಉದ್ಯಮಿ ಕಾಸಲ್ ನಾಗರಾಜ್ ಅವರ ಸಹೋದರನ ಪುತ್ರ ವೈಭವ್ ವಿವಾಹ, 12 ಗಂಟೆಗೆ  ಜವಳಿ ಉದ್ಯಮಿ ಬಿಎಸ್ ಚನ್ನಬಸಪ್ಪ ಸನ್ಸ್ ಮಾಲೀಕ ಬಿಸಿ ಚಂದ್ರಶೇಖರ ಪುತ್ರ ವಿವೇಕ್ ಮದುವೆ, ನಂತರ 12.30 ಕ್ಕೆ ಉಮಾ ದೇವರಿಗಿರಿಮಠ ಅವರ ಪುತ್ರಿ ಮೇಘನಾ ವಿವಾಹದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ದಾವಣಗೆರೆಯಲ್ಲಿ ನಡೆಯಲಿರುವ ಈ ಮೂರು ಮದುವೆ ಸಮಾರಂಭದಲ್ಲಿ ಭಾಗಿಯಾದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ.

ಸಿಎಂ ಬೊಮ್ಮಾಯಿ ಮಹತ್ವದ ಸಭೆ ರಾಜ್ಯದಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನ. 27 ರಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಾಲೆಗಳು, ಹಾಸ್ಟಲ್​ಗಳಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಸಂಬಂಧ ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗಳು, ಹಾಸ್ಟೆಲ್‌ಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಧಾರವಾಡ ಸೇರಿ ರಾಜ್ಯದ ಕೆಲವೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ  ಸಂಜೆ ಕೊವಿಡ್ ತಜ್ಞರು, ಅಧಿಕಾರಿಗಳ ಜತೆ ಸಭೆ ಮಾಡುತ್ತಿದ್ದೇನೆ ಎಂದು ಬೊಮ್ಮಾಯಿ ನುಡಿದಿದ್ದರು.

ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಿದ್ದರು. ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದರು. ಅಲ್ಲದೇ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಸಭೆಗೆ ಆಹ್ವಾನ ನೀಡಲಾಗಿತ್ತು.

ಇದನ್ನೂ ಓದಿ: ಕೇಂದ್ರೀಯ ವಿಹಾರ್​ ಅಪಾರ್ಟ್​ಮೆಂಟ್​ಗೆ ಭೇಟಿ ನೀಡಿ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸ ತಳಿಯ ಕೊರೊನಾ ಆತಂಕ ಹಿನ್ನೆಲೆ; ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಜೊತೆ ಸಚಿವ ಸುಧಾಕರ್ ಸಭೆ

Published On - 7:38 am, Mon, 29 November 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​