AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ನಡುವೆ ಇಂದು ದಾವಣಗೆರೆಯಲ್ಲಿ 3 ವಿಐಪಿ ಮದುವೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

ಇಂದು (ನವೆಂಬರ್​ 29) 11.30ಕ್ಕೆ ಉದ್ಯಮಿ ಕಾಸಲ್ ನಾಗರಾಜ್ ಅವರ ಸಹೋದರನ ಪುತ್ರ ವೈಭವ್ ವಿವಾಹ, 12 ಗಂಟೆಗೆ  ಜವಳಿ ಉದ್ಯಮಿ ಬಿಎಸ್ ಚನ್ನಬಸಪ್ಪ ಸನ್ಸ್ ಮಾಲೀಕ ಬಿಸಿ ಚಂದ್ರಶೇಖರ ಪುತ್ರ ವಿವೇಕ್ ಮದುವೆ, ನಂತರ 12.30 ಕ್ಕೆ ಉಮಾ ದೇವರಿಗಿರಿಮಠ ಅವರ ಪುತ್ರಿ ಮೇಘನಾ ವಿವಾಹದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ಕೊರೊನಾ ಭೀತಿ ನಡುವೆ ಇಂದು ದಾವಣಗೆರೆಯಲ್ಲಿ 3 ವಿಐಪಿ ಮದುವೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: preethi shettigar|

Updated on:Nov 29, 2021 | 7:43 AM

Share

ದಾವಣಗೆರೆ: ರಾಜ್ಯದಲ್ಲೂ ಕೊರೊನಾ ರೂಪಾಂತರಿ ಒಮಿಕ್ರಾನ್ (Omicron)​ ಆತಂಕ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಗಡಿ ಭಾಗಗಳಲ್ಲಿ ಹೈ ಅಲರ್ಟ್​ ಮಾಡಲಾಗಿದೆ. ಆದರೆ ಕೊರೊನಾ (Coronavirus) ಭೀತಿ ನಡುವೆಯೂ ಈಗ ಅನೇಕ ಮದುವೆ ಸಮಾರಂಭಗಳು ಸಾಲುಗಟ್ಟಿ ನಿಂತಿವೆ. ಹೀಗಿರುವಾಗ ಇಂದು ದಾಣಗೆರೆ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭೇಟಿ ನೀಡಲಿದ್ದು, 3 ವಿಐಪಿ ಮದುವೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು (ನವೆಂಬರ್​ 29) 11.30ಕ್ಕೆ ಉದ್ಯಮಿ ಕಾಸಲ್ ನಾಗರಾಜ್ ಅವರ ಸಹೋದರನ ಪುತ್ರ ವೈಭವ್ ವಿವಾಹ, 12 ಗಂಟೆಗೆ  ಜವಳಿ ಉದ್ಯಮಿ ಬಿಎಸ್ ಚನ್ನಬಸಪ್ಪ ಸನ್ಸ್ ಮಾಲೀಕ ಬಿಸಿ ಚಂದ್ರಶೇಖರ ಪುತ್ರ ವಿವೇಕ್ ಮದುವೆ, ನಂತರ 12.30 ಕ್ಕೆ ಉಮಾ ದೇವರಿಗಿರಿಮಠ ಅವರ ಪುತ್ರಿ ಮೇಘನಾ ವಿವಾಹದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ದಾವಣಗೆರೆಯಲ್ಲಿ ನಡೆಯಲಿರುವ ಈ ಮೂರು ಮದುವೆ ಸಮಾರಂಭದಲ್ಲಿ ಭಾಗಿಯಾದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ.

ಸಿಎಂ ಬೊಮ್ಮಾಯಿ ಮಹತ್ವದ ಸಭೆ ರಾಜ್ಯದಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನ. 27 ರಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಾಲೆಗಳು, ಹಾಸ್ಟಲ್​ಗಳಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಸಂಬಂಧ ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗಳು, ಹಾಸ್ಟೆಲ್‌ಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಧಾರವಾಡ ಸೇರಿ ರಾಜ್ಯದ ಕೆಲವೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ  ಸಂಜೆ ಕೊವಿಡ್ ತಜ್ಞರು, ಅಧಿಕಾರಿಗಳ ಜತೆ ಸಭೆ ಮಾಡುತ್ತಿದ್ದೇನೆ ಎಂದು ಬೊಮ್ಮಾಯಿ ನುಡಿದಿದ್ದರು.

ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಿದ್ದರು. ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದರು. ಅಲ್ಲದೇ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಸಭೆಗೆ ಆಹ್ವಾನ ನೀಡಲಾಗಿತ್ತು.

ಇದನ್ನೂ ಓದಿ: ಕೇಂದ್ರೀಯ ವಿಹಾರ್​ ಅಪಾರ್ಟ್​ಮೆಂಟ್​ಗೆ ಭೇಟಿ ನೀಡಿ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸ ತಳಿಯ ಕೊರೊನಾ ಆತಂಕ ಹಿನ್ನೆಲೆ; ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಜೊತೆ ಸಚಿವ ಸುಧಾಕರ್ ಸಭೆ

Published On - 7:38 am, Mon, 29 November 21

ಕೃತ್ತಿಕಾ ನಕ್ಷತ್ರದ ಪ್ರಭಾವದಿಂದಾಗಿ ಈ ದಿನ ಹಲವು ರಾಶಿಯವರಿಗೆ ಶುಭಕರ
ಕೃತ್ತಿಕಾ ನಕ್ಷತ್ರದ ಪ್ರಭಾವದಿಂದಾಗಿ ಈ ದಿನ ಹಲವು ರಾಶಿಯವರಿಗೆ ಶುಭಕರ
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ